ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕಲಾ ವಿಷಯ ಕಡೆಗಣನೆ


Team Udayavani, Jun 17, 2019, 3:00 AM IST

rashtrya

ಮೈಸೂರು: ಬಂಡವಾಳಶಾಹಿ ಹಾಗೂ ಖಾಸಗೀಕರಣಕ್ಕೆ ಹೆಚ್ಚು ಉದಾರತೆಯನ್ನು ರಾಷ್ಟ್ರೀಯ ಶಿಕ್ಷಣ ನೀತಿ ಕರಡಿನಲ್ಲಿ ಸೇರಿಸಲಾಗಿದೆ ಎಂದು ಶಿಕ್ಷಣ ಚಿಂತಕ ಬಿ.ಶ್ರೀಪಾದ ಭಟ್‌ ಹೇಳಿದರು.

ನಗರದ ಕಲಾಮಂದಿರದ ಮನೆಯಂಗಳದಲ್ಲಿ ಭಾನುವಾರ ಅಖೀಲ ಭಾರತ ಪ್ರಜಾ ವೇದಿಕೆ, ಫ್ರೈಡೇ ಪೋರಂ, ಮೈಸೂರು ನಾಗರಿಕ ಹಕ್ಕುಗಳಿಗಾಗಿ ಜನರ ಒಕ್ಕೂಟ (ಪಿಯುಸಿಎಲ್‌) ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2019 (ಕರಡು) ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವೃತ್ತಿಪರ ಕೋರ್ಸ್‌ಗಳಿಗೆ ಬೇಡಿಕೆ: ಬಂಡವಾಳಶಾಹಿ ಹಾಗೂ ಖಾಸಗೀಕರಣಕ್ಕೆ ಹೆಚ್ಚು ಉದಾರತೆಯನ್ನು ರಾಷ್ಟ್ರೀಯ ಶಿಕ್ಷಣ ನೀತಿ ಕರಡಿನಲ್ಲಿ ಸೇರಿಸಲಾಗಿದೆ. ಆದರೆ, ಸಾರ್ವಜನಿಕ ಸಬಲೀಕರಣದ ಹಿನ್ನೆಲೆಯಲ್ಲಿ ಕರಡು ರಚನೆಗೊಂಡಿಲ್ಲ.

ವೃತ್ತಿಪರ ಕೋರ್ಸ್‌ಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಮಾನವಿಕ ವಿಷಯಗಳನ್ನು ಓದುವವರ ಸಂಖ್ಯೆಯೇ ಕಡಿಮೆಯಾಗಿದೆ. 21ನೇ ಶತಮಾನ ತಂತ್ರಜ್ಞಾನದ ವಿಷಯಗಳನ್ನು ಪೋಷಿಸುತ್ತಿದೆ. ಕಲಾ ವಿಷಯಗಳನ್ನು ಕಡೆಗಣಿಸುತ್ತಿದೆ. ಹಾಗಾಗಿ ಈ ಕರಡು ಯಾವುದೇ ಗೈಡ್‌ ಇಲ್ಲದೆ ಮಂಡಿಸಿರುವ ಸಾಧಾರಣ ಪ್ರಬಂಧದಂತಿದೆ ಎಂದರು.

ವಿಸ್ತೃತ ಚರ್ಚೆ ನಡೆಯಬೇಕಿದೆ: ಕಡ್ಡಾಯ ಶಿಕ್ಷಣದ ಅಡಿ ರಾಜ್ಯ ಸರ್ಕಾರ ಒದಗಿಸಿರುವ ಆರ್‌ಟಿಇ ಕಾಯ್ದೆಯನ್ನು ಕರಡಿನಲ್ಲಿ ಕೈ ಬಿಡಲಾಗಿದೆ. ಅಲ್ಲದೆ, ಹೀಗಿರುವ 10 ಮತ್ತು 12ನೇ ತರಗತಿಯ ಪಬ್ಲಿಕ್‌ ಪರೀಕ್ಷೆಯನ್ನು 5 ಮತ್ತು 8ನೇ ತರಗತಿಗೆ ಸೇರಿಸುವ ಪ್ರಸ್ತಾವನೆಯೂ ಇದೆ.

ಹೀಗೆ ಮಾಡಿದರೆ ಶಿಕ್ಷಣದಿಂದ ಮಕ್ಕಳನ್ನು ಮೊಟಕುಗೊಳಿಸಿದಂತೆ ಆಗುತ್ತದೆ. ತ್ರಿಭಾಷಾ ನೀತಿ ಸೂತ್ರ ಕೂಡ ಕರಡಿನಲ್ಲಿ ಇದೆ. ತೀವ್ರ ವಿವಾದ ಸೃಷ್ಟಿಸಿದ ಈ ಅಂಶವನ್ನು ಕೇಂದ್ರ ಇದೀಗ ತೆಗೆದು ಹಾಕಿದೆ. ಆದರೂ ಇದರ ಬಗ್ಗೆ ವಿಸ್ತೃತ ಚರ್ಚೆ ನಡೆಯಬೇಕಿದೆ ಎಂದು ಹೇಳಿದರು.

ಕರಡಿನಲ್ಲಿ ತಿಳಿಸಿರುವ ಎಷ್ಟೋ ವಿಚಾರವನ್ನು ಹೇಗೆ ಕಾರ್ಯರೂಪಕ್ಕೆ ತರಬೇಕೆಂಬ ಗೊಂದಲವಿದೆ. 5ನೇ ತರಗತಿಯವರೆಗೆ ಮಕ್ಕಳು ಬರೆಯುವ ಅಭ್ಯಾಸ ಮಾಡುವಂತಿಲ್ಲ. ಬರೀ ಆಟದಿಂದ ಪಾಠ ಎಂಬ ವಿವರಣೆ ಇದೆ.

