ಕಾಲಹರಣ ಮಾಡುವ ಅಧಿಕಾರಿಗೆ ನೋಟಿಸ್‌


Team Udayavani, Aug 1, 2017, 12:00 PM IST

mys5.jpg

ತಿ.ನರಸೀಪುರ: ಕುಡಿಯುವ ನೀರು, ಮನೆ, ಮಳಿಗೆಗಳಿಂದ ಕಂದಾಯ ವಸೂಲಾತಿ ಮಾಡಲು ವಿಫ‌ಲರಾಗಿರುವ ಪುರಸಭೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಸ್ಥಾಯಿ ಸಮಿತಿ ಅಧ್ಯಕ್ಷ ಮಹದೇವಸ್ವಾಮಿ ಕಂದಾಯ ಅಧಿಕಾರಿ ರಾಣಿಗೆ ಸೂಚಿಸಿದರು.

ಪುರಸಭೆ ಸಭಾಂಗಣದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಪುರಸಭೆ ಅಧಿಕಾರಿಗಳು ಕಂದಾಯ ವಸೂಲಾತಿ ಮಾಡುವಲ್ಲಿ ವಿಫ‌ಲರಾಗಿದ್ದು, ಪುರಸಭೆಯಲ್ಲಿ ಹಣದ ಕೊರತೆ ಎದುರಾಗಿ ಪುರಸಭೆ ವ್ಯಾಪ್ತಿಯ ಜನರಿಗೆ ಸಮರ್ಪಕವಾಗಿ ಮೂಲ ಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ. ಜೊತೆಗೆ ವಸೂಲಿಗಿಂತ ಅಧಿಕಾರಿಗಳ ವೇತನ ಜಾಸ್ತಿಯಾಗಿದೆ. ಅಲ್ಲದೇ ಕೆಲ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ನಿರ್ವಹಿಸದೇ ಕಾಲಹರಣ ಮಾಡುತ್ತಿದ್ದು ಇಂತಹ ಅಧಿಕಾರಿಗೆ ನೋಟಿಸ್‌ ಜಾರಿ ಮಾಡಬೇಕು ಎಂದರು.

ಬಸ್‌ ನಿಲ್ದಾಣದಲ್ಲಿ ಖಾಸಗಿ ಬಸ್‌ಗಳಿಂದ ಶುಲ್ಕ ವಸೂಲಿ ಮಾಡುವ ವ್ಯಕ್ತಿ ಸಿನಕ್ಕೊಂದು ರೀತಿಯ ಹಣ ಕಟ್ಟುತ್ತಿದ್ದು ಪುರಸಭೆಗೆ ಹಣ ವಂಚಿಸುತ್ತಿದ್ದಾನೆ.   ಹಾಗಾಗಿ ಶೀಘ್ರದಲ್ಲೇ ಈ ಬಗ್ಗೆ ಟೆಂಡರ್‌ ಕರೆದು ಪ್ರತಿ ಬಸ್‌ಗೆ ಇಂತಿಷ್ಟು ಹಣ ಎಂದು ನಿಗದಿಪಡಿಸಬೇಕೆಂದು ಸಭೆಯಲ್ಲಿದ್ದ ಸದಸ್ಯರು ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಹಲವೆಡೆ ಪುರಸಭೆ ಸೇರಿದ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದು ಕೂಡಲೇ ಅಂತಹ ಸ್ಥಳ ಗುರುತಿಸಿ ಬೇಲಿ ಹಾಕುವ ಜೊತೆಗೆ ನಾಮಫ‌ಲಕ ಅಳವಡಿಸಿ ಎಂದು ಸದಸ್ಯ ರಾಘವೇಂದ್ರ ಒತ್ತಾಯಿಸಿದರು. ಈಗಾಗಲೇ ಪಟ್ಟಣದ ಹಲವೆಡೆ ಅಕ್ರಮ ಒತ್ತುವರಿ ಜಾಗ ತೆರವುಗೊಳಿಸಲಾಗಿದ್ದು ಶೀಘ್ರದಲ್ಲೇ ಆ ಸ್ಥಳಕ್ಕೆ ಪುರಸಭೆಗೆ ಸೇರಿದ ಜಾಗವೆಂದು ನಾಮಫ‌ಲಕ ಅಳವಡಿಸಲಾಗುವುದೆಂದು ಮುಖ್ಯಾಧಿಕಾರಿ ನಾಗರತ್ನ ಸಭೆಯಲ್ಲಿ ತಿಳಿಸಿದರು.

ಪಟ್ಟಣದ ಮುರುಗನ್‌ ಟಾಕೀಸ್‌ ಎದುರಿನ ವಿನಾಯಕ ಕಾಲೋನಿಗೆ ತೆರಳುವ ರಸ್ತೆ ಸಂಪೂರ್ಣ ಹಳ್ಳಕೊಳ್ಳದಿಂದ ಕೂಡಿದೆ ಜೊತೆಗೆ ರಸ್ತೆ ಮಧ್ಯದಲ್ಲೇ ಬಾಳೆಮಂಡಿಗಳು ಆಕ್ರಮವಾಗಿ ತಲೆ ಎತ್ತಿದ್ದು ಕೂಡಲೇ ಅದನ್ನು ತೆರವುಗೊಳಿಸಿ ರಸ್ತೆ ದುರಸ್ತಿಪಡಿಸುವಂತೆ ಸದಸ್ಯರು ಮುಖ್ಯಾಧಿಕಾರಿಗೆ ಒತ್ತಾಯಿಸಿದರು.

