ವಿದ್ಯುತ್ ಸ್ಪರ್ಶ: ಬೇಕರಿ ಭಸ್ಮ
Team Udayavani, Sep 25, 2018, 11:12 AM IST
ನಂಜನಗೂಡು: ನಗರದಲ್ಲಿ ಭಾನುವಾರ ರಾತ್ರಿ ಗುಡುಗು ಸಿಡಿಲಿನಿಂದ ಕೂಡಿದ ಭಾರೀ ಮಳೆ ಸುರಿಯಿತು. ಈ ನಡುವೆ, ಬೇಕರಿಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ನೂಟ್ ಸಂಭವಿಸಿ 3 ಲಕ್ಷ ರೂ. ಮೌಲ್ಯದ ವಸ್ತುಗಳು ಭಸ್ಮವಾಗಿವೆ.
ಪಟ್ಟಣದ ಬಸ್ನಿಲ್ದಾಣ ಬಳಿಯ ವಾಣಿಜ್ಯ ಮಳಿಗೆ 6ರಲ್ಲಿ ಬಾಡಿಗೆ ಪಡೆದಿದ್ದ ಮೈಸೂರು ಜಿಲ್ಲೆಯ ಮಾರ್ಬಳ್ಳಿ ಎನ್.ರಮೇಶ್ ಹಲವು ವರ್ಷಗಳಿಂದ ಬೇಕರಿ ನಡೆಸುತ್ತಿದ್ದರು. ರಾತ್ರಿ ವಿದ್ಯುತ್ ಸ್ಪರ್ಶಿಸಿ ಬೇಕರಿಯಲ್ಲಿದ್ದ ತಿಂಡಿ ತಿನಿಸು, ಪಾನೀಯ ಪದಾರ್ಥಗಳು ಸೇರಿದಂತೆ ಎರಡು ಫ್ರಿಡ್ಜ್, ಒಂದು ಓವನ್, ಮರದ ಸಾಮಗ್ರಿಗಳು ಸುಟ್ಟು ಕರುಕಲಾಗಿವೆ.
ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಧಾವಿಸಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅವಘಡವನ್ನು ತಪ್ಪಿಸಿತು. ಅಂಗಡಿಯಲ್ಲಿ 32 ಸಾವಿರ ರೂ.ನಗದು ಹಾಗೂ 3.5 ಲಕ್ಷ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ರಮೇಶ್ ತಿಳಿಸಿದ್ದಾರೆ. ಸಾರಿಗೆ ಸಂಸ್ಥೆ ಡಿಪೋ ವ್ಯವಸ್ಥಾಪಕ ಮಹದೇವ ಸ್ವಾಮಿ ಮತ್ತಿತರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು