ಪೋಷಕರನ್ನು ಎಂದಿಗೂ ಮರೆಯದಿರಿ: ಮೇಯರ್‌


Team Udayavani, May 16, 2019, 3:00 AM IST

poshakarannu

ಮೈಸೂರು: ಇತ್ತೀಚೆಗೆ ಹೆತ್ತ ತಂದೆ, ತಾಯಿಯರನ್ನು ವೃದ್ಧಾಶ್ರಮಕ್ಕೆ ತಳ್ಳುವ ಘಟನೆಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಮೈಸೂರು ನಗರಪಾಲಿಕೆ ಮೇಯರ್‌ ಪುಷ್ಪಲತಾ ಜಗನ್ನಾಥ್‌ ಹೇಳಿದರು.

ಪಾತಿ ಫೌಂಡೇಷನ್‌ ವತಿಯಿಂದ ವಿಶ್ವ ತಾಯಂದಿರ ದಿನಾಚರಣೆ ಅಂಗವಾಗಿ ಕನಕಗಿರಿಯಲ್ಲಿರುವ ಭಾರತಿ ಸೇವಾ ವೃದ್ಧಾಶ್ರಮದಲ್ಲಿ ಆಯೋಜಿಸಿದ್ದ ಜನನಿ ಜನ್ಮಭೂಮಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಾವು ಎಷ್ಟೇ ಹುದ್ದೆ, ಜವಾಬ್ದಾರಿ ನಿರ್ವಹಿಸಿದರೂ, ಕೀರ್ತಿಗಳಿಸಿದರೂ ಅದಕ್ಕೆ ಕಾರಣಕರ್ತರು ನಮ್ಮ ತಂದೆ ತಾಯಂದಿರು ಹಾಗೂ ಪೋಷಕರು. ಪ್ರತಿಯೊಬ್ಬರು ಐಷಾರಾಮಿಯಾಗಿ ಜೀವನ ನಡೆಸುವ ಮುನ್ನ ಅಂಬೆಗಾಲಿಡುವುದನ್ನು ಕಲಿಸಿರುವ ಪೋಷಕರನ್ನು ಮರೆಯಬಾರದು.

ತಂದೆ, ತಾಯಂದಿರರನ್ನು ನಾವು ಕಾಪಾಡಿಕೊಳ್ಳದೇ ವೃದ್ಧಾಶ್ರಮಕ್ಕೆ ಸೇರಿಸುವುದು ಸರಿಯಲ್ಲ. ಇಂದಿನ ದಿನದಲ್ಲಿ ವೃದ್ಧಾಶ್ರಮಕ್ಕೆ ಸೇರಿಸುವ ಮಂದಿ ಹೆಚ್ಚಾಗಿದ್ದಾರೆ. ಇದಕ್ಕಾ ಕಾರಣ ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರವನ್ನು ನಾವು ಪಾಲಿಸದೇ ಇರುವುದು ಎಂದು ಹೇಳಿದರು.

ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ. ಪ್ರಕಾಶ್‌ ಮಾತನಾಡಿ, ತಾಯಂದಿರ ದಿನಾಚರಣೆ ಒಂದು ದಿನಕ್ಕೆ ಸೀಮಿತವಾದುದಲ್ಲ, ತಾಯಿ ಮಗುವಿಗೆ ಜನ್ಮ ನೀಡದನ್ನು ಸಂಭ್ರಮಿಸುವ ದಿನ. ಪ್ರಪಂಚದಲ್ಲಿ ಕೆಟ್ಟ ತಂದೆಯಿರಬಹುದು, ಆದರೆ ಕೆಟ್ಟ ತಾಯಿಯಂತು ಇರುವುದಿಲ್ಲ.

ತಂದೆ ತಾಯಂದಿರನ್ನು ಕಡ್ಡಾಯವಾಗಿ ಮಕ್ಕಳು ಕೊನೆಕಾಲದವರೆಗೂ ನೋಡಿಕೊಳ್ಳಬೇಕು ಎನ್ನುವ ವಿದೇಶದಲ್ಲಿರುವ ಕಾನೂನಿನ ಹಾಗೆಯೇ ನಮ್ಮ ಸರ್ಕಾರಗಳು ಕಠಿಣ ಯೋಜನೆಯನ್ನು ಮುಂದಿನ ದಿನದಲ್ಲಿ ರೂಪಿಸಬೇಕಾಗಿದೆ ಎಂದರು.

ಮಕ್ಕಳಲ್ಲಿ ಸಂಸ್ಕಾರ ಬೆಳೆಸುವಲ್ಲಿ ತಾಯಂದಿರ ಪಾತ್ರ ಮಹತ್ವದ್ದಾಗಿದ್ದು, ಪ್ರಾಥಮಿಕ ಹಂತದಲ್ಲಿ ಉತ್ತಮ ಸಂಸ್ಕಾರ ನೀಡಬೇಕು. ತಾಯಿಯ ಸ್ಥಾನವನ್ನು ಜಗತ್ತಿನ ಯಾವ ಸಂಪತ್ತೂ ತುಂಬಿಸಲಾಗದು. ತಾಯಿ ಎಂದರೆ ಮಾತೃ ಸ್ವರೂಪಿ ಕ್ಷೇಮಯಾಧರಿತ್ರಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹಿಳಾ ವೃದ್ಧರಿಗೆ ಸನ್ಮಾನಿಸಲಾಯಿತು. ನಗರಪಾಲಿಕೆ ಮಾಜಿ ಸದಸ್ಯ ಎಂ.ಡಿ ಪಾರ್ಥಸಾರಥಿ, ವೆಂಗಿಪುರ ಮಠದ ಇಳೈ ಆಳ್ವಾರ್‌ ಸ್ವಾಮೀಜಿ, ವೃದ್ಧಾಶ್ರಮ ವ್ಯವಸ್ಥಾಪಕ ಕೃಷ್ಣಮೂರ್ತಿ, ಮಹರ್ಷಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ತೇಜಸ್‌ ಶಂಕರ್‌,

ಚಕ್ರಪಾಣಿ, ವಿಕ್ರಂ ಅಯ್ಯಂಗಾರ್‌, ಅಜಯ್‌ ಶಾಸ್ತ್ರಿ, ವಿನಯ್‌ ಕಣಗಾಲ್, ಕಡಕೊಳ ಜಗದೀಶ್‌, ಜಯಸಿಂಹ, ಶ್ರೀಕಾಂತ್‌ ಕಶ್ಯಪ್‌, ರಂಗನಾಥ್‌, ಹರೀಶ್‌ ನಾಯ್ಡು, ಮಂಜುನಾಥ್‌, ನವೀನ್‌, ಮಹದೇವ್‌, ಪೇಪರ್‌ ರವಿ, ಮಂಜುಕವಿ ಭಾರತೀಶಂಕರ್‌ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.