ಪ್ರಾಥಮಿಕ, ಪ್ರೌಢಶಿಕ್ಷಣ ರಾಷ್ಟ್ರೀಕರಣಗೊಳಿಸಿ


Team Udayavani, Jul 26, 2019, 3:37 PM IST

mysuru-tdy-3

ಎನ್‌.ಆರ್‌. ಮೊಹಲ್ಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೋಟ್ಬುಕ್‌ ವಿತರಣೆ ಮತ್ತು ಅಭಿನಂದನಾ ಸಮಾರಂಭ ನಡೆಯಿತು. ಸಾಹಿತಿ ಬನ್ನೂರು ಕೆ.ರಾಜು, ಹಿರಣ್ಮಯಿ ಪ್ರತಿಷ್ಠಾನದ ಅಧ್ಯಕ್ಷ ಎ.ಸಂಗಪ್ಪ ಇತರರು ಉಪಸ್ಥಿತರಿದ್ದರು.

ಮೈಸೂರು: ಸರ್ಕಾರಿ ಶಾಲೆಗಳನ್ನು ಉಳಿಸಿ ಕೊಳ್ಳುವತ್ತ ಸರ್ಕಾರ ಗಂಭೀರ ಚಿಂತನೆ ನಡೆಸಬೇಕಾಗಿದೆ ಎಂದು ಸಾಹಿತಿ ಬನ್ನೂರು ಕೆ.ರಾಜು ತಿಳಿಸಿದರು.

ಹಿರಣ್ಮಯಿ ಪ್ರತಿಷ್ಠಾನ ಹಾಗೂ ಕಾವೇರಿ ಬಳಗದ ಸಂಯುಕ್ತಾಶ್ರಯದಲ್ಲಿ ಎನ್‌.ಆರ್‌.ಮೊಹಲ್ಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ನೋಟ್ಬುಕ್‌ ವಿತರಣೆ ಮತ್ತು ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಖಾಸಗಿ ಶಾಲೆ ಮೋಹ: ಸರ್ಕಾರಿ ಶಾಲೆಗಳಿಗೆ ಸರ್ಕಾರ ಸಕಲ ಸವಲತ್ತುಗಳನ್ನು ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿದ್ದರೂ ಖಾಸಗಿ ಶಾಲೆಗಳ ಭ್ರಮೆಯಲ್ಲಿರುವವ ರಿಂದಾಗಿ ಸರ್ಕಾರಿ ಶಾಲೆಗೆ ಮಕ್ಕಳು ಬಾರದೆ, ಮುಚ್ಚುವ ಹಂತಕ್ಕೆ ತಲುಪುತ್ತಿವೆ. ಆದ್ದರಿಂದ ಸರ್ಕಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸಬೇಕು ಅಥವಾ ಹಳ್ಳಿ ಹಳ್ಳಿಗೂ ನಾಯಿಕೊಡೆ ಗಳಂತೆ ಹುಟ್ಟಿಕೊಳ್ಳು ತ್ತಿರುವ ಖಾಸಗಿ ಶಾಲೆಗಳಿಗೆ ಅನುಮತಿ ನಿರಾಕರಿಸಬೇಕು. ಇದನ್ನು ಮಾಡದೇ ಹೋದರೆ ಸರ್ಕಾರಿ ಶಾಲೆಗಳನ್ನು ಸರಸ್ವತಿ ಮನಸ್ಸು ಮಾಡಿದರೂ ಉಳಿಸಿ ಕೊಳ್ಳಲಾಗುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ಗುರು ಶಿಷ್ಯ ಸಂಬಂಧ ಶ್ರೇಷ್ಠ: ಜಗತ್ತಿನಲ್ಲಿ ಗುರು – ಶಿಷ್ಯರ ಸಂಬಂಧ ಎಲ್ಲಾ ಸಂಬಂಧ ಗಳಿಗಿಂತ ಅತ್ಯಂತ ಶ್ರೇಷ್ಠ. ಯಾರೂ ಕದಿಯ ಲಾಗದ, ಎಂದೂ ನಶಿಸಿಹೋಗದ ಸಂಪತ್ತು ವಿದ್ಯೆ. ಇಂತಹ ಶಾಶ್ವತ ಸಂಪತ್ತನ್ನು ಶಿಷ್ಯರಿಗೆ ನೀಡುವ ಗುರುಗಳು ಮತ್ತು ಗುರುಗಳಿಂದ ವಿದ್ಯೆ ಕಲಿತು, ಅವರಲ್ಲಿನ ಜ್ಞಾನ ಪಡೆದು ಭವಿಷ್ಯದಲ್ಲಿ ವಿವಿಧ ರಂಗಗಳಲ್ಲಿ ಸಮಾಜದ ಸತ್ಪಜೆ ಗಳಾಗಿ ಬೆಳೆಯುವ ಶಿಷ್ಯರು, ಇವರಿಬ್ಬರ ಕರುಳು ಬಳ್ಳಿಯಂತಹ ಸಂಬಂಧಕ್ಕೆ ಸಮ ಮತ್ತೂಂದಿಲ್ಲ ಎಂದು ತಿಳಿಸಿದರು.

