ರಸ್ತೆ ಮುಚ್ಚಿಸುತ್ತಿದ್ದಾಗ ಎಚ್ಚೆತ್ತ ಗ್ರಾಮಸ್ಥರಿಂದ ಅಧಿಕಾರಿಗಳಿಗೆ ತರಾಟೆ


Team Udayavani, Sep 19, 2019, 3:00 AM IST

ratroratri

ನಂಜನಗೂಡು: ರೈಲ್ವೆ ಅಧಿಕಾರಿಗಳು ರಾತ್ರೋ ರಾತ್ರಿ ಬಂದು ರೈಲ್ವೆ ಗೇಟ್‌ ರಸ್ತೆ ಮುಚ್ಚಿಸುತ್ತಿದ್ದಾಗ ಎಚ್ಚರಗೊಂಡ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಕೆಲಸ ತಡೆಹಿಡಿದು, ಹಿಗ್ಗಾಮುಗ್ಗಾ ತರಾಟೆಗೆ ತಗೆದುಕೊಂಡರು. ಇದರಿಂದ ತಬ್ಬಿಬ್ಟಾದ ಅಧಿಕಾರಿಗಳು ಬರಿಗೈನಲ್ಲಿ ವಾಪಸ್ಸಾದರು.

ಮಂಗಳವಾರ ತಡರಾತ್ರಿಯಲ್ಲಿ ಆಗಮಿಸಿದ ರೈಲ್ವೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಬುಧವಾರ ಬೆಳಗಿನ ಜಾವ ಕೋಳಿ ಕೂಗುವ ಮುನ್ನವೇ ತಾಲೂಕಿನ ಕೋಡಿ ನರಸೀಪುರ-ಚಾಮರಾಜನಗರ ಮುಖ್ಯ ರಸ್ತೆಯ ರೈಲ್ವೆ ಗೆೇಟ್‌ ಬಳಿ ರಸ್ತೆಯ ಕಲ್ಲುಗಳನ್ನು ಕಿತ್ತು ಹಾಕಲಾರಂಭಿಸಿದರು

ಆದರೆ, ಅವರ ಕೆಲಸ ಪೂರ್ಣವಾಗುವ ಮೊದಲೇ ಈ ಸುದ್ದಿ ಕೊಗ‌ಳತೆ ದೂರದಲ್ಲಿದ್ದ ಕೋಡಿ ನರಸೀಪುರಕ್ಕೆ ತಿಳಿದಾಗ, ಗ್ರಾಮಸ್ಥರೆಲ್ಲ ಬಂದು ಕಳ್ಳರನ್ನು ಹಿಡಿಯುವಂತೆ ರೈಲ್ವೆ ಅಧಿಕಾರಿಗಳನ್ನು ಮುತ್ತಿಕೊಂಡು ರಸ್ತೆ ಕೀಳುವ ಕೆಲಸಕ್ಕೆ ತಡೆಯೊಡ್ಡಿದರು. ಇದರಿಂದ‌ ಅಧಿಕಾರಿಗಳು ಕಕ್ಕಾ ಬಿಕ್ಕಿಯಾದರು.

ಜಿಲ್ಲಾಡಳಿತ ಆದೇಶ: ಗ್ರಾಮದ ಸಮೀಪ ರೈಲ್ವೆ ಮೇಲ್ಸೇತುವೆ ನಿರ್ಮಿಸಬೇಕಿದ್ದ ರೈಲ್ವೆ ಇಲಾಖೆ ಅಲ್ಲಿಂದ ಬಹುದೂರದಲ್ಲಿ (3 ಕಿ.ಮೀ. ದೂರ) ಮೇಲ್ಸೇತುವೆ ನಿರ್ಮಿಸುವುದರ ಮೂಲಕ ಕೋಡಿನರಸೀಪುರ ಹಾಗೂ ಚಾಮರಾಜ ನಗರ ರಸ್ತೆಯನ್ನು 3 ಕಿ.ಮೀ. ಗಿಂತ ಹೆಚ್ಚು ದೂರವಾಗಿಸಿದ್ದರು. ಆ ನೂತನ ರಸ್ತೆ ಅವೈಜಾnನಿಕವಾಗಿದ್ದು, ಪ್ರಯಾಸ ಹಾಗೂ ಪ್ರಾಣಕ್ಕೆ ಅಪಾಯವೆಂದು ಮನಗಂಡ ಗ್ರಾಮಸ್ಥರು ಅನೇಕ ಬಾರಿ ಪ್ರತಿಭಟನೆ ನಡೆಸಿ ರಸ್ತೆ ಮುಚ್ಚದಂತೆ ಜಿಲ್ಲಾಡಳಿತದಿಂದ ಆದೇಶ ತಂದಿದ್ದರು.

