ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ
Team Udayavani, Jun 28, 2018, 11:46 AM IST
ಚಾಮರಾಜನಗರ: ನಗರದ ವಿವಿಧೆಡೆ ಪ್ರಗತಿಯಲ್ಲಿರುವ ರಸ್ತೆ ಹಾಗೂ ಚರಂಡಿ ಕಾಮಗಾರಿಗಳನ್ನು ಜಿಲ್ಲಾಧಿಕಾರಿ.ಬಿ. ಕಾವೇರಿ ಪರಿಶೀಲಿಸಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಗಾಳೀಪುರ ಬಡಾವಣೆ, ದೊಡ್ಡ ಅಂಗಡಿ ಬೀದಿ, ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಬಳಿ ರಸ್ತೆ, ಪಿಕಾರ್ಡೋ ಸ್ಪತ್ರೆ ರಸ್ತೆ ಹಾಗೂ ಕಲಾ ಮಂದಿರದ ಮುಂಭಾಗದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳಿಗೆ ಈ ಸಂದರ್ಭದಲ್ಲಿ ಸ್ಥಳೀಯರು ಸಮಸ್ಯೆಗಳನ್ನು ಆಲಿಸಿ, ನಗರದ ಅಭಿವೃದ್ಧಿ ಉದ್ದೇಶದಿಂದ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಸ್ಥಳೀಯರು ಸಹಕರಿಸಬೇಕು ಎಂದು ಮನವಿ ಮಾಡಿದರು.
ನಗರದ ಜೋಡಿ ರಸ್ತೆಯ ಜಿಲ್ಲಾಸ್ಪತ್ರೆ ಬಳಿ ನಡೆಯುತ್ತಿರುವ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಕಾವೇರಿ, ಅಲ್ಲಿ ಆರ್ಧಕ್ಕೆ ನಿಲ್ಲಿಸಿರುವ ಚರಂಡಿ ಕಾಮಗಾರಿ ಪರಿಶೀಲಿಸಿದರು. ಜಿಲ್ಲಾಸ್ಪತ್ರೆಗೆ ಜಿಲ್ಲೆಯ ವಿವಿಧೆಡೆ ಗಳಿಂದ ದಿನನಿತ್ಯ ಆಗಮಿಸುವ ಸಾವಿರಾರು ರೋಗಿಗಳು, ಸಾರ್ವಜನಿಕರಿಗೆ ತೊಂದರೆಯಾಗಬಾರದು. ಅರ್ಧಕ್ಕೆ ನಿಂತಿರುವ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸೂಚನೆ ನೀಡಿದರು.
ನಗರಸಭೆ ಸಹಾಯಕ ಕಾರ್ಯಪಾಲಕ ಎಂಜಿ ನಿಯರ್ ಸತ್ಯಮೂರ್ತಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಜೂನಿಯರ್ ಎಂಜಿನಿಯರ್ ಶ್ರೀನಿವಾಸ್, ಲೋಕೊಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ವಿಜಯ್ಕುಮಾರ್, ಒಳಚರಂಡಿ (ಯುಜಿಡಿ) ಕಾಮಗಾರಿ ಎಂಜಿನಿಯರ್ ರಮೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