ರಂಗೋಲಿ ಸ್ಪರ್ಧೆ ಮೂಲಕ ಸಿಎಎಗೆ ವಿರೋಧ


Team Udayavani, Jan 3, 2020, 12:39 PM IST

mysuru-tdy-1

ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿಸಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಮತ್ತು ಮೈಸೂರು ನಗರ ಮತ್ತು ಗ್ರಾಮಾಂತರ ಮಹಿಳಾ ಕಾಂಗ್ರೆಸ್‌ ವತಿಯಿಂದ ಪ್ರತಿಭಟನಾ ರೂಪದಲ್ಲಿ ರಂಗೋಲಿ ಸ್ಪರ್ಧೆ ನಡೆಯಿತು.

ಗುರುವಾರ ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಬಳಿ ಸಮಾವೇಶಗೊಂಡ ಮೈಸೂರು ನಗರ ಮತ್ತು ಗ್ರಾಮಾಂತರ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತರು ಕೇಂದ್ರದ ನೂತನ ಕಾನೂನನ್ನು ರಂಗೋಲಿ ಬಿಡಿಸುವ ಮೂಲಕ ವಿರೋಧಿಸಿ, ಕೂಡಲೇ ಈ ಕಾನೂನನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿದರು. ನಮ್ಮ ಪೌರತ್ವ ಸಾಬೀತುಪಡಿಸಬೇಕೆ: ಈ ಸಂದರ್ಭ ಮಾತನಾಡಿದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌, ದೇಶದಲ್ಲಿ ಈ ಕಾನೂನನ್ನು ಜಾರಿ ಮಾಡಬೇಕೋ, ಬೇಡವೋ ಎಂಬುದು ಮುಖ್ಯ ವಲ್ಲ. ನಾವೆಲ್ಲ ಈ ದೇಶದಲ್ಲೇ ಹುಟ್ಟಿ ಬೆಳೆದಿದ್ದೇವೆ. ಮತ ಚಲಾಯಿಸುವ ಹಕ್ಕು ಪಡೆದಿರುವ ನಾವು ನಮ್ಮ ಪೌರತ್ವ ಸಾಬೀತು ಪಡಿಸಬೇಕೆ ಎಂಬುದೇ ನಮ್ಮ ಪ್ರಶ್ನೆ. ಎಷ್ಟೋ ಜನ ಬೇರೆ ದೇಶಗಳಿಂದ ನಮ್ಮ ದೇಶಕ್ಕೆ ಬಂದಿದ್ದಾರೆ. ಅಂತಹವರಿಗೆಂದೇ ಡಿಟೇಷನ್‌ ಸೆಂಟರ್‌ ತೆರೆಯಲಾಗಿದೆ. ಅಸ್ಸಾಂನಲ್ಲಿ ಇದು ಅಪಾಯಕಾರಿಯಾಗಿ ಪರಿಣಮಿಸಿದ್ದು, ಅಲ್ಲಿನ ಜನ ದಂಗೆ ಎದ್ದಿದ್ದಾರೆ ಎಂದು ಕಿಡಿ ಕಾರಿದರು.

ಇಂಥ ಕಾನೂನುಗಳ ಅಗತ್ಯ ಇಲ್ಲ: ನಮಗೆ ಇಂತಹ ಕಾನೂನುಗಳ ಅಗತ್ಯ ಇಲ್ಲ. ನಮಗೆ ಬೇಕಿರುವುದು ತಿನ್ನಲು ಅನ್ನ, ಕುಡಿಯಲು ನೀರು, ಇರಲು ಮನೆ. ಆದರೆ ಕೇಂದ್ರ ಸರ್ಕಾರ ಇದ್ಯಾವುದನ್ನೂ ಕೊಡದೆ ಸಾರ್ವಜನಿಕರಿಗೆ ಅಪಾಯಕಾರಿಯಾಗಿರುವ ಕಾನೂನು ಜಾರಿಗೊಳಿಸುತ್ತಿದೆ. ಅಲ್ಲದೆ ಇಂದು ದೇಶ ದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ. ಪ್ರತಿ ನಿಮಿಷ ಕ್ಕೊಂದು ಅತ್ಯಾಚಾರ, ಅನಾಚಾರ ನಡೆಯುತ್ತಿದೆ. ಆದರೆ ಕೇಂದ್ರ ಸರ್ಕಾರ ದೌರ್ಜನ್ಯವನ್ನೇ ಬೆಂಬಲಿಸುವ ಕೆಲಸ ಮಾಡುತ್ತಿದೆ.ಅಲ್ಲದೆ ಯುವಕರಿಗೆ ಉದ್ಯೋಗ ವಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ದೇಶ ನಾನಾ ಸಮಸ್ಯೆಗಳಿಂದ ತತ್ತರಿಸುತ್ತಿದೆ. ಮೊದಲು ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಲಿ ಎಂದು  ಆಗ್ರಹಿಸಿದರು.

