Nanjangud; ನಂಜುಂಡೇಶ್ವರ ದೇವಾಲಯದ ಮುಂಭಾಗದಲ್ಲಿ ಭಕ್ತರಿಂದ ಬೃಹತ್ ಪ್ರತಿಭಟನೆ

3ನೇ ದಿನಕ್ಕೆ ಕಾಲಿಟ್ಟ ಅಂದಕಾಸುರ ಸಂಹಾರ ಆಚರಣೆ ವಿವಾದ, ಎಂಜಲು ನೀರು ಎರಚಿದವರನ್ನು ಕೂಡಲೆ ಬಂಧಿಸಿ

Team Udayavani, Dec 28, 2023, 9:45 PM IST

1-aasasa

ನಂಜನಗೂಡು: ಅಂದಕಾಸುರ ಸಂಹಾರ ಆಚರಣೆ ವಿವಾದ 3ನೇ ದಿನಕ್ಕೆ ಕಾಲಿಟ್ಟಿದ್ದು, ಗುರುವಾರ ನಂಜುಂಡೇಶ್ವರನ ಭಕ್ತರಿಂದ ದೇವಾಲಯದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಮಂಗಳವಾರ ರಾತ್ರಿ ಅಂದಕಾಸುರ ಸಂಹಾರ ವಿಚಾರವಾಗಿ ನಡೆದ ವಿವಾದ ಬುಧವಾರ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಲೇರಿ ಎರಡು ಗುಂಪುಗಳ ಸದಸ್ಯರ ಮೇಲೆ ಪ್ರಕರಣಗಳು ದಾಖಲಾಗಿದ್ದವು.

ಮುಂದುವರೆದು ಗುರುವಾರ ಕಂಠೇಶ್ವರನ ಉತ್ಸವ ಮೂರ್ತಿಗೆ ಅಪವಿತ್ರ ನೀರು ಎರಚಿದವರನ್ನು ಕೂಡಲೇ ಬಂಧಿಸಿ ತಮಗೆ ನ್ಯಾಯ ಕೊಡಿಸಬೇಕೆಂದು ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು ದೇವಾಲಯದ ಮುಂಭಾಗ ಪ್ರತಿಭಟನೆ ನಡೆಸಿದರು. ಮೈಕ್ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ಭಕ್ತರ ನಡುವೆ ತಳ್ಳಾಟ ನೂಕಾಟ್ಟ ಉಂಟಾಗಿ ಕೆಲ ಸಮಯ ದೇವಾಲಯದ ಆವರಣ ಉದ್ವಿಗ್ನಗೊಂಡಿತು. ಭಕ್ತಾದಿಗಳು ಪೊಲೀಸರ ವಿರುದ್ಧ ಧಿಕ್ಕಾರ ಕೂಗುತ್ತಾ ಕೂಡಲೇ ಡಿಸಿ ಅವರು ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದರು. ದೇವಾಲಯದ ಆಗಮಿಕರನ್ನು ಒಳಗೊಂಡಂತೆ ಪುರೋಹಿತ ವರ್ಗ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ದೇವಾಲಯದ ಹಿರಿಯ ಅರ್ಚಕರಾದ ಶ್ರೀಕಂಠ ದೀಕ್ಷಿತ್, ಸಿನಿಮಾಗಳಲ್ಲಿ ನಾವು ನಾವು ನೋಡಿದ್ದೆವು ಧಾರ್ಮಿಕ ಕಾರ್ಯಕ್ರಮಗಳಿಗೆ ಅಸುರರು ತಡೆ ನೀಡುವುದನ್ನ, ನಂಜನಗೂಡಿನಲ್ಲಿ ಮೊನ್ನೆ ಆ ಪ್ರಸಂಗ ನಡೆದೇ ಮೂರ್ತಿಗೆ ಎಂಜಲು ನೀರನ್ನು ಎರಚಿ ಅಪವಿತ್ರ ಗೊಳಿಸಿರುವುದು ಅವಮಾನಕರವಾದ ವಿಷಯ. ಆದರೆ ಇತಿಹಾಸ ಪ್ರಸಿದ್ಧ ನಂಜನಗೂಡಿನಲ್ಲಿ ಇಂತಹ ಘಟನೆ ನಡೆಯುತ್ತದೆ ಎಂದು ನಾನು ಈ ಜನ್ಮದಲ್ಲಿ ಭಾವಿಸಿರಲಿಲ್ಲ. ಮುಂದಿನ ದಿನಗಳಲ್ಲಿ ದೊಡ್ಡ ಜಾತ್ರೆ ಹುಣ್ಣಿಮೆ ಪೂಜೆಗಳು ಇತ್ಯಾದಿ ಉತ್ಸವಗಳು ನಡೆಯುತ್ತದೆ.ಇಂತಹ ಘಟನೆ ಮರುಕಳಿಸಿದರೆ ನಿಜಕ್ಕೂ ಅವಮಾನವಾಗುತ್ತದೆ ಎಂದು ಕಣ್ಣೀರಿಟ್ಟರು.

