ಸಕ್ರಿಯವಾಗದ ಕಾವೇರಿ ಕುಟುಂಬ: ವಿಷಾದ


Team Udayavani, Sep 8, 2017, 11:24 AM IST

mys1.jpg

ಮೈಸೂರು: ರಾಜಕೀಯ ಕಾರಣಗಳಿಗಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನದಿ ನೀರು ಹಂಚಿಕೆ ಕಗ್ಗಂಟಾಗಿರುವಾಗ ಎರಡೂ ರಾಜ್ಯಗಳ ರೈತರ ನಡುವೆ ಬಾಂಧವ್ಯ ಹಾಗೂ ಸಂವಹನ ಹೆಚ್ಚಿಸುವ ನಿಟ್ಟಿನಲ್ಲಿ ಇಶಾ ಫೌಂಡೇಶನ್‌ನ ಸದ್ಗುರು ಜಗ್ಗಿ ವಾಸುದೇವ್‌ ಅವರು ಕಾವೇರಿ ನದಿ ತೀರದ ರೈತರ ಸಭೆ ನಡೆಸಲು ಮುಂದಾಗಿರುವುದು ಕುತೂಹಲ ಮೂಡಿಸಿದೆ.

ದಶಕಗಳ ಹಿಂದೆ ರೈತಸಂಘಟನೆಗಳ ಮುಖಂಡರು ಸೇರಿ ಇಂತಹದೊಂದು ಪ್ರಯತ್ನ ನಡೆಸಿದ್ದರು. ಆದರೆ, ಕೆಲ ಕಾರಣಗಳಿಂದಾಗಿ ನ್ಯಾಯಾಲಯದ ಹೊರಗೆ ಸೌಹಾರ್ದಯುತವಾಗಿ ಸಮಸ್ಯೆ ಇತ್ಯರ್ಥಪಡಿಸಿಕೊಳ್ಳಬೇಕು ಎಂಬ ರೈತ ಮುಖಂಡರ ಪ್ರಯತ್ನ ಸಫ‌ಲವಾಗಿರಲಿಲ್ಲ. 

ಕಾವೇರಿ ಕುಟುಂಬ: 2003ರಲ್ಲಿ ಕಾವೇರಿ ನದಿ ಪಾತ್ರದಲ್ಲಿ ಬರುವ ಕರ್ನಾಟಕ, ತಮಿಳುನಾಡು, ಪುದುಚೇರಿ, ಕೇರಳ ರಾಜ್ಯಗಳ ರೈತ ಮುಖಂಡರನ್ನೊಳಗೊಂಡ 24 ಜನರ ಕಾವೇರಿ ಕುಟುಂಬ ರಚಿಸಿಕೊಳ್ಳಲಾಗಿತ್ತು. ಕರ್ನಾಟಕದಿಂದ ಶಾಸಕರಾದ ರೈತ ಮುಖಂಡ ಕೆ.ಎಸ್‌.ಪುಟ್ಟಣ್ಣಯ್ಯ, ಪೊ›.ಕೆ.ಸಿ.ಬಸವರಾಜು, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ, ರೈತ ಮುಖಂಡರಾದ ಕೆ.ಬೋರಯ್ಯ, ಸುನಂದಜಯರಾಂ, ಪೊ›.ಎಚ್‌.ಎಲ್‌.ಕೇಶವಮೂರ್ತಿ,

ಕೊಡಗಿನ ಸುಬ್ಬಯ್ಯ, ರಂಗನಾಥ್‌, ಸಿ.ಡಿ.ಮಹದೇವಯ್ಯ, ಮಲ್ಲಯ್ಯ, ಪ್ರಕಾಶ್‌ ಕಮ್ಮರಡಿ ಸೇರಿದಂತೆ 11 ಜನ ಸದಸ್ಯರು, ನಂತರದ ದಿನಗಳಲ್ಲಿ ಕೋಡಿಹಳ್ಳಿ ಚಂದ್ರಶೇಖರ್‌ ಹಾಗೂ ಕುರುಬೂರು ಶಾಂತಕುಮಾರ್‌ ಅವರನ್ನೂ ಈ ಕುಟುಂಬದ ಸದಸ್ಯರನ್ನಾಗಿ ಸೇರಿಸಿಕೊಳ್ಳಲಾಗಿತ್ತು. ತಮಿಳುನಾಡಿನಿಂದ 11 ಜನ, ಕೇರಳ ಮತ್ತು ಪುದುಚೇರಿ ರಾಜ್ಯಗಳಿಂದ ತಲಾ ಒಬ್ಬರು ಈ ಕುಟುಂಬದ ಸದಸ್ಯರಾಗಿದ್ದರು. ತಮಿಳುನಾಡಿನಿಂದ ರಾಮಸ್ವಾಮಿ ಅಯ್ಯಂಗಾರ್‌, ಕರ್ನಾಟಕದಿಂದ ಭವಾನಿಶಂಕರ್‌ ಕುಟುಂಬದ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು.

