ಮೈಸೂರು ರಾಜವಂಶಸ್ಥರಿಗೆ ಬಿಗ್‌ ರಿಲೀಫ್


Team Udayavani, Apr 6, 2018, 6:35 AM IST

180405kpn84.jpg

ಮೈಸೂರು: ಆದಾಯ, ಸಂಪತ್ತು ತೆರಿಗೆ ನಿರ್ಧಾರ ವಿಚಾರದಲ್ಲಿ ಉಂಟಾಗಿದ್ದ ಗೊಂದಲದಿಂದಾಗಿ ನಾಲ್ಕು ದಶಕ ನಡೆಸಿದ ಕಾನೂನು ಹೋರಾಟದಲ್ಲಿ ಮೈಸೂರು ರಾಜಮನೆತನಕ್ಕೆ ಜಯ ಸಿಕ್ಕಿದೆ. ಕೈತಪ್ಪಿದ್ದ ಕೋಟ್ಯಂತರ ರೂ. ಮೌಲ್ಯದ ಆಸ್ತಿ, ಹೆಚ್ಚುವರಿ ಪಾವತಿಸಿದ್ದ ತೆರಿಗೆ ಹಣವನ್ನೂ ಆದಾಯ ತೆರಿಗೆ ಇಲಾಖೆ ಹಿಂತಿರುಗಿಸಿದೆ.

ನಗರದಲ್ಲಿನ ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌, ತಮ್ಮ ಪತಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಕಾಲದಿಂದ ಸಂಪತ್ತು ಹಾಗೂ ಆದಾಯ ತೆರಿಗೆ ವಿಚಾರದಲ್ಲಿ ಕಾನೂನು ಹೋರಾಟ ಮಾಡಲಾಗಿತ್ತು. ಇದೀಗ ಗೊಂದಲಗಳು ಬಗೆಹರಿದಿವೆ ಎಂದು ಸ್ಪಷ್ಟಪಡಿಸಿದರು.

ರಾಜಮನೆತನಕ್ಕೆ ಸೇರಿದ ಮೈಸೂರಿನ ಆಸ್ತಿಗಳ ಮೌಲ್ಯಮಾಪನ ಸರಿಯಾಗಿಲ್ಲ, ಆದ್ದರಿಂದ 1975ರಿಂದಲೂ ಇಲಾಖೆ ಕೇಳಿದಷ್ಟು ತೆರಿಗೆ ಪಾವತಿಸುತ್ತಲೇ ಬಂದಿದ್ದೇವೆ. ಆದರೆ, ಆದಾಯ ತೆರಿಗೆ ತಮ್ಮ ಆಸ್ತಿಗಳ ಮೌಲ್ಯ ನಿರ್ಧರಿಸಿರುವುದು ಮತ್ತು ತೆರಿಗೆ ವಸೂಲು ಮಾಡುತ್ತಿರುವುದು ಸರಿಯಲ್ಲ ಎಂದು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ಅವರ ನಿಧನದ ಬಳಿಕ ಆ ಕಾನೂನು ಹೋರಾಟ ಮುಂದುವರಿಸಿದ್ದು, 2015ರಲ್ಲಿ ತಮ್ಮ ಪರ ತೀರ್ಪುಬಂದಿತ್ತು ಎಂದು ಹೇಳಿದರು.

ಆದರೆ, ಮುಟ್ಟುಗೋಲು ಹಾಕಿಕೊಂಡಿದ್ದ ಯಾವ್ಯಾವ ಆಸ್ತಿ ಹಿಂತಿರುಗಿಸಬೇಕು, ಕಳೆದ 40 ವರ್ಷಗಳಿಂದ ಹೆಚ್ಚುವರಿಯಾಗಿ ಎಷ್ಟು ತೆರಿಗೆ ಪಾವತಿಸಲಾಗಿದೆ ಎಂಬುದನ್ನು ನಿರ್ಧರಿಸಲು ಆದಾಯ ತೆರಿಗೆ ಇಲಾಖೆ ಎರಡು ವರ್ಷ ತೆಗೆದುಕೊಂಡಿತ್ತು. ಇದೀಗ ಹೆಚ್ಚುವರಿಯಾಗಿ ಕಟ್ಟಿದ್ದ ಆದಾಯ ಮತ್ತು ಸಂಪತ್ತು ತೆರಿಗೆಗೆ 40 ವರ್ಷಗಳ ಬಡ್ಡಿ ಸಮೇತ ಹಿಂತಿರುಗಿಸಿದೆ ಎಂದು ತಿಳಿಸಿದರು.

ದಸರಾ ವಸ್ತು ಪ್ರದರ್ಶನ ಮೈದಾನದ ಕೆಲಭಾಗ, ಎದುರಿನ ಜಾಗ, ಕರುಬಾರಹಳ್ಳಿ, ಗರಿಕೆಮಾಳದ ಆಸ್ತಿಗಳು ತಮ್ಮದಾಗಲಿವೆ ಎಂದು ಹೇಳಿದರು.

40 ವರ್ಷಗಳಿಂದ ಹೆಚ್ಚುವರಿಯಾಗಿ ಪಾವತಿಸಿದ್ದ ಆದಾಯ ಮತ್ತು ಸಂಪತ್ತು ತೆರಿಗೆಯ ಬಾಬ್ತು ಎಷ್ಟು ಹಣ ಬಂದಿದೆ ಎಂದು ಹೇಳಲು ಬಯಸುವುದಿಲ್ಲ. ಆದರೆ, ಹಲವಾರು ಲಕ್ಷ ರೂ. ಅನ್ನಬಹುದು.
– ಪ್ರಮೋದಾದೇವಿ ಒಡೆಯರ್‌, ಮೈಸೂರು ರಾಜವಂಶಸ್ಥೆ

ಶಾ ಅರಮನೆ ನೋಡಲು ಬಂದಿದ್ರು
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರದ್ದು ಸೌಹಾರ್ದದ ಭೇಟಿ. ತಮ್ಮೊಂದಿಗೆ ರಾಜಕೀಯ ವಿಷಯ ಚರ್ಚಿಸಿಲ್ಲ. ಅರಮನೆ ನೋಡಲು ಬಂದಿದ್ದರು ಎಂದು ಪ್ರಮೋದಾದೇವಿ ಒಡೆಯರ್‌ ಸ್ಪಷ್ಟಪಡಿಸಿದರು. ತನಗೆ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ಬರುವುದೂ ಇಲ್ಲ ಎಂದು ಹಿಂದಿನಿಂದಲೂ ಹೇಳುತ್ತಲೇ ಬಂದಿದ್ದೇನೆ. ಅಮಿತ್‌ ಶಾ ಚುನಾವಣೆ ವೇಳೆ ಅರಮನೆಗೆ ಭೇಟಿ ನೀಡಿದ್ದರಿಂದ ಈ ರೀತಿಯ ಸುದ್ದಿಗಳು ಹರಡಿದೆ ಅಷ್ಟೇ. ಯದುವೀರ್‌ಗೆ ಇಚ್ಛೆ ಇದ್ದರೆ ರಾಜಕೀಯಕ್ಕೆ ಹೋಗಬಹುದು. ಅದಕ್ಕೆ ನನ್ನ ಅನುಮತಿ ಬೇಕಿಲ್ಲ. ಆದರೆ, ಯದುವೀರ್‌ ಅವರೇ ನನಗೆ ರಾಜಕೀಯದಲ್ಲಿ ಆಸಕ್ತಿಯಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.