ಪ್ರತಿನಿಧಿಗಳಿಗೆ ಅರಿವಿದ್ದರೆ ಯೋಜನೆ ಜಾರಿ ಸಾಧ್ಯ


Team Udayavani, Jun 17, 2019, 3:00 AM IST

pratini

ಹುಣಸೂರು: ಪ್ರತಿಯೊಬ್ಬ ಜನಪ್ರತಿನಿಧಿ ಯೂ ಸರ್ಕಾರಗಳ ಯೋಜನೆಗಳ ಬಗ್ಗೆ ತಿಳಿದುಕೊಂಡಿದ್ದಲ್ಲಿ ಮಾತ್ರ ಕಾರ್ಯಕ್ರಮಗಳು ಸಮರ್ಪಕವಾಗಿ ಜಾರಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆ ಪ್ರತಿನಿಧಿಗಳ ಸಭೆ ನಡೆಸಿದರೂ ಜನಪ್ರತಿನಿಧಿಗಳೇ ನಿರುತ್ಸಾಹ ತೋರುತ್ತಿದ್ದಾರೆ ಎಂದು ಶಾಸಕ ಎಚ್‌.ವಿಶ್ವನಾಥ್‌ ವಿಷಾದಿಸಿದರು.

ನಗರದಲ್ಲಿ ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ ಸೇರಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕೇಂದ್ರ-ರಾಜ್ಯ ಪುರಸ್ಕೃತ ಯೋಜನೆಗಳ ಕುರಿತು ಸ್ಥಳೀಯ ಜನಪ್ರತಿನಿಧಿಗಳಿಗೆ ಆಯೋಜಿಸಿದ್ದ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಯೋಜನೆಗಳ ಬಗ್ಗೆ ಜನಪ್ರತಿನಿ ಧಿಗಳು ಅಧಿ ಕಾರಿಗಳನ್ನು ಪ್ರಶ್ನಿಸಿದರೆ, ಜನಪ್ರತಿನಿಧಿ ಗಳನ್ನು ಜನರು ಪ್ರಶ್ನಿಸುತ್ತಾರೆ. ಪ್ರತಿನಿಧಿಗಳಾಗಿ ನೀವು ಎಲ್ಲವನ್ನೂ ತಿಳಿದಿರಬೇಕು. ಆದರೆ, ಬಹುತೇಕ ಪ್ರತಿನಿಧಿ ಗಳು ಮಾಹಿತಿ ಸಭೆಗೆ ಗೈರಾಗುವುದು ಸರಿಯಲ್ಲ ಎಂದರು.

ತಾಲೂಕಿನಲ್ಲಿ ನೀರಾವರಿ, ರಸ್ತೆ, ಚರಂಡಿ, ಒತ್ತುವರಿ, ಬರಗಾಲ ಸೇರಿ ಸಾಕಷ್ಟು ದೊಡ್ಡ ಸಮಸ್ಯೆಗಳೇ ಇದೆ. ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರವೂ ಸಾಕಷ್ಟು ಯೋಜನೆ ಜಾರಿಗೊಳಿಸಿದೆ ಎಂದು ತಿಳಿಸಿದರು.

ಅನುದಾನ ಸದ್ಬಳಕೆ ಮಾಡಿಕೊಳ್ಳಿ: ತಾಪಂ ಇಒ ಸಿ.ಆರ್‌.ಕೃಷ್ಣಕುಮಾರ್‌ ಮಾತನಾಡಿ, ನರೇಗಾ ಯೋಜನೆಯಡಿ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಬಹುದಾಗಿದೆ. ತೋಟಗಾರಿಕೆ, ಕೃಷಿ, ರೇಷ್ಮೆ ಇಲಾಖೆಗಳಲ್ಲಿ ವೈಯಕ್ತಿಕ ಯೋಜನೆಗಳ ಜಾರಿಗೆ ಸಾಕಷ್ಟು ಅನುದಾನಗಳ ಲಭ್ಯವಿದ್ದು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಅಧಿಕಾರಿಗಳಿಗೆ ತರಾಟೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆರೋಗ್ಯ, ಕೈಗಾರಿಕೆ, ಲೋಕೋಪಯೋಗಿ, ನೀರಾವರಿ ಇಲಾಖೆಗಳ ಯೋಜನೆಗಳನ್ನೊಳಗೊಂಡ ಯಾವುದೇ ಕರಪತ್ರ, ಮಾಹಿತಿ ಪತ್ರಗಳು ಪ್ರತಿಯೊಬ್ಬರಿಗೂ ನೀಡಿದ್ದ ಮಾಹಿತಿ ಕಿಟ್‌ನಲ್ಲಿ ಇರದಿದ್ದನ್ನು ಕಂಡು ಆಕ್ರೋಶಗೊಂಡ ಶಾಸಕರು, ಈ ಸಂಬಂಧಿಸಿದ ಅಧಿಕಾರಿಗಳನ್ನು ತೀವ್ರ ತರಾಟೆ ತೆಗೆದುಕೊಂಡರು. ಈ ವೇಳೆ ಕಾರಣ ಹೇಳಲು ಹೊರಟ ಅ ಧಿಕಾರಿಯನ್ನು ತಡೆದು, ಸಬೂಬು ಹೇಳಬೇಡಿ, ಇಂತಹ ಪ್ರಕರಣ ಮತ್ತೆ ನಡೆಯಬಾರದು ಎಂದರು.