ಕಾವೇರಿ ಕುಟುಂಬದ ಸದಸ್ಯರು ಎರಡೂ ರಾಜ್ಯಗಳ ನದಿ ಪಾತ್ರದ ಅಚ್ಚುಕಟ್ಟು ಪ್ರದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡು ಸಮಸ್ಯೆ ಮನವರಿಕೆ ಮಾಡಿಕೊಂಡಿದ್ದರು. ಈ ಸಂಬಂಧ ಸುಮಾರು 14 ಸಭೆಗಳು ನಡೆದಿದ್ದು ವಿಶೇಷ. ಅರಣ್ಯ ನಾಶ, ಹವಾಮಾನ ವೈಪರಿತ್ಯದಿಂದ ವರ್ಷದಿಂದ ವರ್ಷಕ್ಕೆ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿದ್ದು, ನೀರಿನ ಕೊರತೆ ಎದುರಾಗಿದೆ.

ಹೀಗಾಗಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕಿರುವುದರಿಂದ ಕಾವೇರಿ ನದಿ ಪಾತ್ರದ ರೈತರು ಬೆಳೆ ಪದ್ಧತಿ ಬದಲಿಸಿಕೊಳ್ಳಬೇಕು, ಬೆಳೆ ರಜೆಯನ್ನೂ ಘೋಷಿಸಬೇಕು ಎಂಬ ಬಗ್ಗೆಯೂ ಚರ್ಚೆ ನಡೆದಿತ್ತು. ಎರಡೂ ರಾಜ್ಯಗಳಲ್ಲಿ ಹಲವು ಸುತ್ತಿನ ಸಭೆಗಳನ್ನು ನಡೆಸಿ ಚರ್ಚಿಸಿದ ಬಳಿಕ ತಮಿಳುನಾಡಿನ ಅಂದಿನ ಮುಖ್ಯಮಂತ್ರಿ ಜೆ.ಜಯಲಲಿತಾ, ಕರ್ನಾಟಕದ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ದುಂಡುಮೇಜಿನ ಸಭೆ ನಡೆಸಿ ಕಾವೇರಿ ನೀರು ಹಂಚಿಕೆ ಸಂಬಂಧದ ಶತಮಾನಗಳ ಸಮಸ್ಯೆಗೆ ನ್ಯಾಯಾಲಯದ ಹೊರಗೆ ಪರಿಹಾರ ಕಂಡುಕೊಳ್ಳುವ ಗಂಭೀರ ಪ್ರಯತ್ನ ನಡೆದಿತ್ತು.

ಆದರೆ, ಮುಖ್ಯಮಂತ್ರಿಗಳ ಭೇಟಿ ಮಾಡುವ ವಿಚಾರದಲ್ಲಿ ತಮಿಳುನಾಡಿನ ಕೆಲವರು ಅಡ್ಡಗಾಲು ಹಾಕಿದ್ದರಿಂದ ನಮ್ಮ ಪ್ರಯತ್ನ ಕೈಗೂಡಲಿಲ್ಲ ಎನ್ನುತ್ತಾರೆ ಕಾವೇರಿ ಕುಟುಂಬದ ಸದಸ್ಯರಾಗಿರುವ ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ. ಈಗಲೂ ಕಾವೇರಿ ಕುಟುಂಬ ಜೀವಂತವಾಗಿದೆ. ಆದರೆ, ನ್ಯಾಯಾಲಯದ ಆದೇಶದಿಂದ ಕರ್ನಾಟಕಕ್ಕೆ ಹಿನ್ನಡೆ ಉಂಟಾಗಿರುವುದರಿಂದ ಸಕ್ರಿಯವಾಗಿಲ್ಲ ಎನ್ನುತ್ತಾರೆ ಅವರು.

