ಭೂ ಹಗರಣದಲ್ಲಿ ನ್ಯಾಯಾಧೀಶರು ಭಾಗಿ ವಿಷಾದನೀಯ: ಶಾಸಕ ಎ.ಟಿ.ರಾಮಸ್ವಾಮಿ


Team Udayavani, Sep 27, 2021, 5:08 PM IST

ಭೂ ಹಗರಣದಲ್ಲಿ ನ್ಯಾಯಾಧೀಶರು ಭಾಗಿ ವಿಷಾದನೀಯ: ಶಾಸಕ ಎ.ಟಿ.ರಾಮಸ್ವಾಮಿ

ಪಿರಿಯಾಪಟ್ಟಣ: ನ್ಯಾಯಾಲಯಗಳಲ್ಲಿ ಪಾವಿತ್ರತೆಯನ್ನು ಕಾಪಾಡಬೇಕಾದ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ 84 ನ್ಯಾಯಾಧೀಶರು ನಿವೇಶನ ಹಗರಣದಲ್ಲಿ ಸಿಲುಕಿಕೊಂಡಿರುವುದು ವಿಷಾದನೀಯ ಎಂದು ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕ ಎ.ಟಿ.ರಾಮಸ್ವಾಮಿ ತಿಳಿಸಿದರು.

ತಾಲೂಕಿನ ಮಂಚನಹಳ್ಳಿ ಗ್ರಾಮದ ಸಿರಿ ಅಂಬಾರಿ ಪ್ಯಾಲೆಸ್ ನಲ್ಲಿ ಕರ್ನಾಟಕ ದಲಿತ ಚಳುವಳಿ ನವನಿರ್ಮಾಣ ವೇದಿಕೆ ವತಿಯಿಂದ ಏರ್ಪಡಿಸಿದ್ದ ನಮ್ಮ ಭೂಮಿ ನಮ್ಮದು ಎಂಬ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರಿನ ಸುತ್ತಮುತ್ತ ಕೋಟ್ಯಾಂತರ ಮೌಲ್ಯದ ಸರ್ಕಾರಿ ಭೂಮಿಯನ್ನು ದುರಾಸೆಯ ಜನರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಕೆ ಮಾಡಿ ಆನಂದದಿಂದ ಬದುಕುತ್ತಿದ್ದಾರೆ. ಇಂಥ ಅಕ್ರಮ ಎಸಗಿದವರು ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಈ ಬಗ್ಗೆ ಸದನದಲ್ಲಿ ಹಲವಾರು ಬಾರಿ ಒತ್ತಾಯಿಸಿದ್ದರೂ ಹಾಗೂ 39 ದಿನಗಳ ಕಾಲ ಪ್ರತಿಭಟಿನೆ ನಡೆಸಿದರೂ ಪ್ರಯೋಜನವಾಗಲಿಲ್ಲ, ಇಂತಹ ಪ್ರಕರಣಗಳಲ್ಲಿ ಒಬ್ಬರಿಗೂ ಇದುವರೆಗೆ  ಶಿಕ್ಷೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಹೋರಾಟವನ್ನು ನಡೆಸಲು ಎಷ್ಟರಮಟ್ಟಿಗೆ ಸಿದ್ಧತೆ ಆಗಿದೆ ಎಂಬ ಆತ್ಮವಲೋಕನವೂ ನಡೆಯಬೇಕು ಕಾನೂನು ಉಳ್ಳವರ ಪಾಲಿಗೆ ಉದಾರವಾಗಿಯೂ, ಬಡವರ ಪಾಲಿಗೆ ಕಠಿಣವಾಗಿಯೂ ಮಾರ್ಪಾಡಾಗಿದೆ ನಮ್ಮನ್ನು ಈ ಹಿಂದೆ ಈಸ್ಟ್ ಇಂಡಿಯಾ ಕಂಪನಿ ಆಳುತಿತ್ತು ಈಗ ಈಟ್ ಇಂಡಿಯಾ ಕಂಪನಿ ಮನಸ್ಥಿತಿ  ಇರುವವರು ಆಳುತಿದ್ದಾರೆ ಎಂದು ವ್ಯಂಗ್ಯವಾಡಿ ಬೆಂಗಳೂರಿನ ಸುತ್ತಮುತ್ತ ಐದು ಸಾವಿರ ಅನಧಿಕೃತ ಬಡಾವಣೆಗಳಿವೆ ಈ ವಿಷಯದಲ್ಲಿ ನ್ಯಾಯಾಲಯಗಳ ಹೆಸರುಗಳು ಸೇರ್ಪಡೆಯಾಗಿದೆ. ಹೋರಾಟವನ್ನು ಸಂಘಟಿಸುವರಲ್ಲಿ ಕೆಲವರು ಹಗರಣಗಳನ್ನು ನಡೆಸಿದವರ ಪರವಾಗಿ ನಿಲ್ಲುವ ನಿರ್ಧಾರಗಳನ್ನು ಕಾಣಬಹುದಾಗಿದೆ ಹೋರಾಟವನ್ನು ಯಾರು ಸ್ವಾರ್ಥಕ್ಕೆ ಬಳಸಿಕೊಳ್ಳಬಾರದು ಹೋರಾಟಗಾರರು ಹೋರಾಟದ ಆಶಯಕ್ಕೆ ವಿರುದ್ಧವಾದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಾರದು ಎಂದರು.