ಹೇಗಾದರೂ ಮಾಡಿ ಆ ರೈಲ್ವೆ ಗೇಟ್‌ ರಸ್ತೆಯನ್ನು ಮುಚ್ಚಿಯೇ ತೀರಬೇಕೆಂದು ಹಠ ತೊಟ್ಟ ರೈಲ್ವೆ ಅಧಿಕಾರಿಗಳು ಹಿಂದೆ ಮುರ್‍ನಾಲ್ಕು ಬಾರಿ ಹಗಲು ವೇಳೆ ಬಂದು ರಸ್ತೆ ಮುಚ್ಚಲು ಪ್ರಯತ್ನಿಸಿ ವಿಫ‌ಲರಾಗಿದ್ದರು. ಇದೀಗ ರಾತ್ರೋ ರಾತ್ರಿ ಕೆಲಸಕ್ಕೆ ಕೈಹಾಕಿ ಸಾರ್ವಜನಿಕರಿಂದ ಛೀಮಾರಿಗೊಳಗಾದರು.

ರೈಲ್ವೆ ವ್ಯತ್ಯಯ: ರಸ್ತೆಯನ್ನು ಅರ್ಧಂಬರ್ಧ ಕಿತ್ತಿದ್ದರಿಂದ ತಕ್ಷಣ ರೈಲ್ವೆ ಹಳಿಯನ್ನು ಸಮತಟ್ಟು ಮಾಡಲಾಗಲಿಲ್ಲ. ಹೀಗಾಗಿ ಬುಧವಾರ ಬೆಳಗಿನ ಮೈಸೂರು-ಚಾಮರಾಜನಗರ ಮಾರ್ಗದ ರೈಲ್ವೆ ಮಾರ್ಗದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ಪರದಾಡಬೇಕಾಯಿತು.

ಬಂಡತನ: ಕೋಡಿನರಸೀಪುರ ಮುಖ್ಯರಸ್ತೆಯ ಎಲ್‌.ಸಿ.24 ಗೇಟ್‌ಗೆ ಬದಲಿಯಾಗಿ ಎಲ್‌.ಸಿ. 25 ರಲ್ಲಿ ನಿರ್ಮಿಸಿದ ಮೇಲ್ಸೇತುವೆ ಸಂಚಾರ ಅತ್ಯಂತ ಅಪಾಯಕಾರಿ ಎಂಬುದನ್ನು ಮನಗಂಡ ನಂಜನಗೂಡು ತಹಸೀಲ್ದಾರ್‌, ಹಾಗೂ ಮೈಸೂರು ಜಿಲ್ಲಾಧಿಕಾರಿಗಳು ರಸ್ತೆ ಮುಚ್ಚದಂತೆ ಈಗಾಗಲೇ ಆದೇಶ ಹೊರಡಿಸಿದ್ದಾರೆ.

