ಹಾಡಿಗಳ ಮಕ್ಕಳ ಮೊಗದಲ್ಲಿ ನಗು ಮೂಡಿಸಿದ ಪೀಪಲ್‌ ಟ್ರಿ

ಶಿಕ್ಷಣದಿಂದ ವಂಚಿತರಾಗಿದ್ದ ಗಿರಿಜನ ಮಕ್ಕಳಿಗೆ ಆಟೋಟ ಚಟುವಟಿಕೆ

Team Udayavani, Oct 22, 2020, 1:30 PM IST

mysuru-tdy-1

ಎಚ್‌.ಡಿ.ಕೋಟೆ: ಕೋವಿಡ್ ದಿಂದ ಮೂಲೆ ಗುಂಪಾಗಿದ್ದ ಗಿರಿಜನರ ಮಕ್ಕಳಿಗೆ ಪೀಪಲ್‌ ಟ್ರಿ ಸಂಸ್ಥೆಯು, ವಿವಿಧ ಆಟೋಟ ಕ್ರಿಯಾಶೀಲಚಟುವಟಿಕೆಗಳನ್ನು ಹಮ್ಮಿಕೊಂಡು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡುತ್ತಿದೆ.

ಎಚ್‌.ಡಿ.ಕೋಟೆ ತಾಲೂಕುಬಹುಭಾಗಅರಣ್ಯ,ಹಾಡಿಗಳಿಂದ ಆವೃತ್ತವಾಗಿದೆ. ಬಹುಸಂಖ್ಯೆ ಹಾಡಿ ಗಳುಅರಣ್ಯದೊಡಲ ಮಧ್ಯದಲ್ಲಿ ಸಿಲುಕಿಕೊಂಡಿವೆ. ಕೋವಿಡ್, ಲಾಕ್‌ಡೌನ್‌ನಿಂದಕಳೆದ 7 ತಿಂಗಳಿಂದ ಹಾಡಿಯ ಮಕ್ಕಳು ಕಲಿಕೆ, ಆಟೋಟಗಳಿಂದ ವಂಚಿತಾಗಿದ್ದರು. ಅರಣ್ಯದಲ್ಲೇ ಅಲೆದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಪ್ರಸ್ತುತ ಬಹುತೇಕ ಶಾಲೆಗಳು ಆನ್‌ಲೈನ್‌ ಮೂಲಕ ಮಕ್ಕಳಿಗೆ ಶಿಕ್ಷಣ ನೀಡುತ್ತಿವೆ. ಆದರೆ, ಹಾಡಿಗಳಿಗೆ ವಿದ್ಯುತ್‌ ಸಂಪರ್ಕವೇ ಇಲ್ಲದಿರುವಾಗ ಹಾಡಿಯ ಮಕ್ಕಳಿಗೆ ಶಿಕ್ಷಣ, ಆಟೋಟ, ಮನ ರಂಜನೆಯು ಮರೀಚಿಕೆಯಾಗಿದೆ.

ಇಂತಹ ಸನ್ನಿವೇಶದಲ್ಲಿ ಪೀಪಲ್‌ ಟ್ರಿ ಸಂಸ್ಥೆ ಹಾಡಿ ಗಳ ವಿದ್ಯಾವಂತ ಯುವಕರನ್ನು ಗುರುತಿಸಿ ಅವರ ಮೂಲಕ ಹಾಡಿ ಮಕ್ಕಳ ಶಿಕ್ಷಣಕ್ಕೆ ಪೂರಕವಾದಕಲಿಕೆ ತರಬೇತಿ ಕೊಡಿಸುವ ಮೂಲಕ ಅವರಿಗೆ ಶೈಕ್ಷಣಿಕ ವಾತಾವರಣ ಕಲ್ಪಿಸುತ್ತಿದೆ. ಆರಂಭದಲ್ಲಿ ತಾಲೂಕಿನ ಕೇರಳ ಗಡಿಭಾಗದ ಮಾನಿ ಮೂಲೆ ಹಾಡಿ ಮತ್ತು ಗೋಳೂರು ಹಾಡಿಗಳ ಸುಮಾರು 50ಕ್ಕೂ ಹೆಚ್ಚು ಮಕ್ಕಳಿಗೆ ಬೆಳಗ್ಗಿನಿಂದ ಸಂಜೆ ತನಕ ನೃತ್ಯ, ಹಾಡುಗಳು, ನಾಟಕ ಸೇರಿದಂತೆ ಕಲಿಕೆಗೆ ಪೂರಕವಾದ ತರಬೇತಿ ನೀಡಲಾಗುತ್ತಿದೆ. ಅಲ್ಲದೇ ತಾಲೂಕಿನ 22 ಹಾಡಿಗಳಲ್ಲಿ ಆದಿವಾಸಿಗರ ಮಕ್ಕಳ ಬೌದ್ಧಿಕ ಮಟ್ಟದ ಬೆಳವಣಿಗೆಗೆ ಪೂರಕವಾದ ತರಬೇತಿ ನೀಡಲಾಗುತ್ತಿದೆ. ನಂತರ ಹಂತ ಹಂತವಾಗಿ ತಾಲೂಕಿನ ಎಲ್ಲಾ ಹಾಡಿಗಳ ಮಕ್ಕಳಿಗೆ ತರಬೇತಿ ನೀಡಿ ಅವರನ್ನು ಸಮಾಜದ ಮುಖ್ಯ ವಾಹಿನಿ ತರುವ ಪ್ರಯತ್ನ ನಡೆಯುತ್ತಿದೆ.

ಅರಣ್ಯ ಮಧ್ಯದ ಗುಡಿಸಲುಗಳಲ್ಲೇ ಕುಳಿತು ಶಿಕ್ಷಣದಿಂದ ವಂಚಿತರಾಗಿದ್ದ ಆದಿವಾಸಿ ಮಕ್ಕಳು ಉತ್ಸಹದಿಂದ ನೃತ್ಯ, ನಾಟಕ, ಹಾಡುಗಳು ಮತ್ತಿತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಜೀವಿಕ ಉಮೇಶ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವರು ಹಾಡಿಯಲ್ಲಿ ಮಕ್ಕಳಿಗೆ ವಿವಿಧ ಶೈಕ್ಷಣಿಕ ತರಬೇತಿ ನೀಡುತ್ತಿದ್ದಾರೆ.

ಸಾಮಾಜಿಕ ಅಂತರ: ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯದ ದೃಷ್ಟಿ ಮತ್ತು ಸೋಂಕು ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಸ್ಯಾನಿ ಟೈಸರ್‌ ಬಳಕೆ, ದೈಹಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಸೇರಿದಂತೆ ನಿಯಮ ಪಾಲನೆ ಮಾಡುವ ಮೂಲಕ ತರಬೇತಿ ನೀಡುತ್ತಿರುವುದು ವಿಶೇಷವಾಗಿದೆ. ಕೊರೊನಾದಿಂದ ಸಮಾಜದ ಪರಿಚಯವಿಲ್ಲದಂತೆ ಅತಂತ್ರರಾಗಿದ್ದ ಮಕ್ಕಳ ಮೊಗದಲ್ಲಿ ಪೀಪಲ್‌ ಟ್ರಿ ಸಂಸ್ಥೆಯ ನಗು ಮೂಡಿಸಿದೆ.

 

-ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.