ಮಳೆಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಜೀವಕಳೆ


Team Udayavani, Apr 2, 2022, 12:52 PM IST

Untitled-1

ಎಚ್‌.ಡಿ.ಕೋಟೆ: ಪ್ರಸಕ್ತ ಸಾಲಿನಲ್ಲಿ ಮುಂಗಾರು 2 ತಿಂಗಳು ಇರುವಂತೆಯೇ ಮಳೆ ಆರಂಭಗೊಂಡಿದ್ದು, ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿನ ಅಪಾರ ಪ್ರಮಾಣದ ಸಸ್ಯ ಸಂಪತ್ತು, ವನ್ಯಜೀವಿಗಳಿಗೆ ಜೀವಕಳೆ ಬಂದಿದೆ.

ಅಲ್ಲದೆ, ಕಾಡ್ಗಿಚ್ಚು, ದುಷ್ಕರ್ಮಿಗಳು ಹಾಕುವ ಬೆಂಕಿ ಅವಘಡಗಳಿಗೆ ಕಡಿವಾಣ ಬಿದ್ದಂತೆ ಆಗಿದೆ. ತಾಲೂಕು ನಾಗರಹೊಳೆ, ಬಂಡೀಪುರ ರಾಷ್ಟ್ರೀಯ ಉದ್ಯಾನ ವನ್ಯಜೀವಿ ಅರಣ್ಯದಿಂದ ಆವೃತ್ತವಾಗಿದೆ. ತಾಲೂಕು ಬಹುತೇಕ ಅರಣ್ಯದಿಂದ ಆವೃತ್ತವಾಗಿದೆ. ಈ ವನಸಿರಿಯ ನಾಡು ಏಷ್ಯಾಖಂಡ ದಲ್ಲಿಯೇ ಹೆಚ್ಚು ಹುಲಿಗಳನ್ನು ಹೊಂದಿರುವ ತಾಲೂಕು ಅನ್ನುವ ಕೀರ್ತಿಗೂ ಪಾತ್ರವಾಗಿದೆ.

ಆದರೆ, ಪ್ರತಿವರ್ಷ ಬೇಸಿಗೆ ಆರಂಭಗೊಳ್ಳುತ್ತಿದ್ದಂತೆಯೇ ಮರಗಳ ಸಂಘರ್ಷ ಮತ್ತು ಕಿಡಿಗೇಡಿಗಳ ದುಷ್ಕೃತ್ಯದಿಂದ ಅರಣ್ಯಕ್ಕೆ ಬೆಂಕಿ ಬಿದ್ದು ಅಪಾರ ಪ್ರಮಾಣದಲ್ಲಿ ಅರಣ್ಯ ಸಂಪತ್ತು, ವನ್ಯಜೀವಿಗಳ ಜೀವಕ್ಕೂ ಸಂಚಕಾರ ಒದಗುತ್ತಿತ್ತು. ಬೆಲೆ ಬಾಳುವ ಮರಗಳು ಬೆಂಕಿಗೆ ಆಹುತಿ ಆಗುತ್ತಿದ್ದವು.

ಕೋಟ್ಯಂತರ ರೂ. ಉಳಿಯಿತು: ಬೇಸಿಗೆ ಕಾಡ್ಗಿಚ್ಚು ತಡೆಯಲು ಅರಣ್ಯ ಇಲಾಖೆ ಪ್ರತಿವರ್ಷ ಹರಸಾಹಸ ಪಟ್ಟು ಫೈರ್‌ಲೈನ್‌ ನಿರ್ವಹಣೆ ಜೊತೆಯಲ್ಲಿ ಬೆಂಕಿ ನಂದಿಸುವ ಕಾಯಕದಲ್ಲಿ ಹಗಲಿರುಳು ಶ್ರಮಿಸುತ್ತಿತ್ತು. ಇದಕ್ಕಾಗಿ ಕೋಟ್ಯಂತರ ರೂ. ಸರ್ಕಾರದ ಅನುದಾನ ವ್ಯಯ ಮಾಡಲಾಗುತ್ತಿತ್ತು.

ಅರಣ್ಯ, ವನ್ಯಜೀವಿಗಳ ರಕ್ಷಣೆ: ಪ್ರತಿವರ್ಷ ಮೇ ಕೊನೆ ವಾರ ಇಲ್ಲವೆ ಜೂನ್‌ ತಿಂಗಳ ಮೊದಲ ವಾರದಲ್ಲಿ ಮುಂಗಾರು ಮಳೆ ಆರಂಭಗೊಳ್ಳುತ್ತಿತ್ತು. ಮಳೆ ಆರಂಭಗೊಳ್ಳುವ ತನಕ ಅರಣ್ಯ ಮತ್ತು ವನ್ಯಜೀವಿಗಳ ಜೀವ ರಕ್ಷಣೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಜೀವದ ಹಂಗು ತೊರೆದು ಕಾರ್ಯನಿರ್ವಹಿ ಸಬೇಕಾದ ಸ್ಥಿತಿ ಕೂಡ ತಲೆದೂರುತ್ತಿತ್ತು. ಆದರೆ, ಈ ಬಾರಿ ಅಂತಹ ಪರಿಸ್ಥಿತಿ ಇಲ್ಲ, ಏಕೆಂದರೆ, ಮಾ.2ನೇ ವಾರದಲ್ಲಿ ಮುಂಗಾರು ಪೂರ್ವ ಮಳೆ ಆರಂಭಗೊಂಡು ತಾಲೂಕಾದ್ಯಂತ ಅಲ್ಲಲ್ಲಿ ಎರಡು ಮೂರು ಬಾರಿ ಸುರಿದಿದೆ.

ಇದರಿಂದ ಅರಣ್ಯದಲ್ಲಿ ಹಸಿರು ಕಾಣಿಸಿಕೊಂಡಿದೆ. ಅರಣ್ಯ ಮತ್ತು ಪ್ರಾಣಿಗಳ ಸಂಚಕಾರಕ್ಕೆ ತಡೆ ಹಿಡಿದಿರುವುದು ಪ್ರಾಣಿ ಪ್ರಿಯರಲ್ಲಷ್ಟೇ ಅಲ್ಲದೆ, ಸರ್ಕಾರ ಹಾಗೂ ಅರಣ್ಯ ಇಲಾಖೆ ನೆಮ್ಮದಿ ನಿಟ್ಟುಸಿರು ಬಿಡುವಂತೆ ಆಗಿದೆ.

 

– ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.