62 ತಾಪಂ ಸ್ಥಾನ ಕಡಿತ, 4 ಜಿಪಂ ಸ್ಥಾನ ಏರಿಕೆ

ಮೈಸೂರು ಜಿಲ್ಲೆಯ ಜಿಪಂ, ತಾಪಂ ಕ್ಷೇತ್ರಗಳ ಪುನರ್‌ ವಿಂಗಡಣೆ › ಎಲ್ಲ ತಾಲೂಕಿನ ತಾಪಂ ಸ್ಥಾನ ಮೈನಸ್‌

Team Udayavani, Feb 15, 2021, 5:33 PM IST

62 ತಾಪಂ ಸ್ಥಾನ ಕಡಿತ, 4 ಜಿಪಂ ಸ್ಥಾನ ಏರಿಕೆ

ಮೈಸೂರು: ತಾಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕ್ಷೇತ್ರ ಪುನರ್‌ ವಿಂಗಡಣೆ ಮಾಡುವ ನಿಟ್ಟಿನಲ್ಲಿ ರಾಜ್ಯ ಚುನಾವಣಾ ಆಯೋಗವು ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಹೊಸದಾಗಿ ನಾಲ್ಕು ಜಿಪಂ ಸ್ಥಾನಗಳು ಹೆಚ್ಚಾಗಿದ್ದರೆ, ಜಿಲ್ಲೆಯ ಎಲ್ಲಾ ತಾಲೂಕುಗಳ ತಾಪಂ ಸ್ಥಾನಗಳು ಕಡಿತಗೊಂಡಿವೆ.

ತಾಪಂ ವ್ಯವಸ್ಥೆಯನ್ನೇ ರದ್ದುಗೊಳಿಸುವ ಬಗ್ಗೆ ಪರ-ವಿರೋಧ ಚರ್ಚೆಗಳ ಮಧ್ಯೆಯೇ ರಾಜ್ಯಚುನಾವಣಾ ಆಯೋಗವು ಜಿಪಂ, ತಾಪಂ ಚುನಾವನೆಗೆ ಸಿದ್ಧತೆ ನಡೆಸಿದೆ. ಇದರ ಭಾಗವಾಗಿ ಕ್ಷೇತ್ರಗಳ ಪುನರ್‌ ವಿಂಗಡಣೆ ಮಾಡುವಂತೆ ಜಿಲ್ಲಾಧಿಕಾರಿಗೆ ಆದೇಶಿಸಿ, ಫೆ.22ರೊಳಗೆ ಖಾತೆಗಳ ಪುನರ್‌ ವಿಂಗಡಣೆ ಹಾಗೂ ನಕ್ಷೆ ತಯಾರಿಕೆಗೆ ನಿರ್ದೇಶಿಸಿದೆ.

ಈಗಾಗಲೇ ಜಿಲ್ಲಾ ಚುನಾವಣಾ ವಿಭಾಗದಿಂದ ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಜನಸಂಖ್ಯೆ ವಿವರಗಳನ್ನು ಪಡೆದುಕೊಂಡಿದ್ದು, ಅದರ ಆಧಾರದ ಮೇಲೆ ತಾಲೂಕುವಾರು ಜಿಪಂ, ತಾಪಂ ಸ್ಥಾನಗಳನ್ನು ನಿಗದಿಪಡಿಸಿದೆ. ಅದರಂತೆ ಜಿಲ್ಲೆಯ ಜಿಲ್ಲಾ ಪಂಚಾಯ್ತಿಗೆ ನಾಲ್ಕು ಸದಸ್ಯ ಬಲವನ್ನು ಹೆಚ್ಚಿಸಿದ್ದು, 49 ಸದಸ್ಯರಿಂದ 53ಕ್ಕೆ ಹೆಚ್ಚಿಸಿದೆ. ಆದರೆ, ತಾಲೂಕು ಪಂಚಾಯ್ತಿ ಸದಸ್ಯತ್ವ ಸ್ಥಾನವನ್ನು ಇಳಿಕೆ ಮಾಡಲಾಗಿದ್ದು, 187 ಸದಸ್ಯರಿಂದ 125ಕ್ಕೆ ಇಳಿಸಲಾಗಿದೆ. 62 ಸ್ಥಾನವನ್ನು ಕಡಿತಮಾಡಲಾಗಿದೆ.

ಜಿಪಂ ವಿವರ: ಮೈಸೂರು ತಾಲೂಕಿನಲ್ಲಿದ್ದ 10 ಜಿಪಂ ಸ್ಥಾನಗಳಲ್ಲಿ ಮೂರು ಸ್ಥಾನಗಳು ಕಡಿಮೆಯಾಗಿದ್ದರೆ, 9 ಸ್ಥಾನಗಳನ್ನು ಹೊಂದಿದ್ದ ನಂಜನಗೂಡು ತಾಲೂಕಿನಲ್ಲಿ 1 ಸ್ಥಾನ ಸೇರ್ಪಡೆಯಾಗಿ 10 ಸ್ಥಾನಕ್ಕೇರಿದೆ.6 ಸ್ಥಾನ ಹೊಂದಿದ್ದ ತಿ.ನರಸೀಪುರ, ಹುಣಸುರು, ಕೆ.ಆರ್‌.ನಗರ, ಪಿರಿಯಾಪಟ್ಟಣ ತಾಲೂಕುಗಳಿಗೆ ತಲಾ 1 ಸ್ಥಾನ ಸೇರ್ಪಡೆಯಾಗಿದ್ದು, 7 ಸ್ಥಾನಗಳಿಗೆ ಹೆಚ್ಚಿಸಲಾಗಿದೆ. ಉಳಿದಂತೆ ಎಚ್‌.ಡಿ.ಕೋಟೆ ತಾಲೂಕನ್ನು ವಿಭಜಿಸಿ ಹೊಸದಾಗಿ ಸರಗೂರು ತಾಲೂಕು ಮಾಡಿರುವುದರಿಂದ ಎಚ್‌.ಡಿ.ಕೋಟೆಗೆ ಈ ಹಿಂದೆ ಇದ್ದ 6 ಸ್ಥಾನಗಳ ಪೈಕಿ ಒಂದು ಸ್ಥಾನ ಕಡಿತಗೊಳಿಸಲಾಗಿದೆ, ನೂತನ ತಾಲೂಕು ಸರಗೂರಿಗೆ ಹೆಚ್ಚುವರಿಯಾಗಿ 3 ಸ್ಥಾನ ನೀಡಲಾಗಿದೆ.