ಅಲ್ಲದೇ ಸಂಸದ ವಿ.ಶ್ರೀನಿವಾಸಪ್ರಸಾದ್‌, ಶಾಸಕ ಬಿ.ಹರ್ಷವರ್ಧನ್‌ ಕೂಡ ರಸ್ತೆ ಬಂದ್‌ ಮಾಡದಂತೆ ರೈಲ್ವೆ ವಿಭಾಗೀಯ ವ್ಯವಸ್ಥಾಪಕಿ ಅಪರ್ಣ ಗರ್ಗ್‌ ಅವರಿಗೆ ಸೂಚಿಸಿದ್ದರು. ಆದರೂ ಇವುಗಳನ್ನು ಲೆಕ್ಕಿಸಿದ ರೈಲ್ವೆ ಅಧಿಕಾರಿಗಳು ಮಂಗಳವಾರ ತಡರಾತ್ರಿ ಗೇಟ್‌ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದು, ಬಂಡ‌ತನ ಪ್ರದರ್ಶಿಸುವಂತಿತ್ತು.

ಪೊಲೀಸರ ಪ್ರವೇಶ: ರಾತ್ರಿ ರಸ್ತೆ ಮುಚ್ಚುವ ಬಂದಿದ್ದ ಸುದ್ದಿ ತಿಳಿದ ಮಹಿಳೆಯರು, ವೃದ್ಧರು, ಮಕ್ಕಳ ಆದಿಯಾಗಿ ಗ್ರಾಮಸ್ಥರೆಲ್ಲ ಒಗ್ಗೂಡಿ ಸ್ಥಳಕ್ಕೆ ಬಂದು ರಸ್ತೆ ಮುಚ್ಚದಂತೆ ಪ್ರತಿಭಟಿಸಲು ಆರಂಭಿಸಿದರೂ ಇದಕ್ಕೆ ಜಗ್ಗದ ಸಿಬ್ಬಂದಿ ತಮ್ಮ ಕಾರ್ಯಾಚರಣೆ ಮುಂದುವರಿಸಿದಾಗ ನಂಜನಗೂಡು ಪೊಲೀಸರಿಗೆ ವಿಷಯ ಮುಟ್ಟಿಸಲಾಯಿತು.

ಸ್ಥಳಕ್ಕೆ ಆಗಮಿಸಿದ ಪೋಲೀಸರು ರಸ್ತೆ ಮುಚ್ಚುವ ಕಾರ್ಯವನ್ನು ಸ್ಥಗಿತಗೊಳಿಸಿ ಹಿರಿಯ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವರೆಗೂ ಕಾರ್ಯಾಚರಣೆ ನಡೆಸದಂತೆ ತಡೆ ಹಿಡಿದರು. ಇದರಿಂದಾಗಿ ಬುಧವಾರ ಬೆಳಗ್ಗೆ 5:45ಕ್ಕೆ ಚಾಮರಾಜನಗಕ್ಕೆ ತೆರಳಬೇಕಾಗಿದ್ದ ರೈಲು ನಂಜನಗೂಡು ರೈಲ್ವೆ ನಿಲ್ದಾಣದಲ್ಲೇ ಉಳಿಯುವಂತಾಯಿತು.

ಪರ್ಯಾಯ ಮಾರ್ಗಕ್ಕೆ ಪಟ್ಟು: ನಂಜನಗೂಡು ಪೊಲೀಸರಿಂದ ರಾತ್ರಿ ಕಾರ್ಯಾಚರಣೆ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ರೈಲ್ವೆ ಹಿರಿಯ ಅಧಿಕಾರಿಗಳು ಗ್ರಾಮಸ್ಥರನ್ನು ಮನವೊಲಿಸುವ ಪ್ರಯತ್ನಿಸಿದಾಗ, ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಹಾಲಿ ಇರುವ ರಸ್ತೆ ಹೊರತಾಗಿ ಯಾವುದೇ ಮಾರ್ಗವೂ ಕೋಡಿನರಸೀಪುರ ಗ್ರಾಮಕ್ಕೆ ಅನುಕೂಲವಾಗಿಲ್ಲ.

