ವಿದ್ಯಾರ್ಥಿನಿಗೆ ದೈಹಿಕ ಶಿಕ್ಷಕನಿಂದ ಅಶ್ಲೀಲ ಸಂದೇಶ : ಪ್ರಶ್ನಿಸಿದ ವಿದ್ಯಾರ್ಥಿಗೆ ಬೆದರಿಕೆ
Team Udayavani, Mar 28, 2022, 7:39 PM IST
ಪಿರಿಯಾಪಟ್ಟಣ: ವಿದ್ಯಾರ್ಥಿನಿಗೆ ಲೈಂಗಿಕ ಪ್ರಚೋದನಕಾರಿ ಸಂದೇಶ ಕಳುಹಿಸಿದ ಶಿಕ್ಷಕನ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರಕರಣ ದಾಖಲಿಸುವಂತೆ ದೂರು ನೀಡಿರುವ ಘಟನೆ ಜರುಗಿದೆ.
ತಾಲ್ಲೂಕಿನ ಬೆಟ್ಟದಪುರ ಹೋಬಳಿ ವ್ಯಾಪ್ತಿಗೆ ಬರುವ ಭುವನಹಳ್ಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ನಿತ್ಯಾನಂದ ಪಾಟಿಗಾರ್ ಎಂಬುವವರು ಈ ಆಪಾಧನೆಗೆ ಗುರಿಯಾಗಿದ್ದಾನೆ. ಇತನ ವಿರುದ್ದ ನೊಂದ ವಿದ್ಯಾರ್ಥಿಯ ಸಂಬಂಧಿಕ ಜೋಗನಹಳ್ಳಿ ಗ್ರಾಮದ ಚನ್ನವೀರಯ್ಯ ಎಂಬುವವರು ಬೆಟ್ಟದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ :
ಭುವನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 8 ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಗೆ ಶಿಕ್ಷಕ ಪ್ರತಿನಿತ್ಯ ಲೈಂಗಿಕ ಪ್ರಚೋದನಕಾರಿ ಸಂದೇಶಗಳನ್ನು ತನ್ನ ಮೊಬೈಲ್ ಮುಖಾಂತರ ಕಳುಹಿಸುತ್ತಿದ್ದು, ಈ ಬಗ್ಗೆ ವಿದ್ಯಾರ್ಥಿನಿಯು ಅದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂಬಂಧಿ ವಿಶ್ವನಾಥನಿಗೆ ಈ ವಿಚಾರವಾಗಿ ತನ್ನ ಅಳಲನ್ನು ತೋಡಿಕೊಂಡಿದ್ದಾಳೆ ಆಗ ವಿಶ್ವನಾಥನು ತನ್ನ ಮೊತ್ತೊಬ್ಬ ಸ್ನೇಹಿತನ ಬಳಿ ಈ ಸಮಸ್ಯೆಯ ಬಗ್ಗೆ ಚರ್ಚಿಸಿದ್ದಾನೆ ಆ ಬಳಿಕ ವಿಶ್ವನಾಥ ನೇರವಾಗಿ ದೈಹಿಕ ಶಿಕ್ಷಕ ನಿತ್ಯಾನಂದ ಪಾಟಿಗಾರ್ ಬಳಿ ಈ ವಿಚಾರವಾಗಿ ಪ್ರಶ್ನಿಸಿದ್ದಾನೆ.
ಇದನ್ನೂ ಓದಿ : ಹಳಿ ಮೇಲೆ ನಿಂತ ಕುರಿಗಳಿಗೆ ರೈಲು ಡಿಕ್ಕಿ : ಓರ್ವ ಕುರಿಗಾಹಿ ಸೇರಿ 32 ಕುರಿಗಳ ದಾರುಣ ಸಾವು
ಮರುದಿನ ಮಾ.25 ರಂದು ಶಾಲೆಗೆ ಆಗಮಿಸಿದ ಶಿಕ್ಷಕ ನಿತ್ಯಾನಂದ ಪಾಟಿಗಾರ ವಿಧ್ಯಾರ್ಥಿ ವಿಶ್ವನಾಥನನ್ನು ಕರೆದು ವಿದ್ಯಾರ್ಥಿನಿಗೆ ಸಂದೇಶ ಕಳುಹಿಸುತ್ತಿರುವ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಶಾಲೆಯಿಂದ ಹೊರ ಹಾಕುತ್ತೇನೆ ಎಂದು ಬೆದರಿಸಿ ಹಲ್ಲೆ ಮಾಡಿದ್ದಾನೆ, ಇದರಿಂದ ಮನನೊಂದ ವಿಶ್ವನಾಥ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಸಾವು ಬದುಕಿನ ನಡುವೆ ಹೋರಾಡುತ್ತಾ ಜಿಲ್ಲೆಯ ಕೃಷ್ಣರಾಜೇಂದ್ರ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.