ನಂಜನಗೂಡು : ಅಂಗನವಾಡಿ ಹಾಲಿನ ಪೌಡರ್ ಗೆ ಕನ್ನ

ಗ್ರಾಮಸ್ಥ ರಿಂದಲೇ ಮಾಲು ಸಹಿತ ಅರೋಪಿ ವಶ, 128 ಪ್ಯಾಕೆಟ್ ವಶಕ್ಕೆ

Team Udayavani, Jul 22, 2022, 10:02 PM IST

1-saddad

ನಂಜನಗೂಡು :ಅಂಗನವಾಡಿಯ ಹಾಲು ಪೌಡರ್ ಗೆ ಕನ್ನ ಹಾಕಿದ ಖದೀಮನೊಬ್ಬ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಪ್ರಕರಣ ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅರ್ಧ ಕೆ.ಜಿ.ತೂಕದ 128 ಪ್ಯಾಕೆಟ್ ಗಳು ಖದೀಮನ ಬಳಿ ಪತ್ತೆಯಾಗಿದೆ.ಗರ್ಭಿಣಿಯರಿಗೆ ಬಾಣಂತಿಯರಿಗೆ ಸೇರಬೇಕಾದ ಹಾಲಿನ ಪೌಡರ್ ಪ್ಯಾಕೆಟ್ ಗಳು ಖಾಸಗಿ ವ್ಯಾಪಾರಸ್ಥರ ಕೈ ಸೇರುತ್ತಿರುವ ದಂಧೆ ಈ ಮೂಲಕ ಬಟ್ಟಾ ಬಯಲಾಗಿದೆ.

ಮಡುವಿನಹಳ್ಳಿ ಗ್ರಾಮದ ಅಂಗನವಾಡಿಯ ಸಿಬ್ಬಂದಿ ಮಂಜುಳಾ ಎಂಬುವರು ಹಾಲಿನ ಪ್ಯಾಕೆಟ್ ಗಳನ್ನ ದಂಧೆಕೋರರಿಗೆ ತಲುಪಿಸಿರುವ ಮಾಹಿತಿಯನ್ನ ಸಿಕ್ಕಿಬಿದ್ದ ವ್ಯಕ್ತಿಯೇ ಬಹಿರಂಗಪಡಿಸಿದ್ದಾನೆ.ನಂಜನಗೂಡು ತಾಲೂಕಿನಾದ್ಯಂತ ಈ ದಂಧೆ ರಾಜಾರೋಷವಾಗಿ ನಡೆಯುತ್ತಿದೆ.ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳ ಗಮನಕ್ಕೆ ಬಂದರೂ ಪುರಾವೆಗಳು ದೊರೆತಿರಲಿಲ್ಲ.ಇದೀಗ ಹಾಲಿನ ಪ್ಯಾಕೆಟ್ ಗಳನ್ನ ಅಕ್ರಮವಾಗಿ ಸಾಗಿಸುತ್ತಿದ್ದ ನಗರ್ಲೆ ಗ್ರಾಮದ ಜಗದೀಶ್ ಎಂಬ ಖದೀಮ ಗ್ರಾಮಸ್ಥರ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ.

ಫಲಾನುಭವಿಗಳಿಗೆ ವಿತರಿಸದ ಅಂಗನವಾಡಿ ಸಿಬ್ಬಂದಿಗಳು ದಂಧೆಕೋರರ ಜೊತೆ ಕೈ ಜೋಡಿಸಿರುವುದು ಬೆಳಕಿಗೆ ಬಂದಿದೆ. ತಾಲೂಕಿನಲ್ಲಿ ಅಂಗನವಾಡಿಗೆ ಸರಬರಾಜು ಮಾಡುತ್ತಿರುವ ಸಾಮಗ್ರಿಗಳೆ ಕಳಪೆ ಎಂದು ಇಲ್ಲಿನ ಸರಬರಾಜು ವ್ಯವಸ್ಥೆಯನ್ನೆ ರದ್ದು ಮಾಡಿ ಕೆಲದಿನಗಳ ನಂತ ರಮತ್ತೆ ಅದೆ ಸಂಸ್ಥೆ ಅಧಿಕಾರಸ್ಥರ ನೆರವಿನಿಂದ ಆ ಪ್ರಕರಣಕ್ಕೆ ತೇಪೆ ಹಾಕಿ. ಅದನ್ನು ಮುಂದುವರಿಸಿದ ಘಟನೆ ಹಸಿಯಾಗಿರುವಾಗಲೆ ತಾಲೂಕಿನ ವಿವಿದ ಅಂಗನವಾಡಿ ಕೇಂದ್ರಗಳಲ್ಲಿ ಪದಾರ್ಥಗಳನ್ನು ಅಕ್ರಮವಾಗಿ ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದಾಗಿ ಆರೋಪಿಯೇ ಒಪ್ಪಿಕೊಂಡಿದ್ದಾನೆ.ಮಹಿಳಾ ಮತ್ತು ಶಿಶು ಅಭಿವೃದ್ದಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.ಈ ಸಂಭಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದ್ದು ಆರೋಪಿಯನ್ನ ವಶಕ್ಕೆ ಪಡೆಯಲಾಗಿದೆ.

