ಧರ್ಮಸ್ಥಳ ಸಂಸ್ಥೆಯಿಂದ ಆಕ್ಸಿಜನ್, ಆಹಾರ ಕೊಡುಗೆ
Team Udayavani, Jun 11, 2021, 6:24 PM IST
ಮೈಸೂರು: ಕೊರೊನಾ ಸಂಕಷ್ಟ ಹಿನ್ನೆಲೆಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಮೈಸೂರು ವಿಭಾಗದಿಂದ ಜಿಲ್ಲಾಡಳಿತಕ್ಕೆಆಕ್ಸಿಜನ್ ಮತ್ತು ವೆಂಟಿಲೇಟರನ್ನುಕೊಡುಗೆಯಾಗಿ ನೀಡಲಾಯಿತು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಮೂಲಕಜಿಲ್ಲಾಡಳಿತಕ್ಕೆ 5.5 ಟನ್ ಆಕ್ಸಿಜನ್, 1ವೆಂಟಿಲೇಟರ್ ಹಸ್ತಾಂತರಿಸಿದರು.
ಈ ವೇಳೆಸಂಕಷ್ಟದಲ್ಲಿರುವ 200 ಕುಟುಂಬಗಳಿಗೆಆಹಾರ ಕಿಟ್ ನೀಡಲಾಯಿತು.ಧರ್ಮಸ್ಥಳ ಗ್ರಾಮೀಣಾಭಿವೃದ್ಧಿಯೋಜನೆ ಪ್ರಾದೇಶಿಕ ನಿರ್ದೇಶಕಗಂಗಾಧರ್ ರೈ ಮಾತನಾಡಿ, ತಾಲೂಕಿನ ಕಳಸ್ತವಾಡಿಯಲ್ಲಿ ಕೋವಿಡ್ ಸೆಂಟರ್ತೆರೆದಿದ್ದೇವೆ. ಸಾವಿರಾರು ಮಂದಿಗೆಊಟೋಪಚಾರ ಮಾಡಿದ್ದೇವೆ. ಈಗಜಿಲ್ಲಾಡಳಿತಕ್ಕೂ ನೆರವು ನೀಡಿದ್ದೇವೆ ಎಂದುತಿಳಿಸಿದರು. ಯೋಜನೆ ಮೂಲಕಗ್ರಾಮಾಂತರ ಪ್ರದೇಶದ ಜನರಿಗೆ ಆರೋಗ್ಯಬಗ್ಗೆ ನಿರಂತರವಾಗಿ ಜಾಗೃತಿ ಮೂಡಿಸಲಾಗುತ್ತಿದೆ. 10 ಸಾವಿರ ರೂ. ಸಾಲವಿತರಿಸಲಾಗಿದೆ. ಸಂಪೂರ್ಣ ಆರೋಗ್ಯಕಾರ್ಡ್ ನೀಡುತ್ತಿದ್ದೇವೆ ಎಂದು ಹೇಳಿದರು.
ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್,ವಿಶೇಷ ಕರ್ತವ್ಯಾಧಿಕಾರಿ ದಿನೇಶ್ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಪಂ ಸಿಇಒ ಎ.ಎಂ.ಯೋಗೀಶ್, ಪಾಲಿಕೆ ಆಯುಕ್ತಜಿ.ಲಕ್ಷ್ಮೀಕಾಂತ್ ರೆಡ್ಡಿ, ಅಪರ ಜಿÇÉಾಧಿಕಾರಿಡಾ. ಮಂಜುನಾಥಸ್ವಾಮಿ, ಗ್ರಂಥಾಲಯಉಪ ನಿರ್ದೇಶಕ ಹಾಗೂ ಆಕ್ಸಿಜನ್ನೋಡಲ್ ಅಧಿಕಾರಿ ಬಿ. ಮಂಜುನಾಥ್,ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿಯೋಜನೆ ಜಿಲ್ಲಾ ನಿರ್ದೇಶಕ ವಿಜಯ್ಕುಮಾರ್ ನಾಗನಾಳ ಸೇರಿದಂತೆಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