ನೋಡಬನ್ನಿ ನಂಜನಗೂಡು ದೊಡ್ಡ ಜಾತ್ರೆ ವೈಭವ


Team Udayavani, Mar 15, 2022, 1:30 PM IST

ನೋಡಬನ್ನಿ ನಂಜನಗೂಡು ದೊಡ್ಡ ಜಾತ್ರೆ ವೈಭವ

ನಂಜನಗೂಡು: ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡು ನಂಜುಂಡೇಶ್ವರ ಸೇರಿದಂತೆ ಆತನ ಪರಿವಾರದ ಪಂಚಮಹಾರಥೋತ್ಸವ ಮಾ.16 ರಂದು ಬೆಳಗಿನ ಜಾವ 3.30ರಿಂದ 4.30ರೊಳಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಡೆಯಲಿದೆ.

ಕೊರೊನಾ ಹಾವಳಿಯಿಂದ ಕಳೆದರೆಡು ವರ್ಷಗಳಿಂದ ದೇವಾಲಯದ ಒಳಾವರಣಕ್ಕೆ ಸೀಮಿತವಾಗಿ ನಡೆದು ಭಕ್ತರ ಪಾಲಿಗೆ ಮರೀಚಿಕೆ ಯಾಗಿದ್ದ ದೊಡ್ಡ ಜಾತ್ರೋತ್ಸವವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ದೇವಾಲಯ ಆಡಳಿತ ಮಂಡಳಿಯಿಂದ ಅದ್ಧೂರಿ ಸಿದ್ಧತೆ ನಡೆದಿದೆ. ಲಕ್ಷಾಂತ ಭಕ್ತರು ಆಗಮಿಸುವುದರಿಂದ ಅವರ ಅನುಕೂಲಕ್ಕಾಗಿ ಮೂಲ ಸೌಕರ್ಯ ಒದಗಿಸಲು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ 77 ಲಕ್ಷ ರೂ. ವೆಚ್ಚದಲ್ಲಿ ಸಕಲ ಸಿದ್ಧತೆ ಆರಂಭಿಸಿದೆ.

ದೇವರಿಗೆ ವಿಶೇಷ ಪೂಜೆ: ಪ್ರಧಾನ ಆಗಮಿಕರಾದ ನಾಗಚಂದ್ರ ದೀಕ್ಷಿತರು, ನೀಲಕಂಠ ದೀಕ್ಷಿತರು, ವಿಶ್ವನಾಥ ದೀಕ್ಷಿತರು ಸ್ಥಳ ಪುರೋಹಿತ ಸಪ್ತರ್ಷಿ ಜೋಯಿಸರು ಸೇರಿದಂತೆ ದೇವಾಲಯದ ಅರ್ಚಕರು ಮಂಗಳವಾರ ಮಧ್ಯರಾತ್ರಿ 12 ಗಂಟೆಗೆ ಸರಿಯಾಗಿ ಜಾತ್ರೋತ್ಸವದ ಪೂಜಾ ಕೈಂಕರ್ಯಗಳಾದ ಈಶ್ವರನ ಶಿರದಿಂದ ಪಾದವರಿಗೆ ವಿವಿಧ ಹೋಮಗಳ ಹವನಗಳ ಮೂಲಕ ಅರ್ಚನೆ ಮಾಡಿ ನಂತರ ಪಾರ್ವತಿ, ಗಣಪತಿ ಹಾಗೂ ಸುಬ್ರಹ್ಮಣ್ಯ ಮತ್ತು ಚಂಡೇಕೇಶ್ವರಿಗೂ ಹೋಮ ಹವನಗಳ ಮೂಲ ಪೂಜೆ ಸಲ್ಲಿಸುತ್ತಾರೆ.

ಗೌತಮ ಮಹರ್ಷಿಗಳು ಸ್ಥಾಪಿಸಿದ ರಥ: ನಂತರ ಮಕರ ಲಗ್ನದಲ್ಲಿ ಕೃತಯುಗದ ಗೌತಮ ಮಹರ್ಷಿಗಳು ಸ್ಥಾಪಿಸಿದ್ದಾರೆ ಎಂದು ಪ್ರತಿತಿಯುಳ್ಳ ಗೌತಮ ನಾಮಧೇಯದ ಚತುರ್ಮುಖ ಬ್ರಹ್ಮನೇ ಚಾಲನಾ ಸ್ಥಾನದಲ್ಲಿರುವ ರಥಕ್ಕೆ ಮತ್ತೆ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಪೂಜೆ ಅರ್ಪಿಸಿ ಶ್ರೀಕಂಠೇಶ್ವರನನ್ನು ಪ್ರತಿಷ್ಠಾಪಿ ಸುವುದರೊಂದಿಗೆ ಅಧಿಕೃತವಾಗಿ ದೊಡ್ಡ ಜಾತ್ರೆಯ ರಥೋತ್ಸವದ ಚಾಲನೆಗೆ ನಾಂದಿ ಹಾಡಲಾಗುತ್ತದೆ. ಶ್ರೀಕಂಠೇಶ್ವರನ ರಥಾರೋಹಣವಾಗುತ್ತಿದ್ದಂತೆ ಆತನ ಪರಿವಾರದ ತಾಯಿ ಪಾರ್ವತಿ, ಗಣಪತಿ, ಸುಬ್ರಮಣ್ಯ ಹಾಗೂ ಚಂಡಿಕೇಶ್ವರನ ರಥಾರೋಹಣ ವಿಧಿವತ್ತಾಗಿ ಸಂಪ್ರದಾಯಕ ಬದ್ಧವಾಗಿ ನಡೆಯಲಿದೆ.