ಆದರೆ, ಇದನ್ನು ಶಿಕ್ಷಕರು ಹೇಗೆ ಅನುಷ್ಠಾನಕ್ಕೆ ತರಬೇಕೆಂಬ ವಿವರಣೆ ಇಲ್ಲ. ಆಶಯ ಮತ್ತು ಶಿಫಾರಸಿಗೂ ಬಹಳ ವ್ಯತ್ಯಾಸ ಇದೆ. ಯೋಜನೆ ಹೇಗೆ ಜಾರಿಗೆ ಬರಬೇಕೆಂಬ ಟಿಪ್ಪಣಿ ಇಲ್ಲ ಎಂದರು.

ಉನ್ನತ ಶಿಕ್ಷಣದಲ್ಲಿ ಸ್ಪಷ್ಟ ಗುರಿ: ಹಾಸನ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ.ಎಂ.ಶಂಕರ್‌ ಮಾತನಾಡಿ, ಉನ್ನತ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಸ್ಪಷ್ಟ ಗುರಿಯನ್ನು ಕಾಯ್ದೆ ಹೊಂದಿದೆ. ಪರಿಪೂರ್ಣ ಮನುಷ್ಯನಾಗಿ ವಿದ್ಯಾರ್ಥಿ ಹೊರ ಬರಬೇಕೆಂಬ ಆಶಯವನ್ನು ಕಾಯ್ದೆಯಲ್ಲಿ ಇರಿಸಲಾಗಿದೆ. ಹಾಗಾಗಿ ಇದೊಂದು ಆಶಾದಾಯಕ ಕರಡು.

ಕೆಲವೊಂದು ವಿಷಯಗಳು ಪದೇ ಪದೇ ರಿಪೀಟ್‌ ಆಗಿವೆ. ಇದನ್ನು ಸಂಕ್ಷಿಪ್ತವಾಗಿ ಹೇಳಬಹುದಿತ್ತು. 2035ರೊಳಗೆ ಉನ್ನತ ಶಿಕ್ಷಣದಲ್ಲಿ ಭಾರತವು ಶೇ.50ರಷ್ಟು ಸಾಧನೆಯನ್ನು ಮಾಡಬೇಕೆಂಬ ಗುರಿಯನ್ನು ಕರಡು ಹೊಂದಿದೆ. ದೇಶದಲ್ಲಿ ಬೃಹತ್‌ ಕೈಗಾರಿಕಾ ಸಂಸ್ಥೆಗಳು ಹುಟ್ಟುವಂತೆ ಬೃಹತ್‌ ಶಿಕ್ಷಣ ಸಂಸ್ಥೆಗಳು ಅಸ್ತಿತ್ವಕ್ಕೆ ಬರಬೇಕೆಂಬ ಆಶಯವನ್ನು ಕರಡು ವ್ಯಕ್ತಪಡಿಸುತ್ತದೆ ಎಂದು ತಿಳಿಸಿದರು.

ಪರ-ವಿರೋಧ ಚರ್ಚೆ: ರಾಷ್ಟ್ರೀಯ ಶಿಕ್ಷಣ ನೀತಿ-2019ರ ಕರಡು ಮಾರ್ಗದರ್ಶಕರೇ ಇಲ್ಲದೇ ರೂಪಿಸುವ ಪ್ರಬಂಧವಾಗಿದೆ ಎಂಬ ಕೂಗಿನ ನಡುವೆಯೇ ಇದು ವಿದ್ಯಾರ್ಥಿ ಕೇಂದ್ರಿತ ಹೊಸ ಶಿಕ್ಷಣ ನೀತಿ. 21ನೇ ಶತಮಾನಕ್ಕೆ ಅನುಗುಣವಾಗಿ ಸ್ಪರ್ಧಾತ್ಮಕವಾಗಿ ಕೂಡಿದೆ ಎಂಬ ಅಭಿಪ್ರಾಯಗಳು ಕೇಳಿ ಬಂದವು. ಜೊತೆಗೆ ಪರ-ವಿರೋಧ ಚರ್ಚೆಯೂ ಏರ್ಪಟ್ಟವು.

ಡಾ.ವಿ.ಲಕ್ಷ್ಮೀನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿ ಸ.ರ.ಸುದರ್ಶನ, ವೆಂಕಟರಾಜು ಹಾಜರಿದ್ದರು.

ಸಂಶೋಧನೆ, ಬೋಧನೆ ಹಾಗೂ ಕಾಲೇಜು ಎಂಬ ಮೂರು ಅಂಶಗಳಿಗೆ ಆದ್ಯತೆ ನೀಡಲಾಗಿದೆ. ಜಿಲ್ಲೆಗೊಂದು ಉನ್ನತ ಶಿಕ್ಷಣ ಸಂಸ್ಥೆ ಬರಬೇಕೆಂಬ ಸದಾಶಯವನ್ನೂ ಕರಡು ಬಿತ್ತರಿಸುತ್ತದೆ. ಏಕ ಕೋರ್ಸ್‌ ನೀಡುವ ಪದ್ಧತಿ ನಿಲ್ಲಬೇಕೆಂಬ ಅಂಶವನ್ನೂ ಕಾಯ್ದೆ ಹೇಳುತ್ತದೆ.
-ಪ್ರೊ.ಎಂ.ಶಂಕರ್‌, ಸ್ನಾತಕೋತ್ತರ ಕೇಂದ್ರದ ನಿರ್ದೇಶಕ, ಹಾಸನ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.