ರಾತ್ರಿ ಬೆಳೆ ತಿಂದು ಜಮೀನಿನಲ್ಲೇ ಬೀಡು ಬಿಟ್ಟ ಕಾಡಾನೆಗಳು


Team Udayavani, Nov 19, 2021, 2:42 PM IST

ಕಾಡಾನೆ ಹಳ್ಳಿಗೆ

ಹುಣಸೂರು: ನಾಗರಹೊಳೆ ಉದ್ಯಾನದಿಂದ ಮೇವನ್ನರಸಿ ಹೊರಬಂದಿದ್ದ 6 ಆನೆಗಳ ಹಿಂಡು ಗುರುಪುರ ಸುತ್ತಮುತ್ತಲ ಗ್ರಾಮದಲ್ಲಿ ಸಾಕಷ್ಟು ಬೆಳೆ ತಿಂದು-ತುಳಿದು ನಾಶಪಡಿಸಿ, ಜನರ ಕಾಟದಿಂದ ಹೈರಾಣಾಗಿ ಕೊನೆಗೂ ಕುರುಚಲ ಕಾಡಿನಲ್ಲಿ ಆಶ್ರಯ ಪಡೆದಿದೆ.

ನಾಗರಹೊಳೆ ಉದ್ಯಾನದಿಂದ ನಾಡಿಗೆ ಬಂದಿದ್ದ ಆರು ಕಾಡಾನೆಗಳ ಹಿಂಡು ಬುಧವಾರ ರಾತ್ರಿ ಗುರುಪುರ ಟಿಬೇಟ್‌ ಕ್ಯಾಂಪ್‌ ಬಳಿಯ ಕುಂಟೇರಿ ಪಾರೆಕಡೆಯಿಂದ ದಾಟಿ ಬಂದು ಸಾಕಷ್ಟು ಬೆಳೆ ನಾಶ ಮಾಡಿ, ಗುರುವಾರ ಬೆಳಗ್ಗೆಯಾದರೂ ಹೊಸೂರು, ಕಾಳೇನಹಳ್ಳಿ ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಂಡಿವೆ. ಗ್ರಾಮದಲ್ಲಿ ಈ ಸುದ್ದಿ ಹಬ್ಬಿ ಸ್ಥಳದಲ್ಲಿ ನೂರಾರು ಮಂದಿ ಜಮಾಯಿಸಿ ಕಾಡಾನೆಗಳನ್ನು ಕಾಡಿಗಟ್ಟಲು ಹರಸಾಹಸ ಪಟ್ಟರು.

ದನಗಳಂತೆ ಅಟ್ಟಾಡಿದರು: ಆನೆಗಳ ಹಿಂಡು ಜಮೀನಿನಲ್ಲಿ ಬೀಡು ಬಿಟ್ಟಿದ್ದ ವೇಳೆ ಹುಚ್ಚೆದ್ದ ಯುವ ಪಡೆ ಆನೆಗಳಿಗೆ ಕಲ್ಲು ಹೊಡೆಯುತ್ತಾ, ಕೇಕೆ ಹಾಕುತ್ತಾ ಅತ್ತಿಂದಿತ್ತ ಅಟ್ಟಾಡಿಸಿದರು. ಗಾಬರಿಗೊಂಡ ಆನೆಗಳು ಕೊನೆಗೆ ಬೆಳಗ್ಗೆ 11ರ ವೇಳೆಗೆ ಗುರುಪುರ ಬಳಿಯ ಹುಣಸೇಕಟ್ಟೆ ಹಳ್ಳದ ಪ್ಲಾಂಟೇಷನ್‌ನಲ್ಲಿ ಸೇರಿಕೊಂಡು ಆಶ್ರಯ ಪಡೆದವು.

