ಸಂವಿಧಾನದಲ್ಲಿ ರಾಜ, ರಾಣಿ ಎಂಬ ಯಾವ ಪಟ್ಟಕ್ಕೂ ವಿಶೇಷ ಮಹತ್ವ ಇಲ್ಲ: ಯದುವೀರ್
Team Udayavani, Mar 19, 2024, 10:50 PM IST
ಮೈಸೂರು: ನಾನು ಈಗಾಗಲೇ ಹೇಳಿದ್ದೇನೆ, ಸಂವಿಧಾನದಲ್ಲಿ ರಾಜ, ರಾಣಿ ಎಂಬ ಯಾವ ಪಟ್ಟಕ್ಕೂ ವಿಶೇಷ ಮಹತ್ವ ಇಲ್ಲ. ಎಲ್ಲರೂ ಪ್ರಜೆಗಳೇ. ಇಷ್ಟನ್ನು ಮಾತ್ರ ನಾನು ಹೇಳಬಲ್ಲೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದರು.
ಸುದ್ದಿಗಾರರೊಡನೆ ಮಾತನಾಡಿದ ಯದುವೀರ್, ಯಾರು ರಾಜ ಎಂಬ ಮುಖ್ಯಮಂತ್ರಿ ಸಿದ್ದ ರಾ ಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರಲ್ಲದೆ, ಮುಖ್ಯಮಂತ್ರಿಗಳ ಹೇಳಿಕೆ ನನ್ನ ಗಮನಕ್ಕೆ ಬಂದಿಲ್ಲ. ಆ ವಿಚಾರದ ಬಗ್ಗೆ ನಾನು ಹೇಗೆ ಪ್ರತಿಕ್ರಿಯಿಸಲಿ ಎಂದರು.
ಸುತ್ತೂರು ಮಠಕ್ಕೆ ಭೇಟಿ
ಇದಕ್ಕೂ ಮುನ್ನ ನಗರದ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಅವರು, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಮಠಕ್ಕೆ ತೆರಳಿದ ಯದುವೀರ್ ಅವರಿಗೆ ಮಠದ ವತಿಯಿಂದ ಪೂರ್ಣಕುಂಭ ಸ್ವಾಗತ ಕೋರಲಾಯಿತು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಯದುವೀರ್ ಶ್ರೀಗಳ ಆಶೀರ್ವಾದ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು