ಮೈತ್ರಿ ಸರ್ಕಾರಕ್ಕೆ ಸಂಕಷ್ಟವಿಲ್ಲ: ಸಿಎಂ


Team Udayavani, May 20, 2019, 3:00 AM IST

maitry

ಮೈಸೂರು: ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರಕ್ಕೆ ಯಾವುದೇ ಸಂಕಷ್ಟವಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತದೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ರೂಪಾ ಪ್ರಕಾಶನದ ಆಶ್ರಯದಲ್ಲಿ ಪರ್ತಕರ್ತ ಅಂಶಿ ಪ್ರಸನ್ನ ಕುಮಾರ್‌ ಅವರ ಸಮುದಾಯ ನಾಯಕರು ಮತ್ತು ಸಮಾಜಮುಖೀ ಶ್ರೀ ಸಾಮಾನ್ಯರು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೈಸೂರು ಜಿಲ್ಲೆಯ ಜನರು ರಾಜಕೀಯ ನಾಯಕರನ್ನು ಜಾತಿಯಾಧಾರದ ಮೇಲೆ ಆಯ್ಕೆ ಮಾಡಿಲ್ಲ. ಸಣ್ಣ ಪ್ರಮಾಣದ ಜನ ಸಮುದಾಯದ ನಾಯಕರನ್ನು ಸಂಸದರು, ಶಾಸಕರನ್ನಾಗಿ ಆಯ್ಕೆಯಾಗಿದ್ದಾರೆ. ಆದರೆ, ಇತ್ತೀಚೆಗೆ ಮೈಸೂರಿನಲ್ಲಿಯೂ ಸಹ ರಾಜಕೀಯದಲ್ಲಿ ಸ್ವಲ್ಪಮಟ್ಟಿಗೆ ಜಾತಿ ಪಸರಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲೆ ಸ್ವಾತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ಅನೇಕ ಪ್ರಭಾವಿ ನಾಯರನ್ನು ಈ ರಾಜ್ಯಕ್ಕೆ ನೀಡಿದ ಅಪರೂಪದ ಜಿಲ್ಲೆ. ಜೊತೆಗೆ 13 ಬಜೆಟ್‌ಗಳನ್ನು ಸಮರ್ಥವಾಗಿ ಕೊಟ್ಟ ಸಿದ್ದರಾಮಯ್ಯ, 13 ಚುನಾವಣೆಗಳನ್ನು ಎದುರಿಸಿದ ಶ್ರೀನಿವಾಸ್‌ ಪ್ರಸಾದ್‌ನಂತಹ ನಾಯಕರನ್ನು ನೀಡಿದೆ ಎಂದು ಹೇಳಿದರು.

ಡೇಂಜರಸ್‌: ಇತ್ತೀಚೆಗೆ ನಾನು ಮಾಧ್ಯಮದವರ ಹತ್ತಿರಕ್ಕೆ ಹೋಗ್ತಿಲ್ಲ. ಅವರ ಬಳಿ ಹೋಗೋದೇ ಡೇಂಜರಸ್‌ ಅಂತ ನಾನು ದೂರವೇ ಇದ್ದಿನಿ. ಹಿಂದಿನ ಕಾಲದ ಪತ್ರಿಕಾ ಧರ್ಮ ಪ್ರಿಂಟ್‌ ಮೀಡಿಯಾದಲ್ಲಿ ಉಳಿದುಕೊಂಡಿವೆ. ಇತ್ತೀಚೆಗೆ ಎಲೆಕ್ಟ್ರಾನಿಕ್‌ ಮಿಡಿಯಾಗಳನ್ನು ನೋಡಿದರೆ ನಮಗೆ ಗಾಬರಿಯಾಗುತ್ತಿದೆ.

ನಾನು ಮಾಧ್ಯಮಗಳನ್ನು ಅತ್ಯಂತ ಹತ್ತಿರಕ್ಕೆ ತೆಗೆದು ಕೊಂಡಿದ್ದೆ. ಆದರೆ, ಇತ್ತೀಚೆಗೆ ಮಾಧ್ಯಮಗಳನ್ನು ನಾನು ಲೆಕ್ಕಕ್ಕೆ ಇಟ್ಟಿಲ್ಲ. ಎಲೆಕ್ಟ್ರಾನಿಕ್‌ ಮಾಧ್ಯಮದ ಕೆಲವರು ಪ್ಯಾನಲ್‌ ಚರ್ಚೆ ಮಾಡುತ್ತಾ, ಅವರೇ ಈ ಭೂಮಿ ಮೇಲೆ ಎಲ್ಲವನ್ನು ಜವಾಬ್ದಾರಿ ಹೊತ್ತಿರುವವರಂತೆ ಮಾತನಾಡುತ್ತಾರೆ ಎಂದು ಮಾಧ್ಯಮದವರ ವಿರುದ್ಧ ಗರಂ ಆದರು.

