ಹೊಸ ತಾಲೂಕುಗಳಿಗೆ ನಯಾಪೈಸೆ ಅನುದಾನವಿಲ್ಲ!


Team Udayavani, Sep 25, 2019, 3:00 AM IST

hosa-talu

ಮೈಸೂರು: ಹೊಸ ತಾಲೂಕುಗಳ ರಚನೆ ಸಂಬಂಧ ದಶಕಗಳ ಬೇಡಿಕೆಯಂತೆ ಹಿಂದಿನ ಕಾಂಗ್ರೆಸ್‌ ಸರ್ಕಾರ 2017ರಲ್ಲಿ ಘೋಷಿಸಿದ ರಾಜ್ಯದ 49 ಹೊಸ ತಾಲೂಕುಗಳ ಪೈಕಿ ಹಿಂದುಳಿದ ಎಚ್‌.ಡಿ.ಕೋಟೆ ತಾಲೂಕನ್ನು ವಿಭಜಿಸಿ ಸರಗೂರು ತಾಲೂಕು ಅಸ್ತಿತ್ವಕ್ಕೆ ತಂದು 21 ತಿಂಗಳಾದರೂ ತಹಶೀಲ್ದಾರ್‌ ನೇಮಕ ಹೊರತುಪಡಿಸಿ ಬೇರಾವುದೇ ಇಲಾಖೆಗಳು ಕಾರ್ಯಾರಂಭ ಮಾಡಿದಿರುವುದರಿಂದ ಅಲ್ಲಿನ ಜನರು ಇಂದಿಗೂ ಸರ್ಕಾರಿ ಕೆಲಸಗಳಿಗಾಗಿ ಎಚ್‌.ಡಿ.ಕೋಟೆ ತಾಲೂಕಿಗೆ ಬರುವುದು ತಪ್ಪಿಲ್ಲ. ಇತ್ತ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಘೋಷಣೆಯಾದ ಸಾಲಿಗ್ರಾಮ ತಾಲೂಕು ಈವರೆಗೆ ಅಸ್ತಿತ್ವಕ್ಕೆ ಬಂದಿಲ್ಲ.

ಹಿಂದುಳಿದ ತಾಲೂಕು: 2017-18ರ ಆಯವ್ಯಯದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರಗೂರು ಸೇರಿ 49 ಹೊಸ ತಾಲೂಕು ಘೋಷಣೆ ಮಾಡಿದ್ದರು. 2017ರ ಆಗಸ್ಟ್‌ನಲ್ಲಿ ಬಜೆಟ್‌ ಘೋಷಣೆಗೆ ಸಚಿವ ಸಂಪುಟದ ಅನುಮೋದನೆಯೂ ದೊರೆತಿತ್ತು. ಡಾ.ಡಿ.ಎಂ.ನಂಜುಂಡಪ್ಪ ವರದಿಯಲ್ಲಿ ರಾಜ್ಯದಲ್ಲೇ ಅತ್ಯಂತ ಹಿಂದುಳಿದ ತಾಲೂಕು ಎಂದು ಗುರುತಿಸಲಾಗಿರುವ ಎಚ್‌.ಡಿ.ಕೋಟೆ ತಾಲೂಕಿನ ಸರಗೂರು ಹೋಬಳಿಯ 51 ಗ್ರಾಮ ಮತ್ತು ಕಂದಲಿಕೆ ಹೋಬಳಿಯ 51 ಗ್ರಾಮ ಹಾಗೂ ಇಟ್ನಾ ಗ್ರಾಮ ಸೇರಿದಂತೆ 102 ಗ್ರಾಮಗಳನ್ನು ಒಳಗೊಂಡ ಸರಗೂರು ಹೊಸ ತಾಲೂಕು ರಚಿಸಿ ಸರ್ಕಾರ ರಾಜ್ಯಪತ್ರ ಪ್ರಕಟಿಸಿತ್ತು.

