ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಿ
Team Udayavani, May 20, 2018, 2:06 PM IST
ಪಿರಿಯಾಪಟ್ಟಣ: ಬಾಲ್ಯದಿಂದಲೇ ಮಕ್ಕಳಲ್ಲಿ ಪ್ರತಿಭೆ ಹೊರತರಲು ಪೋಷಕರು ವೇದಿಕೆ ಕಲ್ಪಿಸಬೇಕು ಎಂದು ನಟ ಪ್ರೇಮ್ ತಿಳಿಸಿದರು.
ಪಟ್ಟಣದ ಸಾಯಿ ಸಮುದಾಯ ಭವನದಲ್ಲಿ ಸಂಕಲ್ಪ ನೃತ್ಯ ಕಲಾ ಶಾಲೆ ಹಮ್ಮಿಕೊಂಡಿದ್ದ ಚಿಲಿಪಿಲಿ ಕಲರವ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿ ಮಗುವಿನಲ್ಲೂ ಬಾಲ್ಯದಲ್ಲೇ ಪ್ರತಿಭೆ ಅಡಗಿರುತ್ತದೆ. ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಹೊರಹಾಕಲು ಪ್ರಯತ್ನಿಸಬೇಕು. ಇಂತಹ ಕೆಲಸವನ್ನು ನೃತ್ಯ ಕಲಾ ಶಾಲೆಗಳು ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಕೇವಲ ಪಾಠ ಪ್ರವಚನದಿಂದಷ್ಟೇ ಜಾnನ ಪಡೆಯಲು ಸಾಧ್ಯವಿಲ್ಲ.
ಅದರ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅವಶ್ಯಕವಾಗಿದೆ. ಕಲಾ ಶಾಲೆಗಳಿಂದಾಗಿ ಕಲಾ ಸಂಸ್ಕೃತಿಯು ಉಳಿಯುತ್ತದೆ. ಪ್ರತಿಯೊಬ್ಬರಿಗೂ ಕನ್ನಡ ನಾಡು ನುಡಿಯ ಬಗ್ಗೆ ಜಾಗೃತಿ, ಅಭಿಮಾನ ಹೆಚ್ಚಾಗುತ್ತದೆ. ಪ್ರತಿಪಾತ್ರಗಳಲ್ಲಿಯೂ ತನ್ನದೇ ಆದಂತಹ ಸ್ಥಾನಮಾನ ಗೌರವ ಹೆಚ್ಚಾಗುತ್ತದೆ. ಈ ಕಾರಣಕ್ಕಾಗಿ ಪೋಷಕರು ಮಕ್ಕಳಲ್ಲಿರುವ ಪ್ರತಿಭೆಗಳಿಗೆ ಸೂಕ್ತ ಅವಕಾಶ ಕಲ್ಪಿಸಬೇಕು ಎಂದರು.
ಈ ಸಂದರ್ಭದಲ್ಲಿ ಲವಿ ಸ್ಟಾರ್ ಪ್ರೇಮ್ ಹಾಗೂ ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕಗಳಿಸಿದ ಪಟ್ಟಣದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯತು. ತಾಪಂ ಅಧ್ಯಕ್ಷೆ ನಿರೂಪಾ ರಾಜೇಶ್, ಪುರಸಭೆ ಅಧ್ಯಕ್ಷ ವೇಣುಗೋಪಾಲ್, ಸದಸ್ಯ ನಂಜುಂಡಸ್ವಾಮಿ, ಬಿಗ್ಬಾಸ್ ಖ್ಯಾತಿಯ ಜಾದೂಗಾರ್ತಿ ಸುಮಾರಾಜ್ಕುಮಾರ್,
ಸಂಕಲ್ಪ ನೃತ್ಯ ಕಲಾ ಶಾಲೆಯ ಸ್ಥಾಪಕರಾದ ಮಂಜುನಾಥ್, ಭವ್ಯ, ನೃತ್ಯ ಸಂಯೋಜಕರಾದ ಭರತ್, ನಿಸರ್ಗ, ಮಾಲಿನಿ, ಪ್ರಸನ್ನ, ಸ್ಫೂರ್ತಿ ಸ್ವಾವಲಂಬಿ ಟ್ರಸ್ಟ್ ನ ಆಶಾ ಮಹದೇವ್, ಆದಿಚುಂಚನಗಿರಿ ಶಾಲೆಯ ವ್ಯವಸ್ಥಾಪಕ ಸುಧಾಕರ್, ಆರ್ಎಸ್ಎಸ್ ಹಿರಿಯ ಮುಖಂಡ ನಾರಾಯಣ ಅಡಪಂಗ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