ಪೊಲೀಸ್‌-ಅರಣ್ಯ ಸಿಬ್ಬಂದಿ ಹರಸಾಹಸ; ಆನೆಗಳನ್ನು ನೋಡಲು- ಅಟ್ಟಾಡಿಸಲು ಜಮಾಯಿಸಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು-ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟರು. ಜನರನ್ನು ನಿಯಂತ್ರಿಸಿ, ಆನೆಗಳನ್ನು ಕಾಡಿಗಟ್ಟಲು ಸಿಬ್ಬಂದಿ ಶ್ರಮಪಟ್ಟರಾದರೂ ಜನರ ಕೂಗಾಟದಿಂದ ಬೆದರಿ ಹುಣಸೇಕಟ್ಟೆ ಹಳ್ಳ ಸೇರಿಕೊಂಡು ಜನರ ಕಾಟದಿಂದ ತಪ್ಪಿಸಿಕೊಂಡವು.

ಗಾಳಿಯಲ್ಲಿ ಗುಂಡು-ಪಟಾಕಿ ಸಿಡಿಸಿದರು: ಜಮೀನಿನಲ್ಲಿ ಬೀಡು ಬಿಟ್ಟಿದ್ದ ಆನೆಗಳ ಹಿಂಡನ್ನು ಕಾಡಿಗಟ್ಟಲು ಸಾಕಷ್ಟು ಪಟಾಕಿ ಸಿಡಿಸಿದರು. ಗಾಳಿಯಲ್ಲಿ ಗುಂಡು ಹಾರಿಸಲಾಯಿತಾದರೂ ಆನೆಗಳು ಕಾಡಿಗೆ ಮರಳಲಿಲ್ಲ. ಕೊನೆಗೆ ರಾತ್ರಿವೇಳೆ ಕಾಡಿಗಟ್ಟಲು ತೀರ್ಮಾನಿಸಿ, ಹುಣಸೂರು-ಎಚ್‌.ಡಿ.ಕೋಟೆ ಮುಖ್ಯ ರಸ್ತೆಯಲ್ಲಿ ಬೀಡುಬಿಟ್ಟು ಆನೆಗಳು ಹಳ್ಳದಿಂದ ಹೊರಬಾರದಂತೆ ಕಾವಲು ಕಾಯ್ದರು.

ಸಾಕಷ್ಟು ಬೆಳೆ ನಷ್ಟ: ರಾತ್ರಿ ಇಡೀ ಬೆಳೆ ತಿಂದು ಹಾಕಿದ್ದ ಆನೆಗಳ ಹಿಂಡು, ಕಾಳೇನಹಳ್ಳಿ, ಹೊಸೂರು ಮತ್ತಿತರ ಗ್ರಾಮಗಳಲ್ಲಿ ಜಮೀನಿಲ್ಲಿ ಬೆಳೆದಿದ್ದ ರಾಗಿ, ಜೋಳ, ಹುರಳಿ, ಅವರೆ ಮತ್ತಿತರ ಬೆಳೆಗಳನ್ನು ತಿಂದು-ತುಳಿದು ನಾಶ ಪಡಿಸಿವೆ.

ರೈಲ್ವೆ ಹಳಿ ಬೇಲಿ ಇಲ್ಲ: ನಾಗರಹೊಳೆ ಉದ್ಯಾ ನದ ವೀರನಹೊಸಹಳ್ಳಿ ವಲಯಕ್ಕೆ ಸೊಳ್ಳೆಪುರ ಅರಣ್ಯ ಪ್ರದೇಶ ಸೇರಿದ್ದು, ಈ ಭಾಗದಲ್ಲಿ ರೈಲ್ವೆ ಹಳಿ ತಡೆಗೋಡೆ ನಿರ್ಮಿಸದೆ ಅರಣ್ಯದಿಂದ ಆನೆಗಳು ಹೊರಬರುತ್ತಿರುವುದೇ ಕಾರಣವಾ ಗಿದ್ದು, ಮತ್ತೂಂದೆಡೆ ಕೆಲ ಚಾಲಕಿ ಆನೆಗಳು ರೈಲ್ವೆ ಹಳಿ ತಡೆಗೋಡೆಯನ್ನೇ ದಾಟಿ ಹೊರಬರುತ್ತಿ ರುವುದು ರೈತರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ.

ಟಾಪ್ ನ್ಯೂಸ್

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.