ಇದನ್ನೂ ಓದಿ: ಐಪಿಎಲ್ ನಡುವೆಯೇ ಕೆಕೆಆರ್ ತೊರೆದು ಭಾರತಕ್ಕೆ ಆಗಮಿಸಿದ ಕುಲದೀಪ್ ಯಾದವ್

ಪ್ರಜಾವಾಣಿ ಬೆಂಗಳೂರು ವಿಭಾಗದ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಮಾತನಾಡಿ ಇನ್ನೊಮ್ಮೆ ಚಳುವಳಿಗಾರರಿಂದಾಗಲಿ ಅಥವಾ ರಾಜಕಾರಣಿಗಳಿಂದಾಗಲೀ ಹೈಜಕ್ ಮಾಡುವುದಕ್ಕೆ ಅವಕಾಶ ನೀಡಬೇಡಿ, 70 ರಿಂದ 90 ರ ದಶಕದವರೆಗೂ ನಡೆದಿರುವ ಹಲವು ಚಳುವಳಿಗಳ ವೈಫಲ್ಯದ ಪಾಠಗಳ ಅರಿವಿನಿಂದಲೇ ಹೊಸ ಚಳುವಳಿಗಳನ್ನು ಕಟ್ಟಲು ಇದು ಸಕಾಲ, ಈಗಲೂ ಭೂ ಹೋರಾಟಕ್ಕೆ ಬೆಂಬಲವಿದ್ದು ಚಳುವಳಿಗಳನ್ನು ಹೇಗೆಲ್ಲಾ ಸಂಘಟಿಸಬೇಕು ಎಂಬುದಕ್ಕೆ ರಾಜ್ಯದಲ್ಲಿ ಅನೇಕ ನಿರ್ದೇಶನಗಳಿವೆ ಭೂ ಹೋರಾಟವು ಮೈಸೂರು ಜಿಲ್ಲೆ ಮೀರಿ ರಾಜ್ಯದ್ಯಂತ ವಿಸ್ತರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಸ್ಥಾನೀಯ ಸಂಪಾದಕ ಕೆ ನರಸಿಂಹಮೂರ್ತಿ., ಡಿಡ್ ಸಂಸ್ಥೆಯ ಮುಖ್ಯಸ್ಥ ಡಾ ಎಸ್.ಶ್ರೀಕಾಂತ್, ಕರ್ನಾಟಕ ದಲಿತ ಚಳುವಳಿ ನವನಿರ್ಮಾಣ ವೇದಿಕೆಯ ಮುಖಂಡರಾದ ಎಚ್.ಗೋವಿಂದಯ್ಯ, ಹರಿಹರಾನಂದ ಸ್ವಾಮಿ,  ಬಂಗ್ವಾದಿ ನಾರಾಯಣಪ್ಪ,  ಪಿ ಸಂಬಯ್ಯ,  ಮುಖಂಡ ಶಿವಯೋಗಿ,  ಸಿರಿ ಅಂಬಾರಿ ಪ್ಯಾಲೇಸ್ ಮಾಲೀಕ ಎಚ್.ಟಿ.ರವಿ, ಟಿ.ಈರಯ್ಯ,  ಸೀಗೂರು ವಿಜಯಕುಮಾರ್, ಎಚ್.ಡಿ.ರಮೇಶ್, ಪಿ.ಪಿ.ಮಹದೇವ್,  ನೆರಳಕುಪ್ಪೆ ನವೀನ್, ಮುನಾವರ್ ಪಾಷ, ಪಿ.ಪಿ.ಪುಟ್ಟಯ್ಯ, ಡಿಎಸ್ ನಾಗೇಂದ್ರ., ಧರ್ಮಣ್ಣ  ಸೇರಿದಂತೆ ಮತ್ತಿತರರು ಹಾಜರಿದ್ದರು.

 

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.