ಶಿಶು ಅಭಿವೃದ್ಧಿ ಅಧಿಕಾರಿಗಳ ನಿರ್ಲಕ್ಷತನಕ್ಕೆ ಸಾಕ್ಷಿ
ನಂಜನಗೂಡು ವಿಧಾನಸಭೆ ಕ್ಷೇತ್ರದ ಹೆಡಿಯಾಲ ದೇವರಾಯಶೆಟ್ಟಿಪುರ ಮತ್ತು ಹುರ ಭಾಗದಲ್ಲಿ ಅಂಗನವಾಡಿ ಕೇಂದ್ರದ ಮಕ್ಕಳು ಮತ್ತು ಫಲಾನುಭವಿಗಳಿಗೆ ನೀಡಬೇಕಾದ ಹಾಲಿನ ಪೌಡರ್ ಮತ್ತು ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ದಂಧೆಯಾಗಿ ಪರಿಣಮಿಸಿದೆ ಇದಕ್ಕೆ ತಾಲ್ಲೂಕುಮಟ್ಟದ ಅಧಿಕಾರಿಗಳ ಕುಮ್ಮಕ್ಕು ಮತ್ತು ನಿರ್ಲಕ್ಷ್ಯತನ ಕಾರಣ ಎಂದು ಸಾರ್ವಜನಿಕ ವಲಯದಲ್ಲಿ ಗ್ರಾಸವಾಗಿವೆ.

ಕೂಡಲೇ ಮಡುವಿನಹಳ್ಳಿ ಗ್ರಾಮದ 3ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕಿ ವಿರುದ್ಧ ಕ್ರಮ ಜರಗಿಸಬೇಕು. ಹೆಡಿಯಾಲ ಗ್ರಾಮದ ವೃತ್ತದಲ್ಲಿ ಮೇಲ್ವಿಚಾರಕ ಟೆಕ್ಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಶು ಅಭಿವೃದ್ಧಿ ಅಧಿಕಾರಿಯೇ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರ ಕಳ್ಳಾಟಕ್ಕೆ ಬೆನ್ನೆಲುಬಾಗಿ ನಿಂತಿದ್ದರು.ಸಾಕಷ್ಟು ಬಾರಿ ಹೆಡಿಯಾಲ ಭಾಗದಲ್ಲಿ ಮೇಲ್ವಿಚಾರಕಿ ಅಂಗನವಾಡಿ ಕಾರ್ಯಕರ್ತೆಯರಿಂದಲೇ ಆಹಾರ ಪದಾರ್ಥ ದಾಸ್ತಾನುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಸಾರ್ವಜನಿಕರ ಕಣ್ಣಿಗೆ ಬಿದ್ದಿತು ಆದರೂ ಕೂಡ ತಾಲ್ಲೂಕುಮಟ್ಟದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಕಾರಣ ಈಗ ಸ್ಪಷ್ಟವಾಗಿ ದಂಧೆಕೋರರ ಕಳ್ಳಾಟ ಬಟಾ ಬಯಲಾಗಿದೆ.

ಕೂಡಲೇ ಸಂಬಂಧಪಟ್ಟ ಉನ್ನತ ಮಟ್ಟದ ಅಧಿಕಾರಿಗಳು ತನಿಖೆ ಮಾಡಿ ಲೋಪವೆಸಗಿರುವ ಸಿಬ್ಬಂದಿಗಳು ಮತ್ತು ಅಧಿಕಾರಿಗಳ ವಿರುದ್ಧ ಕೂಡ ಪ್ರಕರಣ ದಾಖಲಾಗಿ ತಕ್ಕ ಶಾಸ್ತಿಯಾಗಬೇಕು ಎನ್ನುವುದು ಗ್ರಾಮಸ್ಥರ ಆಗ್ರಹವಾಗಿದೆ ತಪ್ಪಿದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಗುತ್ತದೆ ಎಂದು ಮಡುವಿನಹಳ್ಳಿ ಗ್ರಾಮದ ಸಾರ್ವಜನಿಕರು ಸಂದರ್ಭದಲ್ಲಿಹೇಳಿದ್ದಾರೆ.

ವರದಿ : ಶ್ರೀಧರ ಭಟ್ ನಂಜನಗೂಡು

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.