ಹುಣಸೂರಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆ ಶಾಂತಿ ಸಭೆ
Team Udayavani, Jun 19, 2023, 10:24 PM IST
ಹುಣಸೂರು: ಬಕ್ರೀದ್ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ನಗರ ಠಾಣೆಯಲ್ಲಿಸೋಮವಾರ ಸಂಜೆ ಶಾಂತಿ ಸಭೆ ನಡೆಸಿದರು.
ಶಾಂತಿ ಸಭೆಯಲ್ಲಿ ಮುಖಂಡರಿಂದ ಮಾಹಿತಿ ಪಡೆದ ನಂತರ ಮಾತನಾಡಿದ ಅಧ್ಯಕ್ಷತೆ ವಹಿಸಿದ್ದ ಇನ್ಸ್ ಪೆಕ್ಟರ್ ದೇವೇಂದ್ರ ಅವರು, ಯಾವುದೇ ಸಮುದಾಯವಾಗಿರಲಿ ಹಬ್ಬಗಳ ಆಚರಣೆ ವೇಳೆ ಅನ್ಯ ಧರ್ಮದ ಬಗ್ಗೆ ತಾತ್ಸಾರ ಮಾಡದೆ. ಶಾಂತಿಯುತವಾಗಿ ಆಚರಿಸಿದಾಗ ಮಾತ್ರ ಸಹಭಾಳ್ವೆ ಸಾಧ್ಯ. ಹೀಗಾಗಿ ಶಾಂತಿ ಭಂಗ ತರುವ ಯಾವುದೇ ಹೇಳಿಕೆಗಳು. ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ಮಾಡುವುದು. ಫಾರ್ವಡ್ ಮಾಡಿ ಮತ್ತೊಬ್ಬರಿಗೆ ನೋವುಂಟು ಮಾಡುವುದು ಕಾನೂನಿನಲ್ಲಿ ಅಪರಾಧವಾಗಿದ್ದು, ಸಭೆಯಲ್ಲಿನ ಮುಖಂಡರು ಯುವಕರಿಗೆ ತಿಳಿ ಹೇಳಬೇಕೆಂದು ಮನವಿ ಮಾಡಿ. ಕಾನೂನು ಉಲ್ಲಂಘಿಸುವವರ ವಿರುದ್ದ ನಿರ್ದಾಕ್ಷ್ಯಿಣ್ಯವಾಗಿ ಕ್ರಮ ಜರುಗಿಸಲಾಗುವುದು.
ಇದರಿಂದ ಮುಂದೆ ಯುವಕರು ಉದ್ಯೋಗಕ್ಕೆ ಹೋಗುವ ವೇಳೆ ತೊಂದರೆಯಾಗಲಿದೆ.ಶಾಂತಿ ಭಂಗ ತರುವವರ ವಿರುದ್ದ ಪೊಲೀಸರು ಕಣ್ಗಾವಲಿಟ್ಟಿದ್ದು. ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಮುಂದಿನ ವಾರದಲ್ಲಿ ಬಕ್ರೀದ್ ಹಬ್ಬದ ಸಂಭ್ರಮಾಚರಣೆ ವೇಳೆ ಪೊಲೀಸರು ನಿಗದಿ ಪಡಿಸಿದ ಸ್ಥಳಗಳಲ್ಲೇ ಮೆರವಣಿಗೆ ನಡೆಸುವುದು ಒಳಿತು. ಹಬ್ಬಗಳ ಸಂದರ್ಭಗಳಲ್ಲಿ ರಸ್ತೆಗಳಲ್ಲಿ ಯುವಕರು ವೀಲಿಂಗ್ ಮಾಡುವುದು .ಕರ್ಕಶವಾಗಿ ಶಬ್ದಹೊರಡಿಸುವ ಬೈಕ್ ಗಳನ್ನು ಓಡಿಸುವವರಿಗೂ ಮುಖಂಡರು ತಿಳುವಳಿಕೆ ನೀಡಬೇಕೆಂದು ಮನವಿ ಮಾಡಿದರು.
ಸಭೆಯಲ್ಲಿ ಎಸ್ .ಐ.ಗಳಾದ ಪಂಚಾಕ್ಷರಿಸ್ವಾಮಿ. ನಾಗಯ್ಯ ಹಾಗೂ ಸಿಬ್ಬಂದಿ ಇದ್ದರು.ಈ ವೇಳೆ ನಗರಸಭೆ ಸದಸ್ಯ ಸೈಯದ್ ಯೂನಸ್. ಮಾಜಿ ಸದಸ್ಯ ಮಜಾಜ್ ಅಹಮದ್, ಎಸ್ ಡಿಪಿಐ.ಮುಖ್ಯಸ್ಥ ತಬ್ರೈಜ್, ಫಜಲ್,ಡಿ.ಎಸ್.ಎಸ್. ಮುಖಂಡ ಕಾಂತರಾಜು. ಮಂಜು.ರವಿಗೌಡ,ರಮೇಶ್ ಸೇರಿದಂತೆ ಅನೇಕ ಮುಖಂಡರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