ಟಿಆರ್‌ಪಿಗೆ ನಮ್ಮ ಬಳಕೆ: ನಿಮ್ಮ ಟಿಆರ್‌ಪಿಗಾಗಿ ನಮ್ಮನ್ನು ಬಳಸಿಕೊಳ್ತಿದ್ದಿರಾ. ಮಾಧ್ಯಮಗಳ ಮೇಲೆ ನಾನು ಕಾಯಿದೆ ಮಾಡುವ ಚಿಂತೆಯಿದೆ. ರಾಜಕಾರಣಿಗಳು ಅಂದ್ರೆ ಏನ್‌ ಅನ್ಕೊಂಡಿದ್ದೀರಾ ನೀವು ? ಅದ್ಯಾವೊª ಕಾಮಿಡಿ ಪ್ರೋಗ್ರಾಮ್‌ ಕಿಲ ಕಿಲ, ಕೇಳ್ರಪ್ಪೊ ಕೇಳಿ ಅಂತ ಅನ್ಕೊಂಡು ರಾಜಕಾರಣಿಗಳನ್ನು ನಿಮಗೆ ಬೇಕಾದಹಾಗೆ ತೋರಿಸುತ್ತಿದ್ದೀರಾ. ನಿಮಗೆ ಈ ಅಧಿಕಾರ ಕೊಟ್ಟವರು ಯಾರು?

ಅದ್ರಲ್ಲೂ ಎಲ್ಲಿದ್ದಿಯಪ್ಪಾ ನಿಖೀಲ್‌ ಅಂತ ಅರ್ಧ ಗಂಟೆ ಕಾರ್ಯಕ್ರಮ ಬೇರೆ ಎಂದು ದೃಶ್ಯ ಮಾಧ್ಯಮದವರ ಮೇಲೆ ಹರಿಹಾಯ್ದು, ಮಾಧ್ಯಮದವರು ಕೇವಲ ನಮ್ಮ ಬಗ್ಗೆ ಸ್ಟೋರಿ ಮಾಡುವುದನ್ನು ಬಿಟ್ಟು, ಜನಪರ ಕಾರ್ಯಕ್ರಮಗಳನ್ನು ಮಾಡಿ. ನಾನು ವರದಿಗಾರರ ಬಗ್ಗೆ ಮಾತನಾಡುತ್ತಿಲ್ಲ, ಬದಲಿಗೆ ಸಂಪಾದಕರಿಗೆ ಹೇಳ್ತಿನಿ. ನಡೆಸೊಕ್ಕೆ ಆಗಿಲ್ಲ ಅಂದ್ರೆ ನಿಮ್ಮ ಚಾನೆಲ್‌ಗ‌ಳ ಬಾಗಿಲು ಮುಚ್ಚಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸೋಲಿಗೆ ಹೆದರಲ್ಲ: ಎಲೆಕ್ಟ್ರಾನಿಕ್‌ ಮಾಧ್ಯಮದವರು ಊಹೇ ಮಾಡಿಕೊಂಡು ಸುದ್ದಿ ಮಾಡ್ತಿರಾ. ಸಮಾಜವನ್ನು ಹಾಳು ಮಾಡುವ ಕೆಲಸ ಮಾಡ್ತಿದ್ದೀರಾ, ನಾನು ಮಾಧ್ಯಮಗಳ ಕಡೆ ಮುಖ ಮಾಡೋಲ್ಲ. ಅದೇನ್‌ ಮಾಡ್ತಿರೋ ಮಾಡ್ಕೊಳಿ ಎಂದು ಹೇಳಿ, ಮಗ ನಿಖೀಲ್‌ ಸೋಲಿನಿಂದ ನಾನು ಮೀಡಿಯಾಗಳ ಬಳಿ ಹೋಗ್ತಿಲ್ಲ ಅಂತ ಹೇಳ್ತಾರೆ.

ಗ್ರಾಮ ಪಂಚಾಯತಿಯಿಂದ ಪ್ರಧಾನಿಯವರೆಗೂ ಹೋಗಿರುವ ಕುಟುಂಬ ನಮ್ಮದು. ಸೋಲು, ಗೆಲುವುಗಳಿಗೆ ಹೆದರುವ ಕುಟುಂಬ ನನ್ನದಲ್ಲ. ನಾನು ಮೀಡಿಯಾದರಿಂದ ಏನೂ ಅಧಿಕಾರಕ್ಕೆ ಬಂದಿಲ್ಲ ಎಂದು ನೇರವಾಗಿ ಮಾಧ್ಯಮಗಳ ವಿರುದ್ಧ ವಾಗ್ಧಾಳಿ ನಡೆಸಿದರು.