ಪ್ರಧಾನ ಅರ್ಚಕ ನಾಗಚಂದ್ರ ದಿಕ್ಷೀತ್ ಮಾತಾನಾಡಿ, ಅಪವಿತ್ರಗೊಂಡಿರುವ ಶ್ರೀಕಂಠೇಶ್ವರನ ಉತ್ಸವ ಮೂರ್ತಿಯನ್ನು ಪವಿತ್ರಗೊಳಿಸಲು ನಾನ ಪೂಜೆಗಳನ್ನು ಪಂಚಗವ್ಯ ಮತ್ತು ಪುಣ್ಯಾಹಗಳನ್ನು ಮಾಡುತ್ತೇವೆ. ಪ್ರಾಯಶ್ಚಿತ ಪೂಜೆ ಶೋಷಶೋಪಚಾರ ಪೂಜೆ ನಂತರ ಉತ್ಸವ ಮೂರ್ತಿ ಪವಿತ್ರ ಗೊಳ್ಳುತ್ತದೆ ಎಂದರು.

ಪ್ರತಿಭಟನಾಕಾರರು ಎಲ್ಲರೂ ಚರ್ಚಿಸಿ, ಶ್ರೀ ಶ್ರೀಕಂಠೇಶ್ವರ ಭಕ್ತ ಮಂಡಳಿ ವತಿಯಿಂದ ಗಿರೀಶ್ ಮಾತನಾಡಿ ಇನ್ನು ಎರಡು ದಿನದ ಒಳಗಡೆ ಕೃತ್ಯ ಎಸಗಿದವರನ್ನು ಬಂಧಿಸಬೇಕು ನಮ್ಮ ಮೇಲೆ ಆಗಿರೋ ಎಫ್ ಐಆರ್ ಅನ್ನು ತೆರೆವುಗೊಳಿಸಬೇಕು. ಇದು ಸರಕಾರಿ ಕಾರ್ಯಕ್ರಮ. ದೇವರ ಮೇಲೆ ಈ ರೀತಿ ಆಗಿರುವುದು ಅಪರಾಧ. ಮುಂದೆ ದೊಡ್ಡ ಜಾತ್ರೆ ಇದೆ ಲಕ್ಷಾಂತರ ಜನ ಸೇರುತ್ತಾರೆ ಆ ಸಮಯದಲ್ಲಿ ದೇವರಿಗೆ ಚಿನ್ನಾಭರಣ ಧರಿಸುತ್ತಾರೆ ಇಂಥ ಘಟನೆಗಳು ನಡೆಯದತೆ ಎಚ್ಚರಿಕೆ ವಹಿಸಬೇಕುಎಂದರು.

ಪ್ರತಿಭಟನ ಸ್ಥಳಕ್ಕೆ ಆಗಮಿಸಿದ ಎಸಿ ರಕ್ಷಿತ್ ಮತ್ತು ಎಸ್ ಪಿ ಡಾ ನಂದಿನಿ ಮಾತನಾಡಿ ಇದರ ಬಗ್ಗೆ ತನಿಖೆ ನಡೆಸಿ, ಕಾನೂನು ಬದ್ಧವಾಗಿ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ತಪ್ಪಿಸ್ಥರಿಗೆ ಖಂಡಿತ ಶಿಕ್ಷೆ ಆಗುತ್ತದೆ ಎಂದು ಪ್ರತಿಭಟನೆಯನ್ನು ಕೈಬಿಡುವಂತೆ ತಿಳಿಸಿದರು.