ಕಾನೂನನ್ನು ಹಿಂಡೆಯಿರಿ: ಆದಿವಾಸಿಗಳು, ಬುಡ ಕಟ್ಟು ಜನಾಂಗದವರು ಪೌರತ್ವ ಸಾಬೀತುಪಡಿಸಲು ತಮ್ಮ ದಾಖಲೆಗಳನ್ನು ಎಲ್ಲಿಂದ ನೀಡುತ್ತಾರೆ. ಉತ್ತರ ಕರ್ನಾಟಕದಲ್ಲಿ ನೆರೆ ಬಂದು ದಾಖಲೆಗಳೆಲ್ಲಾ ಕೊಚ್ಚಿ ಕೊಂಡು ಹೋಗಿವೆ. ಅವರು ಹೇಗೆ ಭಾರತೀಯ ರೆಂದು ಸಾಬೀತುಪಡಿಸಬೇಕು. ಕೇಂದ್ರ ಸರ್ಕಾರ ಹಿಡನ್‌ ಅಜೆಂಡಾ ಇಟ್ಟುಕೊಂಡು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದೆ. ಹೀಗಾಗಿ ಕೂಡಲೇ ಇದನ್ನು ನಿಲ್ಲಿಸಬೇಕು ಎಂದರು.

ರಂಗೋಲಿ ಬಿಡಿಸುವ ಮೂಲಕ ಪ್ರತಿಭಟನೆ: ಇಂದು ಯುವತಿಯರ ಮನಸ್ಸಿನಲ್ಲಿ ಇರುವ ಪ್ರತಿಭಟನೆಯನ್ನು ರಂಗೋಲಿ ಮೂಲಕ ವ್ಯಕ್ತಪಡಿಸಲಾಗುತ್ತಿದೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳನ್ನೂ ಈ ರೀತಿಯ ಪ್ರತಿಭಟನೆ ಮಾಡಲಾಗುವುದು. ಕೇರಳದಲ್ಲಿ ರಂಗೋಲಿ ಬಿಡಿಸಿದರು ಎಂಬ ಕಾರಣಕ್ಕೆ ಐವರು ಮಹಿಳೆಯನ್ನು ಬಂಧಿಸಲಾಗಿದೆ. ಇಂದು ನೂರಾರು ಮಂದಿ ರಂಗೋಲಿ ಬಿಡಿಸಿದ್ದೇವೆ. ನಿಮಗೆ ತಾಕತಿದ್ದರೆ ನಮ್ಮನ್ನು ಜೈಲಿಗೆ ಹಾಕಿ ಎಂದು ಸವಾಲು ಹಾಕಿದರು. ಮೇಯರ್‌ ಪುಷ್ಪಾ ಜಗನ್ನಾಥ್‌, ಮಾಜಿ ಮೇಯರ್‌ ಪುಷ್ಪಲತಾ ಚಿಕ್ಕಣ್ಣ, ಸೇರಿದಂತೆ ಕಾಂಗ್ರೆಸ್‌ನ ಪಾಲಿಕೆ ಸದಸ್ಯೆಯರು, ಕಾರ್ಯ ಕರ್ತೆಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.