ಪೋಷಕರು ಕಾನ್ವೆಂಟ್ ಮೋಹ ತ್ಯಜಿಸಿ
Team Udayavani, Mar 1, 2020, 3:00 AM IST
ಮೈಸೂರು: ಪೋಷಕರು ಯಾವುದೇ ಸೌಲಭ್ಯ ಸಿಗದ ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು, ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸಬೇಕು ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಮೈಸೂರು ತಾಲೂಕು ಡಿ.ಸಾಲುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತುಕೊಟ್ಟು ಬಿಸಿಯೂಟ, ಸಮವಸ್ತ್ರ, ಶೂ, ಸೈಕಲ್, ಹಾಲು ಎಲ್ಲವನ್ನು ನೀಡುತ್ತಿದ್ದು, ಮಕ್ಕಳು ಇದರ ಸದುಪಯೋಗಪಡೆದುಕೊಂಡು ವಿದ್ಯಾವಂತರಾಗಿ ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾಗಬೇಕು.
ಸರ್ಕಾರಿ ಶಾಲೆಗಳಲ್ಲಿಯೂ ನುರಿತ ಶಿಕ್ಷಕರಿದ್ದು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆ. ಗ್ರಾಮೀಣ ಭಾಗದ ಶಾಲೆಗಳಲ್ಲಿ ಹೆಚ್ಚಾಗಿ ಹಿಂದುಳಿದ ವರ್ಗಗಳ ಮಕ್ಕಳೇ ವ್ಯಾಸಂಗ ಮಾಡುತ್ತಿದ್ದು, ಶಿಕ್ಷಕರು ಹೆಚ್ಚಿನ ಗಮನ ಹರಿಸಿ ಉತ್ತಮ ಫಲಿತಾಂಶ ಬರುವಂತೆ ಪ್ರಯತ್ನಿಸಬೇಕು ಎಂದರು.
ಜಿಪಂ ಮಾಜಿ ಅಧ್ಯಕ್ಷ ಕೆ. ಮರೀಗೌಡ, ಜಿಪಂ ಸದಸ್ಯ ಬೀರಿಹುಂಡಿ ಬಸವಣ್ಣ, ತಾಪಂ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಬಿಇಒ ಕೃಷ್ಣ, ತಾಪಂ ಸದಸ್ಯ ಸಿ.ಎಂ.ಸಿದ್ದರಾಮೇಗೌಡ, ಗ್ರಾಪಂ ಅಧ್ಯಕ್ಷ ಬಸವರಾಜು, ಮಾಜಿ ಅಧ್ಯಕ್ಷ ಮಾಕಿ ಮಹಾದೇವು, ಚಂದ್ರು, ಹುಚ್ಚೇಗೌಡ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