ಸಚಿವ ಸ್ಥಾನ: ಮುನಿರತ್ನ, ರಮೇಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ ಸಚಿವ ನಾರಾಯಣ ಗೌಡ
Team Udayavani, Jul 1, 2021, 5:12 PM IST
ಮೈಸೂರು: ಶಾಸಕ ಮುನಿರತ್ನ ವಿರುದ್ಧದ ಪ್ರಕರಣ ಈಗಾಗಲೇ ಇತ್ಯರ್ಥವಾಗಿದೆ. ರಮೇಶ್ ಜಾರಕಿಹೊಳಿ ಪ್ರಕರಣ ಕೂಡ ಕ್ಲಿಯರ್ ಆಗಲಿದೆ. ಹಾಗಾಗಿ ಮುನಿರತ್ನ ಮತ್ತು ರಮೇಶ್ ಜಾರಕಿಹೊಳಿ ಯಾಕೆ ಸಂಪುಟ ಸೇರಬಾರದು ಎಂದು ಸಚಿವ ಕೆ.ಸಿ.ನಾರಾಯಣ ಗೌಡ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲ್ಲ. ಮುಂದಿನ ಎರಡು ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರುತ್ತಾರೆ. ಮುಂದಿನ ಚುನಾವಣೆಯೂ ಅವರ ನೇತೃತ್ವದಲ್ಲೇ ನಡೆಯುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.
ಇದನ್ನೂ ಓದಿ:ಲಸಿಕೀಕರಣ ಮುಗಿಯುತ್ತಿದ್ದಂತೆ ಕಾಲೇಜು ಆರಂಭ ಕುರಿತು ನಿರ್ಧಾರ: ಡಿಸಿಎಂ ಅಶ್ವಥ್ ನಾರಾಯಣ
ಬಿಜೆಪಿ ಪಾಳಯದ ಹಲವರ ದೆಹಲಿ ಭೇಟಿಯ ಬಗ್ಗೆ ಕೇಳಲಾದ ಪ್ರಶ್ನೆಗೆ, ಯಾರ್ಯಾರೋ ದೆಹಲಿಗೆ ಹೋಗಿ ಬಂದಿದ್ದಾರೆ. ದೆಹಲಿ ಪ್ರವಾಸ ಮಾಡಬಾರದೆಂದು ನಿಯಮ ಇದೆಯೇ. ಅವರವರ ಕೆಲಸಕ್ಕೆ ಹೋಗಿ ಬಂದಿದ್ದಾರೆ ಎಂದರು.
ರಮೇಶ್ ಜಾರಕಿಹೊಳಿಯವರಿಗೆ ಮುಂಬೈನಲ್ಲಿ ಸ್ವಂತ ಮನೆ ಇದೆ. ಅವರು ಅಲ್ಲೇ ಕಚೇರಿ ಮಾಡಿದ್ದಾರೆ. ಅವರ ಮನೆಯಿರು ಪ್ರದೇಶದಲ್ಲೇ ದೇವೇಂದ್ರ ಫಡ್ನವೀಸ್ ಮನೆ ಇದೆ. ಹೀಗಾಗಿ ಆಗಾಗ್ಗೆ ಫಡ್ನವೀಸ್-,ಜಾರಕಿಹೊಳಿ ಭೇಟಿ ಆಗುತ್ತಾರೆ ಎಂದು ಸಚಿವ ನಾರಾಯಣ ಗೌಡ ಹೇಳಿದರು.
ಮಂಡ್ಯದಲ್ಲಿ ವೇದಿಕೆ ಕಾರ್ಯಕ್ರಮಗಳಿಗೆ ನಿಷೇಧದ ಕುರಿತು ಮಾತನಾಡಿದ ಅವರು, ಕೆಲವರು ನೂರು ಕಿಟ್ ಕೊಡಲು ಸಾವಿರ ಜನರನ್ನು ಸೇರಿಸಿಕೊಂಡು ರಾಜಕಾರಣ ಮಾಡುತ್ತಾರೆ. ಕೋವಿಡ್ ಸೋಂಕು ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಇಂತಹ ಸಂದರ್ಭದಲ್ಲಿ ರಾಜಕೀಯ ಬೇಕಾ. ಅದಕ್ಕಾಗಿ ವೇದಿಕೆ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ ಎಂದರು.
ಕೆಆರ್ಎಸ್ ಜಲಾಶಯದಲ್ಲಿ ಬಿರುಕು ವದಂತಿ ಬಗ್ಗೆ ಮಾತನಾಡಿದ ಸಚಿವರು, ಜಲಾಶಯದಲ್ಲಿ ಯಾವುದೇ ಬಿರುಕು ಕಾಣಿಸಿಕೊಂಡಿಲ್ಲ. ಇದು ಸತ್ಯಕ್ಕೆ ದೂರವಾದ ಸಂಗತಿ ಎಂದು ಸ್ಪಷ್ಟನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