ಪ್ರತಿಭಟನೆಯ ವೇಳೆ ಉತ್ಸವಮೂರ್ತಿಗೆ ಎಂಜಲು ನೀರು ಎರಚಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಹಿ ಸಂಗ್ರಹಣ ಅಭಿಯಾನ ನಡೆಯಿತು. ದೇವಾಲಯದ ಮುಂಭಾಗದಲ್ಲಿ ಬೃಹದಾಕಾರದಲ್ಲಿ ಬ್ಯಾನರನ್ನು ಅಳವಡಿಸಲಾಗಿತ್ತು ಸಾವಿರಾರು ಭಕ್ತರು ಬ್ಯಾನರ್ ನಲ್ಲಿ ಸಹಿ ಮಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರಲ್ಲದೆ ಕೂಡಲೇ ಕೃತ್ಯ ಎಸಗಿದವರನ್ನು ಬಂಧಿಸಬೇಕು ಎಂಬ ಮಾತಿಗೆ ಸಮ್ಮತಿಸಿದರು. ತೇರಿನ ಬೀದಿಯಲ್ಲಿ ವ್ಯಾಪಾರಿಗಳು ಸ್ವಯಂ ಘೋಷಿತ ಬಂದನ್ನು ಮುಂಗಟುಗಳನ್ನು ಮುಚ್ಚಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು

ಗಿರೀಶ್ ಮಾತನಾಡಿ, ತಾತ್ಕಾಲಿಕವಾಗಿ ಪ್ರತಿಭಟನೆ ಕೈಬಿಡುತ್ತಿದ್ದೇವೆ ಇನ್ನು ಎರಡು ದಿನದ ಒಳಗಡೆ ಆರೋಪಿಗಳನ್ನು ಬಂದಿಸದಿದ್ದರೆ ಸ್ವಯಂ ಘೋಷಿತವಾಗಿ ಅಂಗಡಿಗಳನ್ನು ಬಂದ್ ಮಾಡಿ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ನ್ಯಾಯ ಸಿಗುವವರೆಗೂ ಹೋರಾಡುತ್ತೇವೆ ಎಂದರು
ಸ್ಥಳದಲ್ಲಿ ಯಾವುದೇ ರೀತಿಯ ಐತಕರ ಘಟನೆ ನಡೆಯದಂತೆ ಪೊಲೀಸ್ ವ್ಯವಸ್ಥೆ ಮಾಡಲಾಗಿತ್ತು

ಅಪವಿತ್ರ ನೀರು ಎರಚಿದವರನ್ನು ಕೂಡಲೆ ಬಂಧಿಸಿ

ದಲಿತರ ರಾಜ ನಮ್ಮ ಪೂರ್ವಜರಾಗಿರುವ ಮಹಿಷಾಸುರ ರಾಜನನ್ನು ಹೋಲುವ ರಂಗೋಲಿಯಲ್ಲಿ ಬರೆದ ಚಿತ್ರವನ್ನು ಕಾಲಿನಿಂದ ತುಳಿದು ನಮ್ಮ ಭಾವನೆಗಳಿಗೆ ಧಕ್ಕೆ ಮಾಡಿರುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ನಾವು ಯಾರಿಗೂ ಅವಮಾನ ಮಾಡಿಲ್ಲ. ನಂಜುಂಡೇಶ್ವರ ಅವರಿಗೆ ಮಾತ್ರ ದೇವರಲ್ಲ, ನಮ್ಮಗೂ ದೇವರೆ. ಶ್ರೀ ಕಂಠೇಶ್ವರನ ಉತ್ಸಹ ಮೂರ್ತಿಗೆ ಎಂಜಲು ನೀರು ಎರಚಿದವನ್ನು ಕೂಡಲೇ ಬಂಧಿಸಿ ಎಂದು ದಲಿತ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ನಂಜನಗೂಡಿನಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಮಾತನಾಡಿದ, ಪ್ರತಿಧ್ವನಿ ಸಂಘಟನೆಯ ಅಧ್ಯಕ್ಷ ತ್ರಿನೇಶ್, ನಮ್ಮ ದಲಿತರ ಮಹಾರಾಜ ನಮ್ಮ ಪೂರ್ವಜರು ಆಗಿರುವ ಮಹಿಷಾಸುರನನ್ನು ಹೋಲುವ ಬೃಹದಾಕಾರದ ರಂಗೋಲಿಯಲ್ಲಿ ಬರೆದ ಭಾವಚಿತ್ರವನ್ನು ಕಾಲಿನಿಂದ ತುಳಿದಿರುವುದು ತೀವ್ರ ಖಂಡನೀಯ. ಅದನ್ನು ನಾವು ವಿರೋಧಿಸುತ್ತೇವೆ ನಮ್ಮ ಸಂಘಟನೆಯಲ್ಲಿ ಯಾರು ಸಹ ಶ್ರೀಕಂಠೇಶ್ವರ ಉತ್ಸವ ಮೂರ್ತಿಗೆ ಎಂಜಲು ನೀರನ್ನು ಎರಚಿಲ್ಲ. ಅವರನ್ನು ನಮ್ಮ ಸಂಘಟನೆಯ ವತಿಯಿಂದ ಕೂಡಲೇ ಬಂಧಿಸಬೇಕೆಂದು ಆಗ್ರಹಿಸುತ್ತೇವೆ ಎಂದರು.