ಮೈಸೂರು ತಾಲೂಕಿಗೆ ನಷ್ಟ: ಮೈಸೂರು ತಾಲೂಕಿಗೆಜಿಪಂ ಹಾಗೂ ತಾಲೂಕು ಪಂಚಾಯಿತಿ ಸ್ಥಾನಗಳಲ್ಲಿ ನಷ್ಟವಾಗಿದೆ. ಮೈಸೂರು ವರ್ತುಲ ರಸ್ತೆಯ ಅಕ್ಕಪಕ್ಕದ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿ,ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುತ್ತಿರುವುದು ಹಾಗೂ ಕೆಲವು ಪ್ರದೇಶಗಳನ್ನು ನಗರಪಾಲಿಕೆ ವ್ಯಾಪ್ತಿಗೆ ಸೇರಿಸುತ್ತಿರುವುದರಿಂದ ಜಿಪಂನಲ್ಲಿ ಮೂರು ಸ್ಥಾನ ಹಾಗೂ ತಾಲೂಕು ಪಂಚಾಯಿತಿಯಲ್ಲಿ 19 ಸ್ಥಾನಕಡಿಮೆಯಾಗಿದೆ. ಮೈಸೂರು ತಾಲೂಕಿನ ತಾಪಂನ 38 ಸ್ಥಾನಗಳಲ್ಲಿ ಬರೋಬ್ಬರಿ 19 ಸ್ಥಾನಗಳು ಕಡಿಮೆಯಾಗಿದ್ದು, ಈಗ 19 ಸ್ಥಾನಗಳು ಮಾತ್ರಉಳಿದುಕೊಂಡಿವೆ. ಡಿಸೆಂಬರ್‌ನಲ್ಲಿ ನಡೆದಿದ್ದ ಗ್ರಾಪಂಚುನಾವಣೆಯಲ್ಲಿ ವರ್ತುಲ ರಸ್ತೆಯ ಅಕ್ಕಪಕದ ‌R ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸದೆ ಬರೀ 26 ಗ್ರಾಪಂಗಳಿಗಷ್ಟೇ ಚುನಾವಣೆ ನಡೆದಿತ್ತು.

ತಾಪಂ ವಿವರ: ಹೊಸ ಮಾರ್ಗಸೂಚಿ ಅನ್ವಯ ಈ ಹಿಂದೆ ಜಿಲ್ಲೆಯಲ್ಲಿದ್ದ 7 ತಾಲೂಕುಗಳಲ್ಲೂ ಬರೋಬ್ಬರಿ62 ತಾಪಂ ಸ್ಥಾನಗಳನ್ನು ಕಡಿತಗೊಳಿಸಲಾಗಿದೆ. 38 ತಾಪಂ ಸ್ಥಾನವಿದ್ದ ಮೈಸೂರು ತಾಲೂಕಿಗೆ 19 ಹಾಗೂ 34 ಸ್ಥಾನ ಹೊಂದಿರು ನಂಜನಗೂಡು ತಾಲೂಕಿಗೆ 27, 24 ಸ್ಥಾನ ಹೊಂದಿದ್ದ ತಿ.ನರಸೀಪುರ ತಾಲೂಕಿಗೆ 19, 23 ಸ್ಥಾನ ಹೊಂದಿರು ಹುಣಸೂರು ತಾಲೂಕಿಗೆ 19 ಹಾಗೂ 22 ಸ್ಥಾನ ಹೊಂದಿದ್ದ ಕೆ.ಆರ್‌. ನಗರ ಮತ್ತು ಪಿರಿಯಾಪಟ್ಟಣ ತಾಲೂಕಿಗೆ 18 ಸ್ಥಾನ ನಿಗದಿಯಾಗಿದೆ.

ಜೊತೆಗೆ 24 ಸ್ಥಾನಗಳನ್ನು ಹೊಂದಿದ್ದ ವಿಭಜಿತ ಎಚ್‌.ಡಿ. ಕೋಟೆ ತಾಲೂಕಿಗೆ 13 ಸ್ಥಾನ ನಿಗದಿ ಮಾಡಿ, ನೂತನ ಸರಗೂರು ತಾಲೂಕಿಗೆ 11 ಸ್ಥಾನ ನೀಡಲಾಗಿದೆ. ಈ ಮೂಲಕ ಜಿಲ್ಲೆಯ 07 ತಾಲೂಕುಗಳ ತಾಪಂ ಸದಸ್ಯರ ಸಂಖ್ಯೆ ಕ್ಷೀಣಿಸಿದೆ.

 

ಸತೀಶ್‌ ದೇಪುರ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.