ಮಹಿಳಾ ಸಂಘಗಳಿಗೆ ಕಾನೂನು ಅರಿವು ಅಗತ್ಯ
Team Udayavani, Feb 18, 2017, 1:03 PM IST
ಹುಣಸೂರು: ಬಾಲ್ಯ ವಿವಾಹ ನಿಷೇಧ, ಮಹಿಳೆಯರ ಸಂರಕ್ಷಣೆ ಬಗ್ಗೆ ಕಾಯ್ದೆ ಜಾರಿಯಲ್ಲಿದೆ. ಆದರೂ, ಆಗಾಗ್ಗೆ ಬಾಲ್ಯವಿವಾಹಗಳು ನಡೆಯುತ್ತಿವೆ. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿಲ್ಲ. ಆದ್ದರಿಂದ ಮಹಿಳಾ ಸಂಘಗಳು ಕಾನೂನಿನ ಬಗ್ಗೆ ಅರಿವು ಹೊಂದಿರಬೇಕೆಂದು ತಾಲೂಕು ಮಹಿಳಾ ಸಂರಕ್ಷಣಾಧಿಕಾರಿ ರಂಗಮಣಿ ಆತಂಕ ಅಭಿಪ್ರಾಯಪಟ್ಟರು.
ತಾಲೂಕಿನ ಬಿಳಿಕೆರೆ ಹೋಬಳಿಯ ಶಾಂತಿಪುರದಲ್ಲಿರುವ ಒಡಿಪಿ ಸಂಸ್ಥೆ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಮಹಿಳಾ ಸಮಾವೇಶದಲ್ಲಿ ಮಾತನಾಡಿದರು. ಹಳ್ಳಿಗಳಲ್ಲಿ ಇಂದಿಗೂ ಬಾಲ್ಯವಿವಾಹ ನಡೆಯುತ್ತಿದೆ. ಬಾಲಕಿಯರನ್ನು ಸಂರಕ್ಷಿಸುವ ಜವಾಬ್ದಾರಿ ಮಹಿಳಾ ಸಂಘಗಳ ಮೇಲಿದೆ ಎಂದರು.
ಮಹಿಳೆಯರು ಕಾನೂನು ನೆರವಿನಿಂದ ಕಿರುಕುಳ ಪ್ರಕರಣಗಳನ್ನು ಎದುರಿಸಬೇಕು. ಸಮಸ್ಯೆ ಹೊಂದಿದ್ದಲ್ಲಿ ಸಿಡಿಪಿಒ ಕಚೇರಿಗೆ ಮಾಹಿತಿ ನೀಡಬೇಕು. ಸ್ವ ಸಹಾಯ ಸಂಘಗಳ ಮಹಿಳೆಯರು ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ಕೋರಿದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರಾಜೇಶ್ವರಿ ಆರೋಗ್ಯ ಇಲಾಖೆಯಿಂದ ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯ, ಪೌಷ್ಟಿಕಾಂಶ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಸರ್ಕಾರದ ವತಿಯಿಂದ ಸಿಗುವ ಸೌಲಭ್ಯಗಳು ಹಾಗೂ ಮಹಿಳೆಯರ ವೈಯಕ್ತಿಕ ಶುಚಿತ್ವ, ರೋಗನಿರೋಧಕ ಚುಚ್ಚುಮದ್ದುಗಳ ಮಹತ್ವದ ಬಗ್ಗೆ ತಿಳಿಸಿದರು.
ಒಡಿಪಿ ಸಂಸ್ಥೆಯ ಸುನೀತಾ, ರಶ್ಮಿ ಸೇರಿದಂತೆ ವಿವಿಧ ಸ್ವಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