ಹಲವು ಬೆಳವಣಿಗೆಗಳಿಗೆ ಪ್ರಸಾದ್ ಮನೆ ಸಾಕ್ಷಿ
Team Udayavani, Jun 3, 2021, 2:59 PM IST
ಮೈಸೂರು: ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮನೆಯಲ್ಲಿ ಹಲವು ವಿಚಾರಕ್ಕೆ ಮುಹೂರ್ತ ಇಟ್ಟಿದ್ದೇವೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲಿಗೂ ಇಲ್ಲೇ ಮುಹೂರ್ತ ಇಟ್ಟಿದ್ದು. ಸಮ್ಮಿಶ್ರ ಸರ್ಕಾರಪತನಕ್ಕೂ ಇಲ್ಲೇ ಮುಹೂರ್ತ ಇಟ್ಟಿದ್ದು ಎಂದು ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದರು.
ಬುಧವಾರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಭೇಟಿಮಾಡಿ ಗಂಟೆಗೂ ಹೆಚ್ಚುಕಾಲ ಗೌಪ್ಯ ಮಾತುಕತೆ ನಡೆಸಿದ ಬಳಿಕಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪಸಿಎಂ ಆಗುವುದಕ್ಕೂ ಮುಹೂರ್ತ ಇಟ್ಟಿದ್ದು ಶ್ರೀನಿವಾಸ್ ಪ್ರಸಾದ್ಮನೆಯಲ್ಲೇ. ನಂತರದ ಹಲವು ಬೆಳವಣಿಗೆ ಪ್ರಸಾದ್ ಮನೆ ಸಾಕ್ಷಿಆಗಿದೆ. ಈಗಲೂ ಪ್ರಸಾದ್ ಅವರನ್ನು ಭೇಟಿಯಾಗಿ ಇಬ್ಬರೂರಾಜಕೀಯ ಹಾಗೂ ಜಿಲ್ಲೆಯ ವಿದ್ಯಮಾನದ ಬಗ್ಗೆ ಮಾತನಾಡಿದ್ದೇವೆ.
ಸದ್ಯಕ್ಕೆ ಯಾವ ವಿಚಾರಕ್ಕೆ ಮುಹೂರ್ತಇಡಲಾಗಿದೆ ಎಂದು ಹೇಳ್ಳೋಲ್ಲ. ಕಾದು ನೋಡೋಣ ಏನಾಗುತ್ತೆಅಂತ ಎಂದು ಮಾರ್ಮಿಕ ಹೇಳಿಕೆ ನೀಡಿದರು
.ಬಿಎಸ್ವೈ ಆರೋಗ್ಯ ಸರಿಯಿಲ್ಲ: ನಾಯಕತ್ವಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು,ಯಡಿಯೂರಪ್ಪರ ಆರೋಗ್ಯ ಸರಿಯಿಲ್ಲ. ಅವರಆರೋಗ್ಯ ಸರಿಯಾಗಬೇಕು. ಅದರ ಜೊತೆಗೆ ರಾಜ್ಯದಆಡಳಿತದ ಆರೋಗ್ಯವು ಸರಿಯಾಗಬೇಕು. ಇದಕ್ಕಾಗಿಹೈಕಮಾಂಡ್ ಶೀಘ್ರವೇ ಒಂದು ತೀರ್ಮಾನಕೈಗೊಳ್ಳಬೇಕು ಎಂದು ಪರೋಕ್ಷವಾಗಿ ನಾಯಕತ್ವ ಬದಲಾವಣೆಗೆ ಪುಷ್ಟಿಕೊಟ್ಟಂತೆ ಹೇಳಿಕೆ ನೀಡಿದರು.ರಾಜ್ಯ ರಾಜಕಾರಣದಲ್ಲಿ ಸ್ವಲ್ಪ ಗೊಂದಲ ಇದೆ. ಕೆಲವರುದೆಹಲಿಗೆ ಹೋಗಿದ್ದಾರೆ.
ಇನ್ನು ಕೆಲವರು ಹೇಳಿಕೆ ನೀಡುತ್ತಿದ್ದಾರೆ.ಈ ಮಧ್ಯೆ ಯಡಿಯೂರಪ್ಪನವರು ಏನೂ ಮಾತನಾಡುತ್ತಿಲ್ಲ.ಯಾರು ಏನೇ ಮಾಡಿದರೂ ತೀರ್ಮಾನ ಮಾಡೋದುಹೈಕಮಾಂಡ್. ಹೀಗಾಗಿ ಹೈಕಮಾಂಡ್ ಸೂಕ್ತ ತೀರ್ಮಾನಮಾಡಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