80 ಅಡಿ 110 ಟನ್‌ ತೂಕ ಭವ್ಯರಥ: ಅತ್ಯಂತ ಪುರಾತನವಾದ ಸುಮಾರು 80 ಅಡಿ ಎತ್ತರದ 110 ಟನ್‌ ತೂಕದ ಈ ಗೌತಮ ರಥದಲ್ಲಿ ಪವಡಿಸುವ ನಂಜುಂಡೇಶ್ವರ ರಥ ಪ್ರಯಾಣ ದೇವಾಲಯದ ಮುಂಭಾಗದಿಂದ ಆರಂಭವಾಗಿ ಬಲಭಾಗದ ರಾಷ್ಟ್ರಪತಿ ರಸ್ತೆಯ ರಾಕ್ಷಸ ಮಂಟಪದ ಮೂಲಕ ಮಹಾತ್ಮಾಗಾಂಧಿ ರಸ್ತೆಯಲ್ಲಿ ಸಾಗಿ ದೇವಾಲಯದ ಎಡ ಭಾಗಕ್ಕೆ ಬರುವುದರೊಂದಿಗೆ ಶ್ರೀಕಂಠೇಶ್ವರ ದೊಡ್ಡ ತೇರು ನೆಲೆ ಸೇರಿದಂತಾಗುತ್ತದೆ.

ರಥೋತ್ಸವ ನೋಡುವುದೇ ಒಂದು ಭಾಗ್ಯ: ಆರಂಭದಲ್ಲಿ ಗಣಪತಿ ನಂತರ ಕ್ರಮವಾಗಿ ಶ್ರೀಕಂಠೇಶ್ವರ, ಪಾರ್ವತಿ, ಸುಬ್ರಹ್ಮಣ್ಯ ಮತ್ತು ಚಂಡಿಕೇಶ್ವರ ಸೇರಿದಂತೆ ಪಂಚರಥಗಳ ಮಿಣಿ ಹಿಡಿದು ಉಘೇ ನಂಜುಂಡೇಶ್ವರ ಎಂದು ಬಹು ಪರಾಕಿನೊಡನೆ ರಥಬೀದಿಯಲ್ಲಿ ರಥವನ್ನು ಎಳೆದೊಯ್ಯತ್ತಿದ್ದರೆ 80 ಅಡಿ ಎತ್ತರದ ಭವರೋಗ ವೈದ್ಯ ಹಕಿಂ ನಂಜುಂಡೇಶ್ವರ ಪವಡಿಸಿದ ಗೌತಮ ರಥ ಬೀದಿಯುದ್ದಕ್ಕೂ ಬಕುಕುತ್ತ ಬಾಗುತ್ತ ಸಾಗುವ ವೈಭವವನ್ನು ನೋಡುವುದೇ ಒಂದು ಚೆಂದ.

ಅರವಟ್ಟಿಗೆ ಜಾತ್ರೋತ್ಸವ! :ದೊಡ್ಡ ಜಾತ್ರೆ ಅರವಟ್ಟಿಗೆಗಳ ಜಾತ್ರೆಯೂ ಹೌದು. ಶ್ರೀಕಂಠೇಶ್ವರನ ಜಾತ್ರೆಗೆ ಆಗಮಿಸುವ ಭಕ್ತರಿಗಾಗಿ ಆತನ ಭಕ್ತ ಸಮೂಹ ಮಾರು ಮಾರಿಗೆ ನೀರು, ಮಜ್ಜಿಗೆ, ಬೇಲದ, ಹಣ್ಣಿನ ಪಾನಕ, ಸಿಹಿ ತಿನಿಸುಗಳು, ಚಿತ್ರಾನ್ನ, ಮೊಸರನ್ನ, ಬಿಸಿಬೇಳೆ ಬಾತ್‌, ಪುಳಯೋಗರೆಗಳ ಓತಣ ಸೇರಿದಂತೆ ಹಣ್ಣು ಹಂಪಲಗಳನ್ನು ಮಾರು ಮಾರಿಗೆ ಬೀದಿಯುದ್ದಕ್ಕೂ ಭಕ್ತರಿಗೆ ನೀಡಿ ಅವರ ಹೊಟ್ಟೆ ತುಂಬಿಸುವ ಅರವಟ್ಟಿಗೆಗಳು ಈ ಜಾತ್ರೆಯ ಇನ್ನೊಂದು ಮುಖವೇ ಆಗಿದೆ.

 

 – ಶ್ರೀಧರ್‌ ಆರ್‌, ಭಟ್‌

ಟಾಪ್ ನ್ಯೂಸ್

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

7-

Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

6-hunsur’

Hunsur: ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಆತ್ಮಹತ್ಯೆಗೆ ಶರಣು

Renukaswamy Case: ದರ್ಶನ್‌ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!

Renukaswamy Case: ದರ್ಶನ್‌ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆ‌ಬರ ಪತ್ತೆ

Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆ‌ಬರ ಪತ್ತೆ

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

Gadag; ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Gadag; ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

8-

Lokapura: ಬಕ್ರೀದ್ ಹಬ್ಬದ ನಿಮಿತ್ತ ಮುಸ್ಲಿಂ ಬಾಂಧವರಿಂದ ವಿಶೇಷ ಪ್ರಾರ್ಥನೆ

Bakrid 2024;

Bakrid 2024; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಂದ ಸಾಮೂಹಿಕ ಪ್ರಾರ್ಥನೆ

Bidar: ತೈಲ ದರ ಏರಿಕೆ ಖಂಡಿಸಿ ಬೈಕ್- ಕಾರು ಎಳೆದು ಪ್ರತಿಭಟನೆ

Bidar: ತೈಲ ದರ ಏರಿಕೆ ಖಂಡಿಸಿ ಬೈಕ್- ಕಾರು ಎಳೆದು ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.