ಹೊಣೆ ಅರಿತು ಕೆಲಸ ಮಾಡಿ: ಕೊಡಗಿನಲ್ಲಾದ ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ 10 ಲಕ್ಷ ರೂ. ವೆಚ್ಚದಲ್ಲಿ 800 ಮನೆಗಳನ್ನು ನಿರ್ಮಾಣ ಮಾಡಿದ್ದೇವೆ. ಜೊತೆಗೆ ಮತ್ತೆ ಅತೀವೃಷ್ಟಿಯಂತಹ ಅನಾಹುತಗಳು ಆಗದಂತೆ ಅಧಿಕಾರಿಗಳ ಸಭೆ ನಡೆಸಿ, ಮುಂಜಾಗೃತೆ ವಹಿಸಲಾಗಿದೆ. ಆದರೆ, ಈ ಬಗ್ಗೆ ಯಾವ ಮಾಧ್ಯಮದವರೂ ಹೇಳುವುದಿಲ್ಲ. ನಾಡನ್ನು ಕಟ್ಟಲು ನಮ್ಮಷ್ಟೇ ನಿಮಗೂ ಜವಾಬ್ದಾರಿ ಇದೆ. ಅದನ್ನು ಅರಿತು ಕೆಲಸ ಮಾಡಬೇಕು ಎಂದರು.

ಸುದ್ದಿ ತಿರುಚಬೇಡಿ: ಚಿಂಚೋಳ್ಳಿಯಲ್ಲಿ ಚುನಾವಣೆ ವೇಳೆ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕಿತ್ತು ಎಂದು ನಾನು ನೀಡಿದ್ದ ಹೇಳಿಕೆಯನ್ನು ಮಾಧ್ಯಮದವರು ತಿರುಚಿ, ಅದನ್ನ ಸಿದ್ದರಾಮಯ್ಯ ಹಾಗೂ ಖರ್ಗೆ ನಡುವೆ ತರುವ ಯತ್ನ ಅಂತ ಸ್ಟೋರಿ ಮಾಡಿದರು.

ಇಂದು ಬೆಳಗ್ಗೆ ಸಚಿವ ಪುಟ್ಟರಂಗಶೆಟ್ಟಿ ಅವರು ಸಿಎಂ ಸ್ಥಾನದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಇದ್ದಾರೆ. ನಾನು ಸಿದ್ದರಾಮಯ್ಯ ಅವರನ್ನು ಆ ಸ್ಥಾನದಲ್ಲಿ ಇಟ್ಟು ನೋಡುತ್ತೇನೆ ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನು ? ಅವರು ಸಿದ್ದರಾಮಯ್ಯ ನೆರಳಲ್ಲಿ ಬೆಳೆದು ಬಂದವರು. ಹಾಗಾಗಿ ಆ ರೀತಿ ಹೆಳಿದ್ದಾರೆ. ಅದನ್ನು ನಿಮ್ಮಿಷ್ಟ ಬಂದಂತೆ ಟಿಆರ್‌ಪಿಗಾಗಿ ಏಕೆ ಬಳಕೆ ಮಾಡಿಕೊಳ್ಳುತ್ತೀರಾ ? ಎಂದು ಗುಡುಗಿದರು.

ಚಿತ್ರ ಹಿಂಸೆ: ಕಳೆದ ಮೂರೂವರೆ ತಿಂಗಳಿನಿಂದ ನನ್ನ ನೆಮ್ಮದಿ ಹಾಳು ಮಾಡಿದ್ದೀರಿ, ಒಂದು ರೀತಿ ಚಿತ್ರಹಿಂಸೆ ನೀಡಿದ್ದೀರಿ. ಸರಕಾರ ಬಿಧ್ದೋಗುತ್ತೆ ಅಂತ ವರದಿ ಮಾಡ್ತೀರಾ. ಈ ಸರ್ಕಾರಕ್ಕೆ ಸಂಕಷ್ಟ ಇದೆ ಅಂತೀರಾ, ಆದರೆ ಈ ಸರ್ಕಾರ ಈಗಲೂ ನಡೆಯುತ್ತಿರುವುದು ಸಿದ್ದರಾಮಯ್ಯ ಮಾರ್ಗದರ್ಶನದಲ್ಲಿ ಎಂದು ಹೇಳಿದರು.

ನಾವು ಹೋದರೆ ಟೆಂಪಲ್‌ ರನ್‌, ಮೋದಿ ಹೋದರೆ ಸುಮ್ನಿರ್ತೀರಾ: ನಾವು ದೇವರ ಭಕ್ತರು, ದೇಸ್ತಾನಗಳಿಗೆ ಹೋಗ್ತಿವಿ ಅದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ನಾವು ದೇವಸ್ತಾನಗಳಿಗೆ ಹೋದರೆ ಚುನಾವಣೆಗಾಗಿ ಟೆಂಪಲ್‌ ರನ್‌ ಅಂತಿರಾ. ನರೇಂದ್ರ ಮೋದಿ ಕೇದಾರನಾಥ, ಬದರಿನಾಥದಲ್ಲಿ ಈಶ್ವರನ ತಪಸ್ಸು ಮಾಡಿದರೆ ಏನು ಇಲ್ಲ. ಮೇ 23 ಬಳಿಕ ವರ ಖುರ್ಚಿ ಅಳ್ಳಾಡುತ್ತೆ ಅಂತ ಹೋಗಿ ತಪಸ್ಸಿಗೆ ಕೂತ್ಕೊಂಡಿರೋದು ಎಂದು ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.