ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಅಪಘಾತ : ಇಬ್ಬರು ಸಾವು, ಓರ್ವ ಗಂಭೀರ
Team Udayavani, May 20, 2022, 5:09 PM IST
ನಂಜನಗೂಡು : ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಬಳಿಯ ಹುಣಸನಾಳು ಗ್ರಾಮದಲ್ಲಿ ನಡೆದಿದೆ.
ತ್ರಿಬಲ್ ರೈಡಿಂಗ್ ನಲ್ಲಿದ್ದ ಮೂವರು ಯುವಕರ ಪೈಕಿ ಕೂಡ್ಲಾಪುರ ಗ್ರಾಮದ ಸಚಿನ್ ಹಾಗೂ ಹುಣಸನಾಳು ಗ್ರಾಮದ ದೊರೆಸ್ವಾಮಿ ಸಾವನ್ನಪ್ಪಿದ್ದ ದುರ್ದೈವಿ. ಮತ್ತೊಬ್ಬ ಸವಾರ ಗುಂಡ್ಲುಪೇಟೆ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ರಘು ಸ್ಥಿತಿ ಚಿಂತಾಜನಕವಾಗಿದೆ.
ಘಟನೆ ವಿವರ : ಗುರುವಾರ ಸಂಜೆ ಮೂವರು ಯುವಕರು ಕೆಲಸ ಮುಗಿಸಿ ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಮೂಲಕ ಸ್ವಾ ಗ್ರಾಮಕ್ಕೆ ವಾಪಸಾಗುತ್ತಿದ್ದ ವೇಳೆ ಹುಣಸನಾಳು ಬಳಿ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು ಇದನ್ನು ಗಮನಿಸಿದ ಯುವಕರು ಪೊಲೀಸರಿಂದ ತಪ್ಪಿಸಿಕೊಳ್ಳಲು ಯೂ ಟರ್ನ್ ತೆಗೆದುಕೊಂಡಿದ್ದಾರೆ ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕೆ.ಎಸ್.ಆರ್.ಟಿ.ಸಿ.ಬಸ್ ಬೈಕ್ ಗೆ ಢಿಕ್ಕಿ ಹೊಡೆದಿದೆ.
ಪರಿಣಾಮ ಮೂವರು ಯುವಕರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು, ಕೂಡಲೇ ಸ್ಥಳೀಯರ ನೆರವಿನೊಂದಿದೆ ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು (ಶುಕ್ರವಾರ) ಇಬ್ಬರು ಯುವಕರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ.
ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಭರ್ಜರಿ 1,534 ಅಂಕ ಜಿಗಿತ; ನಿಫ್ಟಿಯೂ ಏರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