ಎರೆಹುಳು ತೊಟ್ಟಿ ಶಾಲೆಗಳಲ್ಲಿ ಕೈತೋಟ ನಿರ್ಮಾಣಕ್ಕೆ ಅವಕಾಶ

ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಕನಿಷ್ಠ 25 ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣ ಗುರಿ ಅರ್ಜಿ ಸಲ್ಲಿಸಲು ಅ.15ರವರೆಗೆ ಅವಕಾಶ

Team Udayavani, Sep 24, 2021, 3:06 PM IST

ಎರೆಹುಳು ತೊಟ್ಟಿ ಶಾಲೆಗಳಲ್ಲಿ ಕೈತೋಟ ನಿರ್ಮಾಣಕ್ಕೆ ಅವಕಾಶ

ಹುಣಸೂರು: ತಾಲೂಕಿನಲ್ಲಿ ಉದ್ಯೋಗ ಖಾತ್ರೆಯಡಿ ರೈತ ಬಂಧು ಕಾರ್ಯಕ್ರಮದ ಮೂಲಕ 2 ತಿಂಗಳ ಕಾಲಮಿತಿ ನಿಗದಿಗೊಳಿಸಿ ರೈತರಿಗೆ ಅಗತ್ಯವಿರುವ ಎರೆಹುಳು ಗೊಬ್ಬರತೊಟ್ಟಿ ನಿರ್ಮಾಣ ಯೋಜನೆ ಸಾಕಾರಗೊಳ್ಳುತ್ತಿದೆ. ಮತ್ತೊಂದೆಡೆ ಶಾಲಾ-ಅಂಗನವಾಡಿಗಳಲ್ಲಿ ಪೌಷ್ಟಿಕ ಕೈತೋಟಕ್ಕೂ ಒತ್ತು ನೀಡಲಾಗುತ್ತಿದೆ.

ಸುವರ್ಣ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಗ್ರಾಮೀಣಾಭಿವೃದ್ಧಿ ಇಲಾಖೆಯು ರೈತ ಬಂಧು ಯೋಜನೆ ಹಾಗೂ ನರೇಗಾ ನೆರವಿನೊಂದಿಗೆ ಅಕ್ಟೋಬರ್‌ -15ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 25 ಎರೆ ಹುಳು ಗೊಬ್ಬರತಯಾರಿಕೆ ತೊಟ್ಟಿ ನಿರ್ಮಿಸುವ ಗುರಿ ನೀಡಲಾಗಿದ್ದು, ತಾಲೂಕಿನಲ್ಲಿ ಈಗಾಗಲೇ 39 ರೈತರು ಎರೆಹುಳು ಗೊಬ್ಬರ ತೊಟ್ಟಿ ನಿರ್ಮಿಸಿಕೊಂಡಿದ್ದಾರೆ.

ಗ್ರಾಪಂಗೆ 25 ಎರೆಹುಳು ತೊಟ್ಟಿ: ಎರೆಹುಳು ಗೊಬ್ಬರವನ್ನು ರೈತನ ಮಿತ್ರ-ಕಪ್ಪು ಬಂಗಾರ ಎಂದೇ ಪರಿಗಣಿಸಿದ್ದು, ಈ ಗೊಬ್ಬರ ಬಳಕೆಯಿಂದ ಬೆಳೆಗಳಿಗೆ ಅಗತ್ಯ ಪೋಷಕಾಂಶ ಪೂರೈಕೆಯಾಗಲಿದೆ. ಜೊತೆಗೆ ಮಣ್ಣಿನ ಫಲವತ್ತತೆ ಮತ್ತು ಗುಣಮಟ್ಟವು ಹೆಚ್ಚಲಿದೆ. ಯಾರು ಅರ್ಜಿ ಸಲ್ಲಿಸಬಹುದು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ-ಅತಿಸಣ್ಣ ರೈತರು, ಅಲೆಮಾರಿಗಳು, ಬಿಪಿಎಲ್‌, ವಿಕಲಚೇತನ ಪ್ರಧಾನ ಹಾಗೂ ಸ್ತ್ರೀ ಪ್ರಧಾನ ಕುಟುಂಬಗಳು, ಭೂ ಸುಧಾರಣಾ ಫಲಾನುಭವಿಗಳು, ಇಂದಿರಾ ಆವಾಸ್‌ ಯೋಜನೆಯ ಫಲಾನುಭವಿಗಳು, ಅನುಸೂಚಿತ ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳು ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳಬಹುದು.

