Auto: ಆಟೋ, ಜೀಪ್‌ಗಳಲ್ಲಿ ಕುರಿ ರೀತಿ ಜನರ ಸಾಗಣೆ! 


Team Udayavani, Aug 15, 2023, 4:32 PM IST

tdy-12

ಎಚ್‌.ಡಿ.ಕೋಟೆ: ತಾಲೂಕು ಕೇಂದ್ರ ಎಚ್‌.ಡಿ.ಕೋಟೆ ಪಟ್ಟಣದಲ್ಲಿ  ಸರ್ಕಾರಿ ಮತ್ತು ಪ್ರತಿಷ್ಠಿತ ಖಾಸಗಿ ಶಾಲಾ ಮಕ್ಕಳನ್ನು ಪ್ಯಾಸೇಂಜರ್‌ ಮತ್ತು ಗೂಡ್ಸ್‌ ಆಟೋಗಳು ಕುರಿಗಳಂತೆ ತುಂಬಿಕೊಂಡು ಸಂಚರಿಸುತ್ತಿವೆ.

ಮಕ್ಕಳನ್ನು ಶಾಲೆಗಳಿಗೆ ಕರೆತರುವ ಪ್ಯಾಸೇಂಜರ್‌ ಆಟೋಗಳ ಚಾಲಕರು ಇಲ್ಲಿ  ಸಾರಿಗೆ ನಿಯಮಗಳನ್ನು ಗಾಳಿಗೆ ತೂರಿ ವಾಹನದ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ತುಂಬಿಕೊಂಡು ತಾಲೂಕಿನ ಸುತ್ತಮುತ್ತಲ ಗ್ರಾಮಗಳಿಂದ ಸಂಚಾರ ನಡೆಸುತ್ತಿರುವುದು ಸಾಮಾನ್ಯವಾಗಿದೆ.

ಶಾಲಾ ತೆರೆಯುವ ಹಾಗೂ ಬಿಡುವ ವೇಳೆಯಲ್ಲಿ ಪೊಲೀಸ್‌ ಠಾಣೆ ಮುಂದೆ ಜೀಪು, ಆಟೋ ಹಾಗೂ ಹೆಲ್ಮೆಟ್‌ ಇಲ್ಲದೇ ದ್ವಿಚಕ್ರವಾಹನಗಳಲ್ಲಿ ಮಕ್ಕಳನ್ನು ಕೂರಿಸಿಕೊಂಡು ಬೇಕಾಬಿಟ್ಟಿಯಾಗಿ ಸಂಚರಿಸಲಾಗುತ್ತಿದೆ. ಜತೆಗೆ ಜೀಪುಗಳಲ್ಲಿ ಕೇರಳಿಗರ ಶುಂಠಿ ಜಮೀನುಗಳಿಗೆ ಬಡ ಕೂಲಿ ಕಾರ್ಮಿಕರನ್ನು ಕಿಕ್ಕಿರಿದು ತುಂಬಿಕೊಂಡು ಹೊಗಲಾಗುತ್ತಿದೆ.  ಎಚ್‌.ಡಿ.ಕೋಟೆ ಪೊಲೀಸರು ತಮ್ಮ ಕಣ್ಣೇದುರೇ ಇಂತಹ ಘಟನೆಗಳು ಕಂಡು ಬಂದರೂ ಯಾವುದೇ ಕ್ರಮಕೈಗೊಳ್ಳದೇ ಮೌನವಹಿಸಿದ್ದಾರೆ. ಹೀಗೆ ಜನರು ಹಾಗೂ ಮಕ್ಕಳನ್ನು ತುಂಬಿಕೊಂಡು ಹೋಗುವಾಗ ಯಾವುದೇ ಅಪಘಾತ ಸಂಭವಿಸಿ, ಸಾವು ನೋವು ಆದರೆ ಯಾರು ಹೊಣೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಈ ಅವ್ಯವಸ್ಥೆಯನ್ನು ತಾಲೂಕು ಆಡಳಿತ ಕಂಡರೂ ಚಕಾರ ಎತ್ತುತ್ತಿಲ್ಲ ಎಂದು ಕಿಡಿಕಾರಿದ್ದಾರೆ.ಶಾಲಾ ವಾಹನಗಳಲ್ಲಿ ಇಂತಿಷ್ಟು ಜನ, ವಾಹನ ಸುರಕ್ಷತೆ, ಭದ್ರತೆ ಮತ್ತಿತರ ನಿಯಮಗಳನ್ನು ರೂಪಿಸಲಾಗಿದೆ. ಆದರೆ, ಇದ್ಯಾವುದೂ ಇಲ್ಲಿ ಲೆಕ್ಕಕ್ಕಿಲ್ಲ. ತಮಗಿಷ್ಟ ಬಂದಂತೆ ವಾಹನಗಳನ್ನು ಓಡಿಸುತ್ತಿದ್ದರೂ ಇಲ್ಲಿ ಹೇಳುವವರು, ಕೇಳುವವರು ಯಾರು ಇಲ್ಲದಂತಾಗಿದೆ.

ಪ್ಯಾಸೇಂಜರ್‌ ಆಟೋ, ಸರಕು ಸಾಗಣೆ‌ ವಾಹನಗಳಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಮಂದೆ ಕುರಿಗಳಂತೆ ತುಂಬಿಕೊಂಡು ಸಂಚಾರ ನಡೆಸುವ ವಾಹನ ಸವಾರರು ವಿದ್ಯಾರ್ಥಿಗಳು ಹಾಗೂ ಬಡಕೂಲಿ ಕಾರ್ಮಿಕರ ಬದುಕಿನಲ್ಲಿ ಚಲ್ಲಾಟವಾಡುತ್ತಿದ್ದಾರೆ. ಸಾರಿಗೆ ನಿಯಮ ಉಲ್ಲಂಘಿಸುವ ಸವಾರರ ಮೇಲೆ ಎಚ್‌.ಡಿ.ಕೋಟೆ ಪೊಲೀಸರು ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ತಿಳಿಯುತ್ತಿಲ್ಲ. ಏನಾದರೂ ಅನಾಹುತ ಜರುಗಿದರೇ ಯಾರು ಹೊಣೆ, ಇನ್ನಾದರೂ ಸಾರಿಗೆ ನಿಯಮ ಉಲ್ಲಂಘಿಸುವ ಸವಾರರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಎಂದು ತಾಲೂಕು ಘಟಕದ ಅಧ್ಯಕ್ಷ ಆಕಾಶ್‌ ರವೀಂದ್ರ ಮನವಿ ಮಾಡಿದ್ದಾರೆ.

ಈ ಕುರಿತು ಪೊಲೀಸರು ಹಾಗೂ ಜನಪ್ರತಿನಿಧಿಗಳು ಗಮನ ಹರಿಸಿ ಸಂಚಾರ ನಿಯಮ ಉಲ್ಲಂ ಸುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

– ಬಿ.ನಿಂಗಣ್ಣ ಕೋಟೆ

 

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.