ಒಂದೊಮ್ಮೆ ತಮಿಳುನಾಡಿನ ಕೆಲ ರೈತ ಮುಖಂಡರು ಅಡ್ಡಗಾಲು ಹಾಕದಿದ್ದರೆ ಅಂದೇ ಸಮಸ್ಯೆ ಬಗೆಹರಿಯುತ್ತಿತ್ತು. ಇದು ಸಾಧ್ಯವಾಗಿದ್ದರೆ, ಕಾವೇರಿ ನ್ಯಾಯಾಧೀಕರಣ ಕರ್ನಾಟಕಕ್ಕೆ ಕೊಟ್ಟಿದ್ದಕ್ಕಿಂತ 15 ಟಿಎಂಸಿ ನೀರು ಹೆಚ್ಚುವರಿಯಾಗಿ ಸಿಗುತ್ತಿತ್ತು ಎಂದು ಬಡಗಲಪುರ ನಾಗೇಂದ್ರ “ಉದಯವಾಣಿ’ ಜತೆಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಸದ್ಗುರು ರಾಷ್ಟ್ರಯಾತ್ರೆ ಇಂದು ಮೈಸೂರಿಗೆ: ನದಿಗಳನ್ನು ರಕ್ಷಿಸಿ ಅಭಿಯಾನ ಕೈಗೊಂಡಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ರಾಷ್ಟ್ರಯಾತ್ರೆ ಶುಕ್ರವಾರ ಮೈಸೂರು ತಲುಪಲಿದೆ. ರಾಷ್ಟ್ರಯಾತ್ರೆ ಅಂಗವಾಗಿ ಸಂಜೆ 6ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್‌ ಸಾರ್ವಜನಿಕ ಸಭೆ ನಡೆಯಲಿದ್ದು, ರಾಜವಂಶಸ್ಥರಾದ ಡಾ.ಪ್ರಮೋದಾದೇವಿ ಒಡೆಯರ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಸುತ್ತೂರು ಮಠಾಧೀಶರಾದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ನಟ ಗಣೇಶ್‌, ಸಂಸದ ಪ್ರತಾಪ್‌ ಸಿಂಹ, ಶಾಸಕ ವಾಸು ಭಾಗವಹಿಸಲಿದ್ದಾರೆ. ಸುಮಾರು 10 ಸಾವಿರ ಮಂದಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ. 

ರೈತರ ಸಭೆ: ಇದಕ್ಕೂ ಮುನ್ನ ಕೆಆರ್‌ಎಸ್‌ ಜಲಾಶಯದ ಹಿನ್ನೀರಿನ ಮೀನಾಕ್ಷಿಪುರದಲ್ಲಿ ಬೆಳಗ್ಗೆ 8.30ರಿಂದ 10ಗಂಟೆವರೆಗೆ ಕರ್ನಾಟಕ ಮತ್ತು ತಮಿಳುನಾಡು ಕಾವೇರಿ ನದಿ ಪಾತ್ರದ ರೈತರ ಸಭೆಯನ್ನು ಸದ್ಗುರು ನಡೆಸಲಿದ್ದಾರೆ. 

ಸದ್ಗುರು ಅಭಿಯಾನದ ಉದ್ದೇಶವಿದು: ಭಾರತದ ನದಿಗಳು ದುಃಸ್ಥಿತಿಗೆ ತಲುಪಿದ್ದು, ಒಂದೊಮ್ಮೆ ವರ್ಷಪೂರ್ತಿ ಹರಿಯುತ್ತಿದ್ದ ನದಿಗಳು ಇಂದು ಮಳೆಗಾಲದಲ್ಲಿ ಹರಿಯುವ ನದಿಗಳಾಗಿವೆ. ಅದೆಷ್ಟೋ ಚಿಕ್ಕಪುಟ್ಟ ನದಿಗಳು ಹೇಳಹೆಸರಿಲ್ಲದಂತೆ ಮಾಯವಾಗಿವೆ. ಮುಂದಿನ 15 ವರ್ಷಗಳಲ್ಲಿ ನಮಗೆ ಬದುಕಲು ಅವಶ್ಯವಿರುವಷ್ಟು ನೀರೂ ಸಿಗುವುದಿಲ್ಲ.

ಮುಖ್ಯ ನದಿಗಳಾದ ಗಂಗಾ, ಕೃಷ್ಣಾ, ನರ್ಮದಾ, ಕಾವೇರಿ ಬಹು ಬೇಗನೆ ಬತ್ತಿ ಹೋಗುತ್ತಿವೆ. ಹೀಗಾಗಿ ನದಿಗಳನ್ನು ರಕ್ಷಿಸಿಕೊಳ್ಳಬೇಕಿರುವುದರಿಂದ ದೇಶಾದ್ಯಂತ ಜನ ಜಾಗೃತಿ ಮೂಡಿಸಲು ಇಶಾ ಫೌಂಡೇಶನ್‌ನ ಸದ್ಗುರು ಜಗ್ಗಿ ವಾಸುದೇವ್‌ ಅವರು ಕನ್ಯಾಕುಮಾರಿಯಿಂದ ಹಿಮಾಲಯದವರೆಗೆ ರಾಷ್ಟ್ರಯಾತ್ರೆ ಕೈಗೊಂಡಿದ್ದಾರೆ.

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.