ಇದನ್ನೂ ಓದಿ:ಫೋಕ್ಸ್‌ವ್ಯಾಗನ್‌ ಟೈಗುನ್‌ ಭಾರತದ ಮಾರುಕಟ್ಟೆಗೆ ಬಿಡುಗಡೆ

ಪೌಷ್ಟಿಕ ಕೈತೋಟ ಅಭಿಯಾನ: ಶಾಲೆ-ಅಂಗನ ವಾಡಿ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ಹಾಗೂ ಮಕ್ಕಳಲ್ಲಿ ತರಕಾರಿ ಮತ್ತು ಔಷಧ ಸಸ್ಯಗಳ ಕುರಿತು ಪಠ್ಯೇತರ ಚಟುವಟಿಕೆಗಳ ಮೂಲಕ ಪ್ರಾಯೋಗಿಕ ತರಬೇತಿಗೆ ಉತ್ತೇಜಿಸಲಾಗುತ್ತಿದೆ. ಸೂಕ್ಷ್ಮ ಪೋಷ ಕಾಂಶ ಗಳನ್ನು ಹೇರಳವಾಗಿ ಹೊಂದಿರುವಂತಹ ಹಣ್ಣು ಮತ್ತು ತರಕಾರಿಗಳು, ಖನಿಜಾಂಶ, ಜೀವಸತ್ವ, ನಾರಿನಾಂಶ ಮಾತ್ರವಲ್ಲದೇ ಅಡುಗೆಗೆ ಬೇಕಾದ ಪೌಷ್ಟಿಕಾಂಶಯುಕ್ತ ತಾಜಾ ತರಕಾರಿ ಮತ್ತು ಸೊಪ್ಪುಗಳನ್ನು ಶಾಲಾ ಆವರಣಗಳಲ್ಲಿ ಸ್ಥಳಾವಕಾಶಕ್ಕೆ ಅನುಗುಣವಾಗಿ ಬೆಳೆದುಕೊಳ್ಳಲು ಮತ್ತು ಸೋಕ್‌ಪಿಟ್‌ ನಿರ್ಮಿಸಿ ಕೊಂಡಿರುವವರು ವೈಯಕ್ತಿಕವಾಗಿ ಹಾಗೂ ಸಮು ದಾಯಕ ವಿಭಾಗದಲ್ಲೂ ಅವಕಾಶ ಕಲ್ಪಿಸ ಲಾಗಿದೆ. ಅದರಂತೆ ತಲಾ 3 ಸಾವಿರ ವೆಚ್ಚದಲ್ಲಿ ಸರ್ಕಾರಿ ಶಾಲೆ, ಕಾಲೇಜು, ಆಸ್ಪತ್ರೆ, ವಸತಿ ನಿಲಯಗಳ ಆವರಣದಲ್ಲಿ ಪೌಷ್ಟಿಕ ಕೈತೋಟ ಅಭಿಯಾನ ಹಮ್ಮಿಕೊಂಡಿದ್ದು, ಇದು ಮಕ್ಕಳಲ್ಲಿ ಕೈತೋಟ-ಕೃಷಿ ಬಗ್ಗೆ ಜಾಗೃತಿ ಮೂಡಿಸುವಲ್ಲಿ ನೆರವಾಗಲಿದೆ.

ಸೌಲಭ್ಯ ಪಡೆಯಲು ಕಾಯಕ ಮಿತ್ರ ಆ್ಯಪ್‌ ಬಳಸಿ
ಎರೆಹುಳು ಗೊಬ್ಬರ ತೊಟ್ಟಿ ನಿರ್ಮಿಸಿಕೊಳ್ಳಲು 18 ಅಡಿ ಉದ್ದ, 9 ಅಡಿ ಅಗಲ ಹಾಗೂ 4 ಅಡಿ ಎತ್ತರಕ್ಕೆ 27 ಸಾವಿರ ರೂ. ನೀಡಲಾಗುವುದು. 12 ಅಡಿ ಉದ್ದ, 9 ಅಡಿ ಅಗಲ ಹಾಗೂ 4ಅಡಿ ಎತ್ತರಕ್ಕೆ 21 ಸಾವಿರ ರೂ. ಸಹಾಯಧನ ಸಿಗಲಿದೆ. ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣ ಮಾಡಿಕೊಳ್ಳಲು ಬಯಸುವ ಆಸಕ್ತ ರೈತರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯ್ತಿ¿‌ಲ್ಲಿ ಹಾಗೂ ಕಾಯಕ ಮಿತ್ರ ಮೊಬೈಲ್‌ ಆ್ಯಪ್‌ ಮೂಲಕ ಅರ್ಜಿ ಸಲ್ಲಿಸಬಹುದು

ಉದ್ಯೋಗ ಖಾತ್ರಿಯಡಿ ಎರೆಹುಳು ಗೊಬ್ಬರದ ತೊಟ್ಟಿ ನಿರ್ಮಿಸಿ ಕೊಂಡಲ್ಲಿ ಕೂಲಿ ಸಿಕ್ಕಂತಾಗಲಿದೆ. ಜೊತೆಗೆ ತಮ್ಮ ಜಮೀನಿಗೆ ರಾಸಾಯನಿಕ ಮುಕ್ತ ಗೊಬ್ಬರ ತಯಾರಿಕೆಗೆ ಸಹಕಾರಿ ಯಾಗಿದೆ. ಮತ್ತೂಂದೆಡೆ ಶಾಲೆ-ಅಂಗನ ವಾಡಿ, ವಸತಿ ನಿಲಯಗಳಲ್ಲಿ ಪೌಷ್ಟಿಕ ಕೈ ತೋಟ ಬೆಳೆಸುವುದರಿಂದ ಶಾಲಾ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ದೊರೆಯಲಿದೆ. ಜತೆಗೆ ಕೃಷಿ ಬಗ್ಗೆ ಆಸಕ್ತಿ ಬೆಳೆಯಲಿದೆ. ಅಕ್ಟೋಬರ್‌-15ರ ವರೆಗೆ ಈ ಯೋಜನೆ ಬಳಕೆಗೆ ಅವಕಾಶಕಲ್ಪಿಸಲಾಗಿದೆ.
– ಎಚ್‌.ಡಿ.ಗಿರೀಶ್‌, ತಾಪಂ ಇಒ

– ಸಂಪತ್‌ ಕುಮಾರ್‌

 

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.