ಮನೆಯಂದ್ರೆ ಬೋರ್‌, ಕಾಲೇಜೇ ಬೆಸ್ಟ್‌

ಮತ್ತೆ ಶಾಲಾ-ಕಾಲೇಜು ಬಂದ್‌ಗೆ ವಿದ್ಯಾರ್ಥಿಗಳ ಬೇಸರ

Team Udayavani, Mar 24, 2021, 6:20 PM IST

ಮನೆಯಂದ್ರೆ ಬೋರ್‌, ಕಾಲೇಜೇ ಬೆಸ್ಟ್‌

ಸಾಂದರ್ಭಿಕ ಚಿತ್ರ

ಮೈಸೂರು: ಕೋವಿಡ್ ಎರಡನೇ ಅಲೆ ರಾಜ್ಯದಲ್ಲೂ ಸದ್ದು ಮಾಡುತ್ತಿರುವ ಬೆನ್ನಲ್ಲೆ ಶಾಲೆ ಹಾಗೂ ಕಾಲೇಜುಗಳನ್ನು ಮತ್ತೆ ಬಂದ್‌ ಮಾಡಬೇಕೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಈ ನಡುವೆ ವಿದ್ಯಾರ್ಥಿ ಗಳು ಮಾತ್ರ ತರಗತಿ ಮುಂದುವರಿಸುವುದೇ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಕೋವಿಡ್ ಲಾಕ್‌ಡೌನ್‌ನಿಂದ ಶಾಲಾ-ಕಾಲೇಜುಗಳು ವರ್ಷಗಟ್ಟಲೆ ಮುಚ್ಚಿದ್ದ ಹಿನ್ನೆಲೆ ಮನೆಯಲ್ಲೇ ಕುಳಿತು ಬೇಸವಾಗಿದ್ದು, ದಿನಪೂರ್ತಿ ಮನೆಯಲ್ಲಿರಲು ಆಗುವುದಿಲ್ಲ. ಜೊತೆಗೆ ಆನ್‌ಲೈನ್‌ತರಗತಿಗಳಿಗೆ ನಾವು ಹೊಂದಿಕೊಳ್ಳಲಾಗುತ್ತಿಲ್ಲಎಂಬುದು ಗ್ರಾಮಾಂತರ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳ ಅಳಲು.

ತರಗತಿಗೆ ಬರಲು ಉತ್ಸುಕ: ಸರ್ಕಾರದ ಮಾರ್ಗಸೂಚಿ ಪಾಲಿಸಿ ನಾವು ತರಗತಿಗೆ ಹಾಜರಾಗುತ್ತೇವೆ. ತರಗತಿಯಲ್ಲಿ ಸಾಮಾಜಿಕ ಅಂತರ ಪಾಲಿಸಿಯೇ ಪಾಠ ಆಲಿಸುತ್ತೇವೆ. ಆದರೆ, ಶಾಲಾ,ಕಾಲೇಜುಗಳನ್ನು ಮಾತ್ರ ಬಂದ್‌ ಮಾಡಬೇಡಿ. ಇದು ವಿದ್ಯಾರ್ಥಿಗಳ ಮನವಿಯಾಗಿದೆ. ಇದಲ್ಲದೆಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಶಾಲೆ ಮತ್ತು ಕಾಲೇಜುಗಳು ಪುನಾರಂಭವಾದಗಿನಿಂದಲೂ ವಿದ್ಯಾರ್ಥಿಗಳು ಉತ್ಸಾಹದಿಂದ ತರಗತಿಗೆ ಹಾಜರಾಗುತ್ತಿದ್ದು, ಹಾಜರಾತಿ ಪ್ರಮಾಣ ಶೇ.90 ಕಂಡುಬಂದಿದೆ. ಜೊತೆಗೆ ಕೊರೊನಾ ಎರಡನೇ ಅಲೆ ಭೀತಿ ರಾಜ್ಯದೆಲ್ಲೆಡೆ ಆವರಿಸಿದ್ದರೂ, ಸೋಂಕಿಗೆಹೆದರದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಉತ್ಸುಕರಾಗಿರುವುದು ವಿಶೇಷ.

ಮತ್ತೆ ರಜೆ ಆತಂಕ: ಈಗಾಗಲೇ ಜಿಲ್ಲಾದ್ಯಂತ ಗ್ರಾಮಾಂತರ ಮತ್ತು ನಗರ ಪ್ರದೇಶದ ಎಲ್ಲಾಶಾಲಾ-ಕಾಲೇಜುಗಳಲ್ಲಿ ತರಗತಿಗಳು ಸುಸೂತ್ರವಾಗಿ ನಡೆಯುತ್ತಿದ್ದು, ಶೇ.90 ವಿದ್ಯಾರ್ಥಿಗಳು ತರಗತಿಗೆಹಾಜರಾಗುತ್ತಿದ್ದಾರೆ. ಈ ನಡುವೆ ಕೊರೊನಾಎರಡನೇ ಅಲೆ ಎದ್ದಿರುವುದರಿಂದ ಸರ್ಕಾರ ಮತ್ತೆ ರಜೆ ಘೋಷಣೆ ಮಾಡಲಿದೆ ಎಂಬ ಆತಂಕದಲ್ಲಿ ವಿದ್ಯಾರ್ಥಿಗಳಿದ್ದಾರೆ.