ಅಂದಕಾಸುರ ಸಂಹಾರದ ಬಗೆ ನಮಗೆ ಯಾವುದೇ ಆಕ್ಷೇಪವಿಲ್ಲ. ಆದರೆ ಮಹಿಷಾಸುರನನ್ನು ಹೋಲುವ ಬೃಹದಾಕಾರದ ಬ್ಯಾನರನ್ನು ಅಳವಡಿಸಿದ ಕಾರಣ ತಿಳಿಯಬೇಕು ಅಷ್ಟೇ. ಇಲ್ಲದ ಆಚರಣೆ ಎಂದು ಮಾಡಿದ್ದೇಕೆ ಎಂಬುದೇ ನಮ್ಮ ಪ್ರಶ್ನೆ ನಾವು ಪ್ರಶ್ನೆ ಮಾಡಿದ್ದು ಸರಕಾರಿ ಅಧಿಕಾರಿಗಳನ್ನು, ಅದರೆ ಅನಾವಶ್ಯಕ ಮಧ್ಯ ಪ್ರವೇಶ ಮಾಡಿ ಗೊಂದಲ ಸೃಷ್ಟಿ ಮಾಡಿದರು. ಮಹಿಷಾಸುರ ನಮ್ಮ ವಂಶಸ್ಥರು ಅವರನ್ನು ಹೋಲುವ ಬೃಹತ್ ಭಾವ ಚಿತ್ರವನ್ನು ನೆಲಕ್ಕೆ ಉರುಳಿಸಿ, ರಂಗೋಲಿಯನ್ನು ತುಳಿದು ನಮ್ಮಗೆ ಅವಮಾನ ಮಾಡಿದ್ದಾರೆ ನಮ್ಮ ನಂಬಿಕೆಗೆ ಧಕ್ಕೆ ತಂದಿದ್ದಾರೆ ನಮ್ಮ ಮೇಲೆ ಹಾಕಿರುವ ಪ್ರಕರಣವನ್ನು ಹಿಂಪಡೆಯಬೇಕು. ಲೋಕ ಸಭೆ ಚುನಾವಣೆಯನ್ನು ಮುಂದ ಇಟ್ಟುಕೊಂಡು ಕಾಣದ ರಾಜಕೀಯ ವ್ಯಕ್ತಿಗಳು ಪಿತೂರಿ ನಡೆಸುತ್ತಾರೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಚುಂಚನಹಳ್ಳಿ ಮಲ್ಲೇಶ್ ಜಿಲ್ಲಾ ಸಂಚಾಲಕರು ಕರಾದಸಂಸ, ಕಾರ್ಯ ಬಸವಣ್ಣ, ಜಿಲ್ಲಾ ಸಂಯೋಜಕರು ದ ಸಂ ಸ , ಇಮ್ಮಾವು ರಘು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕರ್ನಾಟಕ ರಾಜ್ಯ ರೈತ ಸಂಘ ನಗರ್ಲೆ ಎಂ. ವಿಜಯ್ ಕುಮಾರ್, ರಾಜ್ಯ ಅಧ್ಯಕ್ಷರು ಜನ ಸಂಗ್ರಾಮ ಪರಿಷತ್, ಸುರೇಶ್ ಶಂಕರಪುರ ಹಾಜರಿದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.