ಎಲೆಮರೆಯಂತಿರುವ ಸಾಧಕರಿಗೆ ಪ್ರಶಸ್ತಿ ನೀಡಿ


Team Udayavani, Dec 17, 2018, 11:33 AM IST

m4-ele.jpg

ಮೈಸೂರು: ವಚನಕಾರರು ಹಾಗೂ ವಚನಗಳ ವಿಷಯದಲ್ಲಿ ಎಲೆ ಮರೆಯ ಕಾಯಂತಿರುವವರನ್ನು ಗುರುತಿಸಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಬೇಕಿದೆ ಎಂದು ಸಾಹಿತಿ ಡಾ. ಮಳಲಿ ವಸಂತಕುಮಾರ್‌ ಆಗ್ರಹಿಸಿದರು.

ಮೈಸೂರು ಆರ್ಟ್‌ ಗ್ಯಾಲರಿ, ಕರ್ನಾಟಕ ಲಲಿತಕಲಾ ಅಕಾಡೆಮಿಯ ದಶಮಾನೋತ್ಸವ ಪ್ರಯುಕ್ತ ಭಾನುವಾರ ನಗರದ ಕಲಾಮಂದಿರದ ಮನೆಯಂಗಳದಲ್ಲಿ ಆಯೋಜಿಸಿದ್ದ ಕಲಾ ಪ್ರದರ್ಶನ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ “ಸಾಧಕರ ಸವಿಹೆಜ್ಜೆ’ ಮತ್ತು “ಕಲಾನ್ವೇಷಕ ತ್ರಯರು’ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಕಲಾವಿದ ಎಲ್‌.ಶಿವಲಿಂಗಪ್ಪ ಅವರು ವಚನಕಾರರು ಹಾಗೂ ವಚನಗಳ ತಿರುಳಿಗೆ ಪೂರಕವಾಗಿ ಚಿತ್ರ ರಚಿಸಿದ ಶಿವಲಿಂಗಯ್ಯ ಅವರ ಸಾಧನೆ ಎಲ್ಲರೂ ಮೆಚ್ಚುವಂತದ್ದು. ವಚನಗಳಿಗೆ ಚಿತ್ರರೂಪ ನೀಡುವ ವಿಶಿಷ್ಟ ಕಲೆ ಅವರಿಗಿದ್ದು, ತನ್ನ ಮನೆಯನ್ನೇ ಕಲಾ ಗ್ಯಾಲರಿಯಾಗಿ ಮಾಡಿದ್ದಾರೆ. ಹೀಗೆ ಎಲೆ ಮರೆಯ ಕಾಯಿಯಂತೆ ಇರುವವರನ್ನು ಗುರುತಿಸಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕಿದೆ ಎಂದರು.

ವೇದಿಕೆ ಕಲ್ಪಿಸಿ: ಮೈಸೂರು ಆರ್ಟ್‌ ಗ್ಯಾಲರಿ ಸಂಸ್ಥಾಪಕ ಎಲ್‌.ಶಿವಲಿಂಗಯ್ಯ ಮಾತನಾಡಿ, ಸಂಗೀತ, ನೃತ್ಯ ಮತ್ತು ನಾಟಕಗಳಂತ ಕಲೆಗೆ ಸುಸಜ್ಜಿತ ವ್ಯವಸ್ಥೆ ಇರುವ ಕಟ್ಟಡಗಳು ಮೈಸೂರಿನಲ್ಲಿವೆ. ಆದರೆ, ಚಿತ್ರ ಮತ್ತು ಶಿಲ್ಪ ಕಲೆ ಪ್ರದರ್ಶನಕ್ಕೆ ಸರಿಯಾದ ವೇದಿಕೆ ಇಲ್ಲದಂತಾಗಿದ್ದು, ಸರ್ಕಾರದ ಒಡೆತನದಲ್ಲಿರುವ ಕಲಾ ಗ್ಯಾಲರಿಗಳು ವರ್ಷಕ್ಕೊಮ್ಮೆ ಬಾಡಿಗೆ ಏರಿಕೆ ಮಾಡುತ್ತಿರುವುದರಿಂದ ಕಲಾವಿದರಿಗೆ ಸಮಸ್ಯೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. 

ಚಿತ್ರಕಲೆಯ ಆಕರ್ಷಣೆ: ದಶಮಾನೋತ್ಸವದ ಅಂಗವಾಗಿ ಕಲಾಮಂದಿರದ ಸುಚಿತ್ರ ಆರ್ಟ್‌ ಗ್ಯಾಲರಿಯಲ್ಲಿ ಆಯೋಜಿಸಿದ್ದ ಕಲಾಕೃತಿ ಮತ್ತು ಚಿತ್ರಕಲೆಗಳು ಅತ್ಯಂತ ಆಕರ್ಷಣೀಯವಾಗಿತ್ತು. ಮೈಸೂರು ಆರ್ಟ್‌ ಗ್ಯಾಲರಿ ಅಧ್ಯಕ್ಷ ಎಲ್‌. ಶಿವಲಿಂಗಪ್ಪ ಅವರ ಚಿತ್ರಕಲೆ ಸೇರಿದಂತೆ ಆರ್ಟ್‌ ಗ್ಯಾಲರಿ ವತಿಯಿಂದ ಸಾಧಕರೊಂದಿಗೆ ಸಂವಾದ ನಡೆಯಿತು.

14 ಸಾಧಕರ ನೂರಾರು ವೈವಿಧ್ಯಮಯ ಕಲಾಕೃತಿಗಳು ಎಲ್ಲರನ್ನು ಆಕರ್ಷಿಸಿತು. ಹಳ್ಳಿಯ ಸೊಬಗು, ಪ್ರಕೃತಿ ಸೌಂದರ್ಯ ಹಾಗೂ ಜ್ಞಾನಪೀಠ ಪುರಸ್ಕೃತರ ಚಿತ್ರಕಲೆ, ನವಿಲುಗಳ ಕಲಾಕೃತಿ, ದೊಡ್ಡ ಗಡಿಯಾರದ ಆಕೃತಿ, ಮತ್ಸೆ ಕನ್ಯೆ ಮತ್ತು ಶೃಂಗಾರ ಕನ್ಯೆಯರ ಕಲಾಕೃತಿಗಳು ನೋಡುಗರ ಮನತಣಿಸಿತು. 

ಸನ್ಮಾನ: ಸಮಾರಂಭದ ಅಂಗವಾಗಿ ಕಲಾಪೋಷಕ ಯು.ಜಿ.ಶೆಣೈ, ರಾಜೇಶ್ವರಿ ವಸ್ತ್ರಾಲಂಕಾರದ ಮುಖ್ಯಸ್ಥ ಬಿ.ಎಂ.ರಾಮಚಂದ್ರ, ಕದಂಬ ರಂಗವೇದಿಕೆ ಅಧ್ಯಕ್ಷ ರಾಜಶೇಖರ ಕದಂಬ, ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ. ಚಂದ್ರಶೇಖರ್‌ ಅವರನ್ನು ಸನ್ಮಾನಿಸಲಾಯಿತು. ಮೈಸೂರು ಆರ್ಟ್‌ ಗ್ಯಾಲರಿಯ ಕಾರ್ಯದರ್ಶಿ ಡಾ. ಜುಮುನಾ ರಾಣಿ ಮಿರ್ಲೆ, ಸಮಾಜ ಸೇವಕ ಕೆ.ರಘುರಾಂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.