![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಸಿಡಿಲು ಸಹಿತ ಮಳೆಯ ಆರ್ಭಟಕ್ಕೆ ಹಾರಿಹೋದ ಚಾವಣಿಗಳು
Team Udayavani, Apr 10, 2017, 12:32 PM IST
![mys5.jpg](https://www.udayavani.com/wp-content/uploads/2017/04/10/mys5.jpg)
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನ ವನ ಹಾಗೂ ಹನಗೋಡು ಹೋಬಳಿ ಕೆಲ ಗ್ರಾಮಗಳಲ್ಲಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯಾಗಿದ್ದು, ಬಿರುಗಾಳಿಗೆ ಕೆಲವೆಡೆ ಅಸಿಪಾಸ್ತಿ ನಷ್ಟವುಂಟು ಮಾಡಿದೆ.
ತಾಲೂಕಿನ ಹನಗೋಡು ಭಾಗದ ಕರಣಕುಪ್ಪೆ, ಹರೀನಹಳ್ಳಿ, ಕಡೇಮನುಗನಹಳ್ಳಿ, ನೇರಳಕುಪ್ಪೆ, ಬೀಲ್ಲೇನಹೊಸಹಳ್ಳಿ, ಬಿ.ಆರ್ ಕಾವಲ್ ಸೇರಿದಂತೆ ಇತರೆ ಗ್ರಾಮಗಳಲ್ಲಿ ಕಳೆದೆರಡು ದಿನಗಳಿಂದ ಮೋಡಕವಿದ ವಾತಾವರಣವಿತ್ತು. ಸಂಜೆ ವೇಳೆಗೆ ಮೊದಲು ಬಿರುಗಾಳಿ ಸಹಿತ, ಸ್ವಲ್ಪಮಳೆ ಬಂತು, ಮತ್ತೆ ರಾತ್ರಿ 9 ಗಂಟೆಗೆ ಆರಂಭವಾದ ಗುಡುಗು, ಸಿಡಿಲಿನಿಂದ ಕೂಡಿದ್ದ ಮಳೆಯು ಸತತ ಎರಡು ಗಂಟೆಗೂ ಹೆಚ್ಚು ಕಾಲ ಸುರಿದಿದೆ.
ಮನೆ ಚಾವಣಿ ಹಾಗೂ ಬೆಳೆ ನಾಶ: ಹನಗೋಡು ಹೋಬಳಿಯ ಹರೀನಹಳ್ಳಿ ಗ್ರಾಮದ ಶಿವಕುಮಾರ್ ಹಾಗೂ ಶಿವರಾಜು ಎಂಬುವರ ಮನೆಯ ಚಾವಣಿ ಹೆಂಚು ಹಾಗೂ ಶೀಟುಗಳು ಹಾರಿಹೋಗಿವೆ, ಅಲ್ಲದೆ ಇವರಿಗೆ ಸೇರಿದ ಬಾಳೆಬೆಳೆಯೂ ಸಹ ಬಿರುಗಾಳಿಯ ಹೊಡೆತಕ್ಕೆ ಸಿಲುಕಿದ್ದು, ಕರಣಕುಪ್ಪೆ ಗ್ರಾಮದ ಕೆ.ಎಂ.ರಾಜುಗೆ ಸೇರಿದ ಬಾಳೆ ಹಾಗೂ ತೋಟದ ಸುತ್ತ ನೆಟ್ಟಿದ್ದ ಸಿಲ್ವರ್ ಗಿಡಗಳು ಬುಡ ಸಮೇತ ನೆಲಕ್ಕುರುಳಿ ಲಕ್ಷಾಂತರ ರೂ ನಷ್ಟ ಉಂಟಾಗಿದೆ.
ಇನ್ನು ದೇವರಾಜ ಕಾಲೋನಿ (ಕರ್ಣಕುಪ್ಪೆ ಹಾಡಿ) ಯ 8 ಮನೆಗಳ ಚಾವಣಿ ಸಂಪೂರ್ಣ ಹಾನಿಗೊಳ ಗಾಗಿದ್ದು, ಸುತ್ತಮುತ್ತಲಿನಲ್ಲಿ ಮನೆಗಳಿಲ್ಲದೆ, ದೇವರಾಜು, ಜಯಮ್ಮ, ಮುನಿಯಮ್ಮ, ಶಿವಮ್ಮ, ದೊಡ್ಡಮಯ್ಯ, ಸಾಕಮ್ಮ, ರತ್ನಮ್ಮ, ಸಿಳ್ಳಮಾರಯ್ಯ ಅವರುಗಳು ಸುತ್ತಮುತ್ತಲಿನಲ್ಲಿ ಎಲ್ಲೂ ಆಶ್ರಯ ಸಿಗದೆ ಮಳೆಯಲ್ಲೇ ರಾತ್ರಿ ಇಡೀ ಕಳೆದಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿ ಶ್ರೀನಿವಾಸ್ ಮತ್ತು ಪಿಡಿಒ ಭೇಟಿ ನೀಡಿ ಮಹಜರು ನಡೆಸಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ](https://www.udayavani.com/wp-content/uploads/2024/07/Suraj-Revanna-150x90.jpg)
Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ
![Untitled-1](https://www.udayavani.com/wp-content/uploads/2024/07/Untitled-1-21-150x90.jpg)
BJP-JDS 19 ಸಂಸದರಿದ್ರೂ ಬಜೆಟ್ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್
![Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ](https://www.udayavani.com/wp-content/uploads/2024/07/Mysore1-150x84.jpg)
Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ
![Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ](https://www.udayavani.com/wp-content/uploads/2024/07/DKS1-150x84.jpg)
Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ
![Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ](https://www.udayavani.com/wp-content/uploads/2024/07/mane-10-150x80.jpg)
Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.