”ದಯಮಾಡಿ ನನ್ನನ್ನು ಬಿಟ್ಟುಬಿಡಿ..”: ಕೈ ಮುಗಿದು ಕೇಳಿದ ಶಾಸಕ ರಾಮದಾಸ್
Team Udayavani, Nov 17, 2022, 2:56 PM IST
ಮೈಸೂರು: ಇಲ್ಲಿನ ಬಸ್ ನಿಲ್ದಾಣದ ಗುಂಬಜ್ ವಿವಾದ ದಿನಕ್ಕೊಂದು ರೂಪ ಪಡೆಯುತ್ತಿದೆ. ಇದೀಗ ಶಾಸಕ ಎಸ್ ಎ ರಾಮದಾಸ್ ಅವರು, ‘ನನ್ನನ್ನು ದಯಮಾಡಿ, ಬಿಟ್ಟು ಬಿಡಿ’ ಎಂದು ಕೈ ಮುಗಿದು ಕೇಳಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,” ನಾನು ಈ ವಿಚಾರದಲ್ಲಿ ತಪ್ಪು ಮಾಡಿದ್ದರೆ ಶಿಕ್ಷೆ ಕೊಡಲಿ. ನಷ್ಟದ ಹಣವನ್ನು ನನ್ನ ಸಂಬಳದಿಂದ ಭರಿಸುತ್ತೇನೆ” ಎಂದು ಪರೋಕ್ಷವಾಗಿ ಸ್ವಪಕ್ಷದ ಸಂಸದ ಪ್ರತಾಪ್ ಸಿಂಹ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ:ಅಡಿಲೇಡ್ ನಲ್ಲಿ ಆ್ಯಶ್ಟನ್ ಆ್ಯಗರ್ ಸೂಪರ್ ಮ್ಯಾನ್ ಫೀಲ್ಡಿಂಗ್: ಇಲ್ಲಿದೆ ವಿಡಿಯೋ
ಬಿಜೆಪಿಯ 11 ಜನ ಶಾಸಕರು ಇದ್ದರು. ಕಿರುಕುಳ ನೀಡಿ 10 ಜನ ಬೇರೆ ಪಕ್ಷಕ್ಕೆ ಹೊರಟು ಹೋದರು. ಉಳಿದಿರುವವನು ನಾನೊಬ್ಬನೆ. ದಯಮಾಡಿ ನನ್ನನ್ನು ಬಿಟ್ಟು ಬಿಡಿ. ಏನೂ ಪ್ರಶ್ನೆ ಕೇಳಬೇಡಿ ಎಂದು ಕೈ ಮುಗಿದು ಬೇಡಿಕೊಂಡರು.
ನಾನು ಅಭಿವೃದ್ಧಿ ಬಗ್ಗೆ ಮಾತ್ರ ಚಿಂತನೆ ಮಾಡುತ್ತೇನೆ. ಪಾರ್ಕ್, ಸ್ಮಶಾನ ಅಭಿವೃದ್ಧಿ ನನ್ನ ಕನಸು. ಸಾಯುವ ಮುನ್ನ ಸಾಧನೆ ಮಾಡಬೇಕು ಎನ್ನುವುದೇ ನನ್ನ ಗುರಿ. ಈ ಬಗ್ಗೆ ಸಿಎಂ ಹಾಗೂ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. ಸಮಿತಿ ರಚಿಸಲು ಮನವಿ ಮಾಡಿದ್ದೇನೆ. ಸಮಿತಿ ಯಾವುದೇ ವರದಿ ಕೊಟ್ಟರೂ ಅದಕ್ಕೆ ಬದ್ದ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