ವಾಲ್ಮೀಕಿ ಹಾಗೂ ಬಂಗಾರಪ್ಪ ಬಡಾವಣೆ ನಿವಾಸಿಗಳ ಖಾಲಿ ನಿವೇಶನಕ್ಕೆ ಸಂಬಂಧಪಟ್ಟಂತೆ ಹಲವು ಜನರಿಗೆ ಮೂಲ ದಾಖಲಾತಿಗಳಿಲ್ಲದೇ ಇ-ಸ್ವತ್ಛತು ಮಾಡಿಕೊಳ್ಳಲು ತೊಂದರೆಯಾಗಿದೆ. ಹಾಗಾಗಿ ಮೂಲ ದಾಖಲಾತಿ ಇಲ್ಲದ ಜನರಿಗೆ ಇಸಿ ನೋಡಿ ಇ-ಸ್ವತ್ತು ಮಾಡಿಕೊಡುವಂತೆ ಸದಸ್ಯ ರಾಘವೇಂದ್ರ ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದರು.

ಬಡಾವಣೆ ಹಲವು ನಿವಾಸಿಗಳಿಗೆ ಹಕ್ಕು ಪತ್ರ ಇದ್ದರೂ ತಮ್ಮ ನಿವೇಶನದ ಸ್ಥಳ ಗೊತ್ತಿಲ್ಲ ಹಾಗಾಗಿ ಶೀಘ್ರದಲ್ಲಿ ಮತ್ತೂಮ್ಮೆ ಜಾಗದ ಪರಿಶೀಲನೆ ನಡೆಸಿ ನಿವೇಶನ ಖಾತೆ ಮಾಡಿಕೊಡಲಾಗುವುದು ಇದಕ್ಕೆ ಸದಸ್ಯರು ಸಹಕಾರ ನೀಡಬೇಕೆಂದು ನಾಗರತ್ನಮ್ಮ ತಿಳಿಸಿದರು.

ಪುರಸಭೆ ವತಿಯಿಂದ ಮೂವರು ಪೌರ ಕಾರ್ಮಿಕರನ್ನು ಸಿಂಗಾಪುರ ಅಧ್ಯಯ್ಯನ ಪ್ರವಾಸಕ್ಕೆ ಕಳುಹಿಸಲು ಸರ್ಕಾರದ ಆದೇಶ ಮಾಡಿದೆ. ಹಾಗಾಗಿ ಸದಸ್ಯರು ಮೂವರು ಅರ್ಹ ಪೌರಕಾರ್ಮಿಕರನ್ನು ಸೂಚಿಸಬೇಕೆಂದು ಆರೋಗ್ಯಧಿಕಾರಿ ಚೇತನ್‌ಕುಮಾರ್‌ ಹೇಳಿದರು. ಸಿಂಗಾಪುರ ಪ್ರವಾಸಕ್ಕೆ ಇಚ್ಚಿಸುವ ಪೌರಕಾರ್ಮಿಕರನ್ನು ಗುರುತಿಸಿ ಅವರಿಗೆ ಆರೋಗ್ಯ ತಪಾಸಣೆ ಮಾಡಿಸಿ ನಂತರ ಅರ್ಹರನ್ನು ಆಯ್ಕೆ ಮಾಡಿ ಕಳುಹಿಸಿಕೊಡುವಂತೆ ಸದಸ್ಯರು ಅಧಿಕಾರಿಗೆ ತಿಳಿಸಿದರು.

ಅಧ್ಯಕ್ಷೆ ಸುಧಾ, ಉಪಾಧ್ಯಕ್ಷೆ ರತ್ನಮ್ಮ, ಸದಸ್ಯರಾದ ಪುಟ್ಟಸ್ವಾಮಿ, ಉಮೇಶ್‌, ಮಲ್ಲೇಶ್‌ ನಾಯ್ಕ, ಗುಲ್ಜರ್‌ಖಾನ್‌, ನಾಗೇಂದ್ರ, ಎನ್‌.ಮಹದೇವಸ್ವಾಮಿ, ಸಿ.ಮಹದೇವ, ರಾಜಮ್ಮ, ಮೀನಾಕ್ಷಿ, ಅಧಿಕಾರಿಗಳಾದ ಕಿರಿಯ ಎಂಜಿನಿಯರ್‌ ಮೈತ್ರಾವತಿ, ಯೋಜನಾಧಿಕಾರಿ ಕೆಂಪರಾಜು, ಜೆಇ ಪುರುಷೋತ್ತಮ್‌, ಲೆಕ್ಕ ಸಹಾಯಕ ವಿನಯ್‌, ಆಶಾರಾಣಿ ಇತರರು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.