ಯಾವ ಪಕ್ಷದೊಂದಿಗೂ ಹೊಂದಾಣಿಕೆಯಿಲ್ಲ


Team Udayavani, Apr 2, 2018, 6:15 AM IST

180401kpn79.jpg

ಮೈಸೂರು: ಈ ಚುನಾವಣೆಯಲ್ಲಿ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಳ್ಳದೆ, ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜೆಡಿಎಸ್‌ಗೆ ಮತ ಹಾಕಿದರೆ, ಅದು ಕಾಂಗ್ರೆಸ್‌ಗೆ ಮತ ಹಾಕಿದಂತೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ. ಆದರೆ, ವಾಸ್ತವವಾಗಿ ಜೆಡಿಎಸ್‌ಗೆ ಮತಹಾಕಿದರೆ ಅದು ಬಿಜೆಪಿಗೆ ಮತ ನೀಡಿದಂತೆ. ಕೋಮುವಾದಿ ಪಕ್ಷಕ್ಕೆ ಬೆಂಬಲ ನೀಡಿದಂತೆ ಎಂದು ತಿರುಗೇಟು ನೀಡಿದರು.

ವಿಶ್ರಾಂತಿ ಹೆಸರಲ್ಲಿ ಬಂಡೀಪುರದ ರೆಸಾರ್ಟ್‌ನಲ್ಲಿ ಕುಳಿತು ಮುಖ್ಯಮಂತ್ರಿಯವರು ಹಣದ ಬಂಡಲ್‌ ಸಿದ್ಧಮಾಡುತ್ತಿದ್ದರು ಎಂಬ ಕುಮಾರಸ್ವಾಮಿ ಹೇಳಿಕೆಗೆ, ಚುನಾವಣೆ ಸಂದರ್ಭದಲ್ಲಿ ತಾವು ಮಾಡಿದ್ದನ್ನು ನೆನಪಿಸಿಕೊಂಡು ಅವರು ಈ ರೀತಿಯ ಹೇಳಿಕೆಗಳನ್ನು ಕೊಡುತ್ತಾರೆ ಎಂದು ಕಿಡಿ ಕಾರಿದರು.

ಬಿಜೆಪಿಯ ಕೆಲವರು ಸಂಪರ್ಕದಲ್ಲಿದ್ದಾರೆ: ಮಾಲೀಕಯ್ಯ ಗುತ್ತೇದಾರ್‌ ಅವರು ಬಿಜೆಪಿಗೆ ಹೋಗಿರುವುದರಿಂದ ಸ್ಥಳೀಯ ಬಿಜೆಪಿ ನಾಯಕರು ಏನು ಮಾಡಬೇಕು? ಹಲವಾರು ವರ್ಷಗಳಿಂದ ಬಿಜೆಪಿಯಲ್ಲಿರುವ ಅವರು ಏನು ತಾನೇ ಮಾಡಿಯಾರು? ಸಹಜವಾಗಿ ಅವರು ಕಾಂಗ್ರೆಸ್‌ ಸೇರುತ್ತಾರೆ. ಈಗಾಗಲೇ ಕೆಲವರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದರು.ಇನ್ನು, ಬಿಜೆಪಿಯ ಮಾಜಿ ಶಾಸಕ ಹರತಾಳು ಹಾಲಪ್ಪ ಕಾಂಗ್ರೆಸ್‌ ಸೇರುವ ಕುರಿತು ಯಾವುದೇ ತೀರ್ಮಾನವಾಗಿಲ್ಲ. ಸ್ಥಳೀಯ ಮುಖಂಡರ ಜತೆಗೆ ಅವರು ಮಾತನಾಡುತ್ತಿದ್ದಾರೆ.

