ಹಾಡಿಯ ಶಾಲೆಗೆ ಹೊಸ ರೂಪ ನೀಡಿದ ಎನ್‌ಎಸ್‌ಎಸ್‌


Team Udayavani, Jan 14, 2020, 3:00 AM IST

haadiya-shale

ಹುಣಸೂರು: ಎನ್‌ಎಸ್‌ಎಸ್‌ ಶಿಬಿರಾರ್ಥಿಗಳು ತಾಲೂಕಿನ ಕೆಂಡಗಣ್ಣಸ್ವಾಮಿ ಗದ್ದಿಗೆ ಸಮೀಪ‌ ದತ್ತು ಪಡೆದಿರುವ ತಕ್ಕಲು ಹಾಡಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಂಪ್ಯೂಟರ್‌ ಬಳಸುವುದನ್ನು ಕಲಿ ಕೊಟ್ಟರು. ಶಾಲೆಯ ಕೊಠಡಿಗಳಿಗೆ ಸುಣ್ಣ ಬಣ್ಣ ಬಳಿದು, ನಲಿ-ಕಲಿ ಚಪ್ಪರವನ್ನು ನಿರ್ಮಿಸಿದರಲ್ಲದೇ ಸಸಿ ನೆಟ್ಟು ಪೋಷಿಸುವಂತೆ ಮನವಿ ಮಾಡಿದರು.

ಮೈಸೂರಿನ ಜೆಎಸ್‌ಎಸ್‌ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜಿನ ಎನ್‌ಎಸ್‌ಎಸ್‌ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ತಾಲೂಕಿನ ಗದ್ದಿಗೆಯಲ್ಲಿ ಆಯೋಜಿಸಲಾಗಿತ್ತು. ಪ್ರತಿದಿನವು ಕಾನೂನು ಅರಿವು-ನೆರವು, ವ್ಯಕ್ತಿತ್ವದ ಬೆಳವಣಿಗೆಗೆ ಆರೋಗ್ಯಕರ ಅಭ್ಯಾಸಗಳು, ಪರಿಸರ ಸಂರಕ್ಷಣೆಯಲ್ಲಿ ಯುವಜನತೆಯ ಪಾತ್ರ, ಸಾಮಾಜಿಕ ಉಪಯುಕ್ತ ಉತ್ಪಾದನಾ ಕಾರ್ಯಗಳು ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಎನ್‌ಎಸ್‌ಎಸ್‌ ಪಾತ್ರ ವಿಷಯಗಳಿಗೆ ಸಂಬಂಧಿಸಿದಂತೆ ಗಣ್ಯರು ಉಪನ್ಯಾಸ ನೀಡಿದರು.

ನಿತ್ಯ ವಿಶೇಷ ಕಾರ್ಯಕ್ರಮ ನಡೆಸುವ ಮೂಲಕ ಗ್ರಾಮಸ್ಥರ ಮನಗೆದ್ದರು. ಶಿಬಿರದಲ್ಲಿ ಪ್ರಬಂಧ, ರಸಪ್ರಶ್ನೆ, ಚಿತ್ರಕಲೆ, ಜನಪದಗೀತೆ, ಭಾವಗೀತೆ, ದೇಶಭಕ್ತಿಗೀತೆ, ಶಿಬಿರದ ಸಾಂಪ್ರದಾಯಿಕ ಅರಿವು ಮೂಡಿಸುವ ಮೆರವಣಿಗೆ, ಆಶುಭಾಷಣ, ಕಿರುಚಲನಚಿತ್ರ ನಿರ್ಮಾಣ, ನಾಟಕ ಮತ್ತು ಚರ್ಚಾ ಸ್ಪರ್ಧೆಗಳು ನಡೆದವು. ವಿವಿಧ ಕಲಾವಿದರ ತಂಡವು ಸಾಂಸ್ಕೃತಿಕ ರಸದೌತಣ ನೀಡಿತು.