ಮೂಲಸೌಕರ್ಯವಿಲ್ಲ: ಸರ್ಕಾರದ ಆದೇಶದಂತೆ 2018ರ ಜನವರಿ 26ರ ಗಣರಾಜ್ಯೋತ್ಸವದ ದಿನ ಹೊಸ ತಾಲೂಕು ಅಸ್ತಿತ್ವಕ್ಕೆ ಬಂದು, ಅಲ್ಲಿನ ನಾಡಕಚೇರಿಯಲ್ಲಿ ತಹಶೀಲ್ದಾರ್‌ ಕಚೇರಿ ಕಾರ್ಯಾರಂಭ ಮಾಡಿತು. ಆದರೆ, ಕಳೆದ 21 ತಿಂಗಳಲ್ಲಿ ಹೊಸ ತಾಲೂಕಿಗೆ ನಾಲ್ವರು ತಹಶೀಲ್ದಾರರು ಬಂದಿರುವುದನ್ನು ಬಿಟ್ಟರೆ, ಹೊಸ ತಾಲೂಕಿಗೆ ಅಗತ್ಯ ಮೂಲ ಸೌಕರ್ಯಗಳು, ಬೇರೆ ಇಲಾಖೆಗಳ ಕಚೇರಿ ಕಟ್ಟಡಗಳ ನಿರ್ಮಾಣಕ್ಕಾಗಿ ಸರ್ಕಾರದಿಂದ ನಯಾ ಪೈಸೆ ಅನುದಾನವು ಬಂದಿಲ್ಲ.

ಅನುದಾನ ಇಲ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಹೊಸ ತಾಲೂಕಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆ ಮಂಜೂರಾಗಿದೆಯಾದರೂ ನೂತನ ತಾಲೂಕು ಕೇಂದ್ರದಲ್ಲಿ ಕಚೇರಿಯೇ ಇಲ್ಲದಿರುವುದರಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಡಿ.ಕೋಟೆಯಲ್ಲೇ ಕಾರ್ಯ ನಿರ್ವಹಿಸುವಂತಾಗಿದೆ. ಮಿನಿ ವಿಧಾನಸೌಧ ಹಾಗೂ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆಯಾದರೂ ಈವರೆಗೆ ಸರ್ಕಾರದಿಂದ ಪ್ರಸ್ತಾವನೆಗೆ ಅನುಮೋದನೆಯೂ ದೊರೆತಿಲ್ಲ. ಅನುದಾನವು ಮಂಜೂರಾಗಿಲ್ಲ.

ಸರಗೂರು ತಾಲೂಕು: ಸ್ವಾತಂತ್ರ್ಯ ಪೂರ್ವದಲ್ಲಿ ಮೈಸೂರು ಸಂಸ್ಥಾನದ ಆಳ್ವಿಕೆಯಲ್ಲಿ ಸರಗೂರು ತಾಲೂಕು ಕೇಂದ್ರವಾಗಿತ್ತು. ಕಾಲ ಕ್ರಮೇಣ 1905ನೇ ಇಸವಿಯಲ್ಲಿ ಸರಗೂರನ್ನು ಹೋಬಳಿ ಕೇಂದ್ರವಾಗಿಸಿ ಎಚ್‌.ಡಿ.ಕೋಟೆಯನ್ನು ತಾಲೂಕು ಕೇಂದ್ರವನ್ನಾಗಿ ಮಾಡಲಾಯಿತು. ಸರಗೂರು ತಾಲೂಕು ರಚನೆ ಮಾಡುವಂತೆ 1970ರಿಂದಲೂ ಹೋರಾಟ ನಡೆದಿತ್ತು. ನಾಗರಹೊಳೆ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಂತೆ ಕೇರಳದ ಗಡಿ ತಾಲೂಕಾಗಿರುವ 5 ಹೋಬಳಿಗಳೊಂದಿಗೆ ಭೌಗೋಳಿಕವಾಗಿ 1813 ಚದರ ಕಿ.ಮೀ ವಿಸ್ತೀರ್ಣದ ಅತಿ ದೊಡ್ಡ ತಾಲೂಕಾಗಿದ್ದ ಎಚ್‌.ಡಿ.ಕೋಟೆ ತಾಲೂಕಿನಿಂದ ಸರಗೂರು, ಕಂದಲಿಕೆ ಹೋಬಳಿಗಳನ್ನು ಬೇರ್ಪಡಿಸಿ ಸರಗೂರು ಹೊಸ ತಾಲೂಕು ರಚಿಸಲಾಗಿದೆ.