ತಾವು ಹೈಕಮಾಂಡ್‌ ಜತೆಗೆ ಮಾತನಾಡಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಹಿಂದುಳಿದ ವರ್ಗಗಳ ನಾಯಕರಾಗಿರುವ ಹಾಲಪ್ಪ ವಿರುದ್ಧದ ಆರೋಪ ನಿರಾಧಾರ ಎಂಬುದು ನ್ಯಾಯಾಲಯದಲ್ಲಿ ಸಾಬೀತಾಗಿದೆ ಎಂದು ಸಮರ್ಥಿಸಿಕೊಂಡರು. ಜೊತೆಗೆ, ಮಾಜಿ ಸಚಿವ ಜನಾರ್ದನ ರೆಡ್ಡಿಯವರು ಕಾಂಗ್ರೆಸ್‌ ಸೇರುವ ಬಗ್ಗೆ ಯಾವುದೇ ಮಾತುಕತೆ ಆಗಿಲ್ಲ. ಅವರು ನಮ್ಮನ್ನು ಸಂಪರ್ಕಿಸಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಹೆಗಡೆಯವರನ್ನು ವಜಾ ಮಾಡಿ: ಅನಂತಕುಮಾರ್‌ ಹೆಗಡೆ ಅವರು ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನೀಡಿದ್ದು ಸತ್ಯವಲ್ಲವೆ? ಅಮಿತ್‌ ಶಾ ಪಾಲ್ಗೊಂಡಿದ್ದ ಸಭೆಯಲ್ಲಿ ಅದನ್ನು ದಲಿತ ಮುಖಂಡರು ಪ್ರಶ್ನಿಸಿದರೆ ತಪ್ಪೇನು? ಇದರಲ್ಲಿ ಕಾಂಗ್ರೆಸ್‌ ಕೈವಾಡವಿಲ್ಲ. ಅನಂತಕುಮಾರ್‌ ಹೆಗಡೆ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಅಲ್ಲ. ಅನಂತಕುಮಾರ್‌ ಹೆಗಡೆ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುತ್ತೇವೆ ಎಂದು ಹೇಳಬೇಕಿತ್ತು, ಇಲ್ಲವೇ ವಜಾ ಮಾಡಬೇಕಿತ್ತು.

7.5 ಕ್ವಿಂಟಲ್‌ ಸೇಬಿನ ಹಾರ
ಸಿದ್ದರಾಮಯ್ಯನವರು ಮೂರನೇ ದಿನವೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ಗ್ರಾಮಗಳಲ್ಲಿ ಭರ್ಜರಿ ರೋಡ್‌ ಶೋ ನಡೆಸಿದರು. ಬಿಸಿಲಿನಿಂದ ರಕ್ಷಣೆ ಪಡೆಯಲು ಕಾಂಗ್ರೆಸ್‌ ಟೋಪಿ, ತಂಪು ಕನ್ನಡಕ ಹಾಕಿಕೊಂಡು, ಮಧ್ಯೆ ನೀರು ಕುಡಿಯುತ್ತಾ ದಣಿವಾರಿಸಿಕೊಂಡು ಉತ್ಸಾಹದಿಂದಲೇ ಮುನ್ನಡೆದರು. ಸಿದ್ದು ಹೋದಲ್ಲೆಲ್ಲಾ ಗ್ರಾಮದ ಪ್ರವೇಶ ದ್ವಾರದಲ್ಲಿ ತಳಿರು-ತೋರಣ ಕಟ್ಟಿ, ಮಂಗಳವಾದ್ಯದೊಂದಿಗೆ ಮಹಿಳೆಯರು ಆರತಿ ಎತ್ತಿ ಬರಮಾಡಿಕೊಂಡರು. ಹೂಟಗಳ್ಳಿಗೆ ಆಗಮಿಸಿದಾಗ ಅಭಿಮಾನಿಗಳು ಅವರಿಗೆ 7.5 ಕ್ವಿಂಟಲ್‌ ತೂಕದ ಸೇಬಿನ ಬೃಹತ್‌ ಹಾರ ಹಾಕಿದರು. ಈ ಬೃಹತ್‌ ಹಾರವನ್ನು ಹೊತ್ತು ತರಲು ಕ್ರೇನ್‌ ಬಳಸಲಾಗಿತ್ತು.

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಏ.12ರ ಬಳಿಕ ಪ್ರಕಟವಾಗಲಿದೆ.
 – ಸಿದ್ದರಾಮಯ್ಯ, ಮುಖ್ಯಮಂತ್ರಿ.

ಟಾಪ್ ನ್ಯೂಸ್

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

4-mother

Mother: ತಾಯಿಯ ವೃತ್ತಿಗಳು; ಆಕ್ಯುಪೇಷನಲ್‌ ಥೆರಪಿಯ ಒಳನೋಟಗಳು

3-sirsi

Sirsi: ಬಾರದ ಹೈನು ಪ್ರೋತ್ಸಾಹ; ಶೀಘ್ರ ಬಿಡುಗಡೆಗೆ ಒತ್ತಾಯ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.