ಪಿರಿಯಾಪಟ್ಟಣ : ಶೀಲ ಶಂಕಿಸಿ ಪತ್ನಿಯನ್ನೇ ಕೊಲೆಗೈದು ಜಮೀನಿನಲ್ಲಿ ಎಸೆದು ಪರಾರಿಯಾದ ಪತಿ
Team Udayavani, May 15, 2022, 7:27 PM IST
ಪಿರಿಯಾಪಟ್ಟಣ : ಶೀಲ ಶಂಕಿಸಿ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿ ಪಕ್ಕದ ಜಮೀನಿನಲ್ಲಿ ಎಸೆದು ಪರಾರಿಯಾಗಿರುವ ಘಟನೆ ತಾಲೂಕಿನ ಸತ್ಯಗಾಲ ಬಿ ಕಾವಲ್ ನಲ್ಲಿ ಶನಿವಾರ ರಾತ್ರಿ ನಡೆದಿದೆ.
ತಾಲೂಕಿನ ಸತ್ಯಗಾಲ ಬಿ ಕಾವಲ್ ನ ನಿವಾಸಿ ಲಕ್ಷ್ಮಿ ಮೃತ ಮಹಿಳೆ, ಈಕೆಯ ಪತಿ ಚಂದ್ರು ಎಂಬಾತನೇ ಕೊಲೆ ಮಾಡಿರುವ ಆರೋಪಿ.
ಕಳೆದ ಹನ್ನೆರಡು ವರ್ಷಗಳ ಹಿಂದೆ ಚಂದ್ರು, ಲಕ್ಷ್ಮಿಯನ್ನು ಪ್ರೀತಿಸಿ ಮದುವೆಯಾಗಿದ್ದ ಇವರಿಗೆ ಇಬ್ಬರು ಮಕ್ಕಳಿದ್ದಾರೆ.
ಮದುವೆಯಾದ ದಿನದಿಂದ ಅನ್ಯೋನ್ಯವಾಗಿದ್ದ ಗಂಡ ಹೆಂಡತಿ, ಕಳೆದ ಐದು ವರ್ಷದಿಂದ ತನ್ನ ಪತ್ನಿ ಫೋನ್ ನಲ್ಲಿ ಅವರಿವರ ಜೊತೆ ಮಾತನಾಡುತ್ತಿದ್ದಾಳೆ ಎಂದು ಅನುಮಾನಗೊಂಡ ಪತಿ ಶನಿವಾರ ರಾತ್ರಿ ಪತ್ನಿಯನ್ನು ಕೊಲೆ ಮಾಡಿ ಬಳಿಕ ಶವವನ್ನು ಜಮೀನಿನಲ್ಲಿ ಎಸೆದು ಪರಾರಿಯಾಗಿದ್ದಾನೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ರವಾನಿಸಲಾಗಿದೆ ಈ ಸಂಬಂಧ ಆರಕ್ಷಕ ವೃತ್ತ ನಿರೀಕ್ಷಕ ಜಗದೀಶ್ ಎಸ್ ಐ ಪುಟ್ಟರಾಜು ಪೇದೆಗಳಾದ ಅಸ್ಲಮ್ ಪಾಶ ಸುರೇಶ್ ಮುಂತಾದವರು ಆರೋಪಿ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಗೋವಾ ಗ್ರಾ.ಪಂ.ಚುನಾವಣೆ; ಕನ್ನಡ ಅಭ್ಯರ್ಥಿಗಳ ಪ್ಯಾನಲ್ : ವಿವಾದಕ್ಕೆ ಗುರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?