ಪೋಷಕರಲ್ಲಿ ಎದುರಾದ ಆತಂಕ: ಕೋವಿಡ್ ಎರಡನೇ ಅಲೆ ಹಿನ್ನೆಲೆ ಪೋಷಕರು ಮತ್ತೆಆತಂಕಗೊಂಡಿದ್ದರೆ. ಮಕ್ಕಳು ಮನೆಯಲ್ಲಿರದೆ ತರಗತಿಗೆ ಹಾಜರಾಗುತ್ತೇವೆ ಎದು ಹಠಕ್ಕೆ ಬಿದ್ದಿದ್ದಾರೆ.ಇದರಿಂದ ಪೇಚಿಗೆ ಸಿಲುಕಿರುವ ಪೋಷಕರು, ಸರ್ಕಾರದ ನಿರ್ಧಾರ ಏನೆಂಬುದನ್ನು ಎದುರುನೋಡುತ್ತಿದ್ದು, ಶಾಲಾ-ಕಾಲೇಜಿಗೆ ರಜೆ ನೀಡುವುದೆಸೂಕ್ತ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆ.

ಶಾಲಾ-ಕಾಲೇಜುಗಳಲ್ಲಿ ಎಸ್‌ಒಪಿ ಪಾಲನೆಗೆ ಸೂಚನೆ: ಜಿಲ್ಲಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಲ್ಲಿ

ಕೋವಿಡ್‌ ಸ್ಟಾಂಡರ್ಡ್‌ ಆಪರೇಟಿಂಗ್‌ ಪ್ರೊಸ್ಯೂಜರ್‌ (ಮಾಸ್ಕ್ ಬಳಕೆ, ಸಾಮಾಜಿಕ ಅಂತರಪಾಲನೆ, ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಸರ್‌ಪ್ರಕ್ರಿಯೆ) ನಡೆಸುವಂತೆ ಜಿಲ್ಲಾಡಳಿತ ಶಿಕ್ಷಣ ಇಲಾಖೆಗೆಸೂಚನೆ ನೀಡಿದ್ದು, ಅದರಂತೆ ಮತ್ತೆ ಎಲ್ಲಾಶಾಲಾ-ಕಾಲೇಜುಗಳಲ್ಲಿ ಎಸ್‌ಒಪಿ ಪ್ರಕ್ರಿಯೆ ಪುನಾರಂಭಗೊಂಡಿದೆ.

ಎಸ್‌ಒಪಿ ವೇಳೆ ವಿದ್ಯಾರ್ಥಿಗಳಲ್ಲಿ ಜ್ವರ, ಕೆಮ್ಮು ಅಥವಾ ದೇಹದಲ್ಲಿ ಉಷ್ಣಾಂಶ ಹೆಚ್ಚಿದ್ದರೆ ಅವರನ್ನೂಕೂಡಲೇ ಕೋವಿಡ್‌ ಟೆಸ್ಟ್‌ಗೆ ಒಳಪಡಿಸಿ, ತರಗತಿಯನ್ನು ಸ್ಯಾನಿಟೈಸ್‌ ಮಾಡಲು ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದ್ದು, ತಮ್ಮ ವ್ಯಾಪ್ತಿಯಶಾಲೆಗಳಲ್ಲಿ ಕೋವಿಡ್‌ ಪ್ರಕರಣ ಪತ್ತೆಯಾದಲ್ಲಿ ಪರಿಸ್ಥಿತಿ ಅವಲೋಕಿಸಿ ಅಂತಹ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಲಾಗಿದೆ.

ಜೊತೆಗೆ ಒಂದು ಕೊಠಡಿಯಲ್ಲಿ 20 ಮಕ್ಕಳುಮೀರದಂತೆ ತರಗತಿ ನಡೆಸುವುದು, ಬಿಸಿ ನೀರಿನವ್ಯವಸ್ಥೆ, ಶೌಚಾಲಯ ಶುಚಿತ್ವ ಕಾಪಾಡಿಕೊಳ್ಳುವುದುಸೇರಿ ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡುವಮೂಲಕ ಕೋವಿಡ್ ಸೋಂಕು ಹರಡದಂತೆ ಶಿಕ್ಷಣ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಕೋವಿಡ್ ಎರಡನೇ ಅಲೆ ಹಿನ್ನೆಲೆ ಜಿಲ್ಲೆಯಾ ಎಲ್ಲಾ ಶಾಲೆಗಳಲ್ಲೂ ಸ್ಟಾಂಡರ್ಡ್‌ ಆಪರೇಟಿಂಗ್‌ಪ್ರೊಸ್ಯೂಜರ್‌ ಪಾಲನೆ ಮಾಡಲಾಗುತ್ತಿದ್ದು, ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬರುವಮಕ್ಕಳನ್ನು ಕೋವಿಡ್‌ ಟೆಸ್ಟ್‌ಗೆ ಒಳಪಡಿಸ ಲಾಗುವುದು. ಮಕ್ಕಳಿಗೆ ಸೋಂಕುಹರಡದಂತೆ ಮುಂಜಾಗ್ರತ ಕ್ರಮಗಳನ್ನುಕೈಗೊಳ್ಳಲಾಗಿದ್ದು, ಪೋಷಕರು ತಮ್ಮಮಕ್ಕಳನ್ನು ಭಯ ಪಡದೆ ಶಾಲೆಗೆ ಕಳುಹಿಸಬಹುದು. ಡಾ.ಪಾಂಡುರಂಗ, ಡಿಡಿಪಿಐ ಮೈಸೂರು

 

ಸತೀಶ್‌ ದೇಪುರ

ಟಾಪ್ ನ್ಯೂಸ್

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.