ಸಾಲಿಗ್ರಾಮ ತಾಲೂಕು: ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ.ಕುಮಾರಸ್ವಾಮಿ ರಾಜ್ಯದಲ್ಲಿ 12 ಹೊಸ ತಾಲೂಕು ಘೋಷಣೆ ಮಾಡಿದಾಗ ಶಾಸಕ ಸಾ.ರಾ.ಮಹೇಶ್‌ ಅವರ ಒತ್ತಾಸೆಯಂತೆ ಸಾಲಿಗ್ರಾಮ, ಮಿರ್ಲೆ, ಚುಂಚನಕಟ್ಟೆ ಈ ಮೂರು ಹೋಬಳಿಗಳನ್ನು ಸೇರಿಸಿ ಕೆ.ಆರ್‌.ನಗರ ತಾಲೂಕಿನ ಪ್ರಮುಖ ಹೋಬಳಿ ಕೇಂದ್ರ ಸಾಲಿಗ್ರಾಮವನ್ನೂ ಹೊಸ ತಾಲೂಕಾಗಿ ಘೋಷಣೆ ಮಾಡಿದ್ದು ಬಿಟ್ಟರೆ, ಹೊಸ ತಾಲೂಕಿನ ಅಸ್ತಿತ್ವದ ದೃಷ್ಟಿಯಿಂದ ಈವರೆಗೆ ಯಾವುದೇ ಕೆಲಸಗಳಾಗಿಲ್ಲ.

ಸರಗೂರು ಹೊಸ ತಾಲೂಕಾಗಿ ಘೋಷಣೆಯಾಗಿದ್ದು ಬಿಟ್ಟರೆ, ಹೊಸ ತಾಲೂಕಿಗೆ ಅಗತ್ಯವಾದ ಮೂಲ ಸೌಕರ್ಯಗಳನ್ನು ಕಲ್ಪಿಸಲು ಈವರೆಗೆ ಸರ್ಕಾರದಿಂದ 1 ರೂಪಾಯಿ ಅನುದಾನ ಬಂದಿಲ್ಲ. ಮಿನಿ ವಿಧಾನಸೌಧ ನಿರ್ಮಿಸಲು ನೀರಾವರಿ ಇಲಾಖೆಯ ಜಾಗ ಗುರುತಿಸಿ ಸರ್ಕಾರಕ್ಕೆ ಹಲವಾರು ಬಾರಿ ಪ್ರಸ್ತಾವನೆ ಸಲ್ಲಿಸಿದ್ದರೂ ಕೆಲಸ ಆಗಿಲ್ಲ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬಂದಾಗ ಕೂಡ ಈ ಸಂಬಂಧ ಮನವಿ ಸಲ್ಲಿಸಿದ್ದೇನೆ.
-ಅನಿಲ್‌ ಚಿಕ್ಕಮಾದು, ಶಾಸಕರು, ಎಚ್‌.ಡಿ.ಕೋಟೆ

ತಹಶೀಲ್ದಾರ್‌ ಹುದ್ದೆ ಬಿಟ್ಟರೆ ಬೇರಾವುದೇ ಅಧಿಕಾರಿಗಳನ್ನೂ ಇಲ್ಲಿಗೆ ಕೊಟ್ಟಿಲ್ಲ. ಹೀಗಾಗಿ ಎಲ್ಲಾ ಇಲಾಖೆಗಳು ಇನ್ನೂ ಎಚ್‌.ಡಿ.ಕೋಟೆಯಲ್ಲೇ ಇವೆ. ಸರಗೂರು ಪಟ್ಟಣದಲ್ಲಿ ಮಿನಿ ವಿಧಾನಸೌಧ ಮತ್ತು ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
-ಬಿ.ಎಚ್‌.ಚಿಗರಿ, ತಹಶೀಲ್ದಾರ್‌, ಸರಗೂರು

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.