ಸಾರ್ವಜನಿಕರು, ಪೊಲೀಸರ ನಡುವೆ ಬಾಂಧವ್ಯ ವೃದ್ಧಿಗೆ ತರಬೇತಿ ಶಿಬಿರ: ಸಿಪಿಐ ಪ್ರಕಾಶ್
Team Udayavani, May 12, 2022, 5:32 PM IST
ಪಿರಿಯಾಪಟ್ಟಣ: ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಉತ್ತಮ ಬಾಂಧವ್ಯ ವೃದ್ಧಿಯಾಗಲು ಬಂದೂಕು ತರಬೇತಿ ಶಿಬಿರ ನೆರವಾಗಲಿದೆ ಎಂದು ಬೈಲುಕುಪ್ಪೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಪ್ರಕಾಶ್ ತಿಳಿಸಿದರು.
ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ನಾಗರಿಕ ಬಂದೂಕು ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆಧುನಿಕ ಯುಗದಲ್ಲಿ ಸಾರ್ವಜನಿಕರು ಒಂದಲ್ಲ ಒಂದು ರೀತಿ ಒತ್ತಡದ ನಡುವೆ ಜೀವಿಸುತ್ತಿರುವುದರಿಂದ ಬೆಳಗಿನ ವಾಯು ವಿಹಾರ, ಓಟ, ಈಜು, ಯೋಗ, ವ್ಯಾಯಾಮ ಸೇರಿದಂತೆ ದೈಹಿಕ ಶ್ರಮದಿಂದ ಮನಸ್ಸು ಮತ್ತು ದೇಹಕ್ಕೆ ಉಲ್ಲಾಸ ಸಿಗುತ್ತದೆ, ಬಂದೂಕು ತರಬೇತಿಯಿಂದ ಪ್ರಮಾಣ ಪತ್ರ ಪಡೆದರೆ, ಪರವಾನಗಿ ಪಡೆಯಲು ಸುಲಭ. ಪೊಲೀಸ್ ಇಲಾಖೆಯೊಡನೆ ಸಂಪರ್ಕ ಬೆಳೆದು ಪೊಲೀಸರೆಂದರೆ ಕೆಲವರಲ್ಲಿ ಇರುವ ಭಯ ನಿವಾರಣೆಯಾಗುತ್ತದೆ ಸ್ವಯಂ ಆತ್ಮರಕ್ಷಣೆ ಬಗ್ಗೆ ತಿಳಿಯಲು ನಾಗರಿಕ ಬಂದೂಕು ತರಬೇತಿ ಶಿಬಿರ ಪೂರಕ. ಪ್ರಾಣರಕ್ಷಣೆಗೆ ಬಂದೂಕು ಚಲಾಯಿಸುವುದು ಹೇಗೆ ಎಂಬುದನ್ನು ತಿಳಿಯುವುದು ಅವಶ್ಯಕ. ಬಂದೂಕು ತರಬೇತಿ ಶಿಬಿರ ಸದುಪಯೋಗ ಪಡೆದುಕೊಳ್ಳಬೇಕು. ನಾಗರಿಕರು ಬಂದೂಕನ್ನು ಯಾವ ಯಾವ ಸಮಯದಲ್ಲಿ ಹೇಗೆ ಉಪಯೋಗಿಸಬೇಕು, ಬಂದೂಕು ಬಳಕೆ ಕಲಿತವರು ಇಲಾಖೆಯ ಜೊತೆ ಹೇಗಿರಬೇಕು ಹಾಗೂ ಸಮಾಜಕ್ಕೆ ನಿಮ್ಮ ಕೂಡುಗೆ ಏನು, ಆಯುಧಗಳನ್ನು ಹೇಗೆ ಉಪಯೋಗಿಸಬೇಕು, ಗುರಿ ಅಭ್ಯಾಸ, ಆಯುಧಗಳ ಸುರಕ್ಷತೆ ಮತ್ತು ಸ್ವಚ್ಚತೆಗಳ ಬಗ್ಗೆ ಅರಿವು ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಎಆರ್ಎಸ್ಐ ರಾಜಕುಮಾರ್, ಪೊಲೀಸ್ ಸಿಬ್ಬಂದಿಗಳಾದ ವೀರೇಂದ್ರಕುಮಾರ್, ಮೀರಾ, ರಾಧ ಸೇರಿದಂತೆ ಸುಮಾರು 50 ಕ್ಕೂ ಹೆಚ್ಚು ಸಾರ್ವಜನಿಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚುನಾವಣೆಯಲ್ಲಿ 123 ಸ್ಥಾನ ಗೆಲ್ಲುವ ಗುರಿ : ಯಾರಿಗೂ ಬೆಂಬಲ ಕೊಡುವ ಪ್ರಶ್ನೆಯೇ ಇಲ್ಲ : HDK
ಹುಣಸೂರು: ತಟ್ಟೆಕೆರೆ ಗ್ರಾ.ಪಂ.ಅಧ್ಯಕ್ಷರಾಗಿ ಎ.ಎಂ.ದೇವರಾಜ್ ಅವಿರೋಧ ಆಯ್ಕೆ
ಮೊಮ್ಮಗಳ ಅಗಲಿಕೆ : ಮಾಜಿ ಸಚಿವ ಜಿ.ಟಿ.ದೇವೇಗೌಡರ ನಿವಾಸಕ್ಕೆ ಎಚ್ ಡಿಕೆ ಭೇಟಿ
ಮಳೆಗಾಲ ಆರಂಭವಾದ ಕೂಡಲೇ ಡೆಂಘೀ ಹೆಚ್ಚಳ
ದುಬಾರಿ, ಕಳಪೆ ರಸಗೊಬ್ಬರ: ಕ್ರಮ ಕೈಗೊಳ್ಳಲು ಶಾಸಕ ಕೆ. ಮಹದೇವ್ ಸೂಚನೆ
MUST WATCH
ಹೊಸ ಸೇರ್ಪಡೆ
ಮತ್ತೆ ಆರೆಂಜ್ ಅಲರ್ಟ್; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
6 ತಿಂಗಳಲ್ಲಿ ಗ್ರೀನ್ ಕಾರ್ಡ್ ಪ್ರಕ್ರಿಯೆ ನಡೆಸಲು ಜೋ ಬೈಡೆನ್ ಅವರಿಗೆ ಶಿಫಾರಸು
ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು
ಕ್ಷೀರಭಾಗ್ಯ ಹಾಲಿನ ಪುಡಿ ಪ್ಯಾಕೆಟ್ ತ್ಯಾಜ್ಯವಾಗಿ ಪತ್ತೆ
ಉಡುಪಿ: ಮದುವೆ ನಿಶ್ಚಿತಾರ್ಥಕ್ಕೆ ಬಂದಿದ್ದ ತಾಯಿ, ಮಗು ನಾಪತ್ತೆ