ವಿದ್ಯೆಯಷ್ಟೇ ಶಾಶ್ವತವಾದುದು ಗುರು – ಶಿಷ್ಯರ ಸಂಬಂಧ. ಹಾಗಾಗಿ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಪ್ರಾಚೀನ ಕಾಲದಿಂದಲೂ ಗುರು ಶಿಷ್ಯ ಪರಂಪರೆಗೆ ಮಹತ್ತರವಾದ ಮೌಲಿಕ ಸ್ಥಾನವಿದೆ. ಗುರು ಮನಸ್ಸು ಮಾಡಿದರೆ ಎಂತಹ ಕಗ್ಗಲ್ಲಿನಂತಹ ಶಿಷ್ಯರನ್ನೂ ಕೆತ್ತಿ, ತಿದ್ದಿ, ತೀಡಿ ಸುಂದರ ಜ್ಞಾನ ಶಿಲ್ಪಗಳಾಗಿ ಮಾಡಬಲ್ಲ. ಹಾಗೆಯೇ ಒಳ್ಳೆಯ ಶಿಷ್ಯನಾದವನು ಎಂತಹ ಕಠಿಣ ಮನಸ್ಸಿನ ಕೋಪಿಷ್ಠ ಗುರುವನ್ನೂ ತನ್ನ ವಿನಯಪೂರ್ವಕ ಸದ್ಗುಣಗಳಿಂದ ಕರಗುವಂತೆ ಮಾಡಿ ಅವರಿಂದ ಜ್ಞಾನವನ್ನು ಪಡೆದುಕೊಳ್ಳಬಲ್ಲ ಎಂದ ಅವರು, ಈ ದಿಸೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಗುರು ಭಕ್ತಿಯನ್ನು ಮೆರೆಸಿ ಒಳ್ಳೆ ಶಿಷ್ಯರಾಗಿ ಸಾಧಕರಾಗಬೇಕೆಂದು ಸಲಹೆ ನೀಡಿದರು.

ನಿವೃತ್ತರಾಗುತ್ತಿರುವ ಶಿಕ್ಷಕಿ ಮಹಾಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಶಿಕ್ಷಕಿ ಫಾತಿಮಾ, ಹಿರಣ್ಮಯಿ ಪ್ರತಿಷ್ಠಾನದ ಅಧ್ಯಕ್ಷ ಎ.ಸಂಗಪ್ಪ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಶುಭಾ, ಕಾವೇರಿ ಬಳಗದ ಅಧ್ಯಕ್ಷೆ ಎನ್‌.ಕೆ.ಕಾವೇರಿಯಮ್ಮ, ಓರಿಗಾಮಿ ಕಲಾವಿದ ಎಚ್.ವಿ.ಮುರಳೀಧರ, ಶಿಕ್ಷಕಿಯರಾದ ವೈಜಯಂತಿ, ಜಯಮೇರಿ, ಶಿವಮ್ಮ, ರಶ್ಮಿ, ಭಾರತಿ, ಅನ್ನಪೂರ್ಣ ಇನ್ನಿತರರು ಕಾರ್ಯ ಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.