ಅರ್ಜಿ ಪರಿಶೀಲನೆಗೆ ಸಮಿತಿ ರಚನೆ: ತಹಶೀಲ್ದಾರ್‌ ಬಸವರಾಜು ಮಾತನಾಡಿ, ಸಾಲಮನ್ನಾ ಯೋಜನೆಗೆ ಒಳಪಡದ ರೈತರ ಅರ್ಜಿಗಳ ಪರಿಶೀಲನೆಗಾಗಿ ತಾಲೂಕು ಮಟ್ಟದ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ಸಹಕಾರ ಸಂಘಗಳ ಸದಸ್ಯರ ಒಟ್ಟು 3188 ಅರ್ಜಿಗಳು ಬಂದಿದ್ದು, ಈ ಪೈಕಿ 46 ಅರ್ಜಿ ಅನರ್ಹಗೊಳಿಸಿ ಉಳಿದವುಗಳಿಗೆ ಸೌಲಭ್ಯ ನೀಡಲು ಸೂಚಿಸಲಾಗಿದೆ. ಅಂತೆಯೇ ರಾಷ್ಟ್ರೀಕೃತ ಬ್ಯಾಂಕುಗಳ 1713 ಅರ್ಜಿಗಳ ಪೈಕಿ ಕೇವಲ 17 ಅರ್ಜಿಗಳನ್ನು ಮಾತ್ರ ತಿರಸ್ಕರಿಸಲಾಗಿದೆ ಎಂದು ತಿಳಿಸಿದರು.

ಈ ವೇಳೆ ಜಿಪಂ ಉಪಾಧ್ಯಕ್ಷೆ ಗೌರಮ್ಮ, ಸದಸ್ಯರಾದ ಎಂ.ಬಿ.ಸುರೇಂದ್ರ, ಕಟ್ಟನಾಯ್ಕ, ತಾಪಂ ಅಧ್ಯಕ್ಷೆ ಪದ್ಮಮ್ಮ, ಉಪಾಧ್ಯಕ್ಷ ಪ್ರೇಮೇಗೌಡ, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಅಧಿ ಕಾರಿಗಳು ಭಾಗವಹಿಸಿದ್ದರು.

76,58 ಕೋಟಿ ಸಾಲಮನ್ನಾ ಆಗಲಿದೆ: ರಾಜ್ಯ ಸರ್ಕಾರದ‌ ಸಾಲಮನ್ನಾ ಕಾರ್ಯಕ್ರಮದಡಿ ತಾಲೂಕಿನ 29 ಸಹಕಾರ ಸಂಘಗಳ ಒಟ್ಟು 8,659 ಅರ್ಹ ಫಲಾನುಭವಿಗಳನ್ನು ಯೋಜನೆಯಡಿ ಒಳಪಡಿಸಿದ್ದು, 76.58 ಕೋಟಿ ರೂ. ಸಾಲ ಮನ್ನಾ ಆಗಲಿದೆ. ಈ ಪೈಕಿ ಈಗಾಗಲೇ 3500 ರೈತರ 16.5ಕೋಟಿ ರೂ. ಮೊತ್ತ ಸಾಲ ಮನ್ನಾ ಆಗಿದೆ ಎಂದು ಸಹಕಾರ ಇಲಾಖೆಯ ಸಹಾಯಕ ನಿಬಂಧಕ ಗೋಪಾಲಯ್ಯ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.