ಈಗಿರುವ ರಸ್ತೆಯನ್ನೇ ಯಥಾಸ್ಥಿತಿ ಉಳಿಸಬೇಕು. ಇಲ್ಲವೇ ಇಲ್ಲೇ ಮೇಲ್ಸೇತುವೆ ನಿರ್ಮಿಸಿ ಅಲ್ಲಿಯವರಿಗೂ ರಸ್ತೆ ಮುಚ್ಚುವ ಪ್ರಯತ್ನ ಕೈಬಿಡಿ ಎಂದು ಪಟ್ಟು ಹಿಡಿದರು. ಅಲ್ಲದೇ ಇದೇ ವೇಳೆ ರಸ್ತೆ ಮುಚ್ಚದಂತೆ ತಾಲೂಕು ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನೀಡಿರುವ ಆದೇಶ ಪ್ರತಿಯನ್ನು ಅಧಿಕಾರಿಗಳ ಗಮನಕ್ಕೆ ತಂದರು. ನೀವು ಬಲಾತ್ಕಾರವಾಗಿ ರಸ್ತೆ ಮುಚ್ಚಿದಲ್ಲಿ ತಾವೆಲ್ಲ ಗ್ರಾಮ ತೊರೆದು ಪ್ರತಿಭಟಿಸಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ರೈಲ್ವೆ ಆರ್‌ಪಿಎಫ್ ಕಮೀಷನರ್‌ ಕಬೂರ್‌, ಈಗ ರೈಲುಗಳ ಸಂಚಾರ ಹಾಗೂ ಗ್ರಾಮಸ್ಥರ ಅನುಕೂಲವಾಗುವ ನಿಟ್ಟಿನಲ್ಲಿ ಯಥಾಸ್ಥಿತಿ ಕಾಪಾಡಲಾಗುವುದು. ರಸ್ತೆ ಸಮಸ್ಯೆ ಕುರಿತು ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಗ್ರಾಮಸ್ಥರ ಬೇಡಿಕೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಬಳಿಕ‌ ಎಲ್ಲರೂ ಒಗ್ಗೂಡಿ ಕಿತ್ತು ಹಾಕಿದ ಕಲ್ಲುಗಳನ್ನು ಪುನಃ ಜೋಡಿಸಿ ರೈಲ್ವೆ ಹಳಿ ಸಮತಟ್ಟು ಮಾಡಿ ರೈಲು ಸಂಚಾರಕ್ಕೆ ಅನುವು ಮಾಡಿಕೊಟ್ಟರು

ರಸ್ತೆ ಕಿತ್ತಿದ್ದರಿಂದ ರೈಲು ಸಂಚಾರ ವ್ಯತ್ಯಯ: ಕೋಡಿನರಸೀಪುರ ಬಳಿ ರೈಲ್ವೆ ಗೇಟ್‌ ರಸ್ತೆಯನ್ನು ರೈಲ್ವೆ ಅಧಿಕಾರಿಗಳು ಅರ್ಧಭಾಗ ಕಿತ್ತು ಹಾಕಿದ್ದರಿಂದ ತಕ್ಷಣ ರೈಲ್ವೆ ಹಳಿಯನ್ನು ಸಮತಟ್ಟು ಮಾಡಲಾಗಲಿಲ್ಲ. ಹೀಗಾಗಿ ಬುಧವಾರ ಬೆಳಗ್ಗೆ ಮೈಸೂರು-ಚಾಮರಾಜನಗರ ಮಾರ್ಗದ ರೈಲ್ವೆ ಮಾರ್ಗದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ಪರದಾಡಬೇಕಾಯಿತು. ಬುಧವಾರ ಬೆಳಗ್ಗೆ 5:45ಕ್ಕೆ ಚಾಮರಾಜನಗಕ್ಕೆ ತೆರಳಬೇಕಾಗಿದ್ದ ರೈಲು ನಂಜನಗೂಡು ರೈಲ್ವೆ ನಿಲ್ದಾಣದಲ್ಲೇ ಉಳಿಯಬೇಕಾಯಿತು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.