ಶ್ರಮದಾನ: ಶಿಬಿರಾರ್ಥಿಗಳು ಶ್ರಮದಾನದ ಮೂಲಕ ಗದ್ದಿಗೆ ಕೆಂಡಗಣ್ಣಸ್ವಾಮಿ ದೇವಾಲಯದ ಬಳಿಯ ಲಕ್ಷ್ಮಣತೀರ್ಥ ನದಿಯ ಹೆಬ್ಬಳ್ಳ ಆವರಣ, ನೀರಿನ ಟ್ಯಾಂಕ್‌ ಹಾಗೂ ಗ್ರಾಮದ ಬೀದಿಗಳನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು. ಜಾಥಾ ಹಾಗೂ ಬೀದಿ ನಾಟಕಗಳ ಮೂಲಕ ಗ್ರಾಮಸ್ಥರು ಹಾಗೂ ತಕ್ಕಲ ಹಾಡಿಯ ಗಿರಿಜನರಿಗೆ ಅರಿವು ಮೂಡಿಸಿದರು.

ಉಚಿತ ಚಿಕಿತ್ಸೆ: ಗದ್ದಿಗೆಯ ಕೆಂಡಗಣ್ಣೇಶ್ವರಸ್ವಾಮಿ ಮತ್ತು ಮಹದೇಶ್ವರಸ್ವಾಮಿ ಸೇವಾ ಟ್ರಸ್ಟ್‌ ಸಹಕಾರದಲ್ಲಿ ನಡೆದ ಶಿಬಿರದಲ್ಲಿ ಸಸ್ಯಧಾಮ ಮಾಲೀಕ, ಪರಿಸರವಾದಿ ನಾಗಭೂಷಣ್‌ ಸಹಯೋಗದೊಂದಿಗೆ ಕೆ.ಎಸ್‌.ಗದ್ದಿಗೆ, ಕುಟ್ಟವಾಡಿ ಗ್ರಾಮದಲ್ಲಿ 50ಕ್ಕೂ ಹೆಚ್ಚಿನ ಗಿಡಗಳನ್ನು ನೆಟ್ಟರು. ಸ್ವಚ್ಛತೆಗೆ ಸಂಬಂಧಿಸಿದ ಚಿತ್ರಗಳನ್ನು ರಚಿಸಲಾಯಿತು. ಜೆಎಸ್‌ಎಸ್‌ ಆರ್ಯುವೇದಿಕ್‌ ಆಸ್ಪತ್ರೆಯ ಹಿರಿಯವೈದ್ಯ ಡಾ.ಓಂಪ್ರಕಾಶ್‌ ನೇತೃತ್ವದ ತಂಡ 130ಕ್ಕೂ ಹೆಚ್ಚು ಮಂದಿ ಗ್ರಾಮಸ್ಥರಿಗೆ ತಪಾಸಣೆ ಹಾಗೂ ಮಕ್ಕಳ ದಂತ ವೈದ್ಯ ಡಾ. ನಿಸರ್ಗ ಕನ್ಸರ್‌ ನೇತೃತ್ವದಲ್ಲಿ ಉಚಿತ ದಂತ ತಪಾಸಣೆ ನಡೆಯಿತು.

ಶಿಬಿರದಲ್ಲಿ ಕೆಪಿಟಿಸಿಎಲ್‌ ಅಭಿಯಂತರ ಡಾ.ಶಂಕರ್‌ ದೇವನೂರು, ಸಹಾಯಕ ಪ್ರಾಧ್ಯಾಪಕ ಕಿರಣ್‌, ರಂಗಕಲಾವಿದ ಶ್ರೀಕಾಂತಮೂರ್ತಿ, ಜಾನಪದ ಗಾಯಕ ಅಮ್ಮ ರಾಮಚಂದ್ರ, ಉತ್ತಮ ಸ್ವಯಂ ಸೇವಕ-ಸೇವಕಿ ಪ್ರಶಸ್ತಿಗೆ ಕೆ.ಎಸ್‌.ರಕ್ಷಿತ್‌, ನಿರಂಜನ್‌ ಹಾಗೂ ಜಯಶ್ರೀ ಭಾಜನರಾದರು. ಶಿಬಿರದ ಸಮಗ್ರ ಪ್ರಶಸ್ತಿಯನ್ನು ಸಂಕಲ್ಪ ತಂಡವು ಪಡೆಯಿತು. ಶಿಬಿರಾಧಿಕಾರಿ ಸಂತೋಷ್‌ಕುಮಾರ್‌ ನೇತೃತ್ವದಲ್ಲಿ ಶಿಬಿರ ಯಶಸ್ವಿಯಾಗಿ ನಡೆಯಿತು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.