ಪ್ರಸಾದ್‌ ಪರ ಪುತ್ರಿ, ಅಳಿಯ ಮತಯಾಚನೆ


Team Udayavani, Apr 13, 2019, 3:00 AM IST

prasad

ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಪ್ರಸಾದ್‌ ಪರ ಅವರ ಅಳಿಯ, ನಂಜನಗೂಡು ಶಾಸಕ ಹರ್ಷವರ್ಧನ ಹಾಗೂ ಅವರ ಹಿರಿಯ ಪುತ್ರಿ ಪ್ರತಿಮಾ ಕ್ಷೇತ್ರದಲ್ಲಿ ಪ್ರತ್ಯೇಕವಾಗಿ ಮತಯಾಚಿಸಿದರು.

ಹರ್ಷವರ್ಧನ ಪ್ರಚಾರ: ವರುಣಾ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕಿನ ತಾಂಡವಪುರ, ಹದಿನಾರು , ಬಿಳಗೆರೆ ,ಸುತ್ತೂರು, ಹೊಸಕೋಟೆ ಸೇರಿದಂತೆ ವಿವಿಧ ಗ್ರಾಮಗಳಿಗೆ ಹರ್ಷವರ್ಧನ ತೆರಳಿ, ತಮ್ಮ ಮಾವ ಶ್ರೀನಿವಾಸ ಪ್ರಸಾದ್‌ಗೆ ಮತ ನೀಡುವಂತೆ ಮನವಿ ಮಾಡಿದರು.

ಕ್ಷೇತ್ರದಲ್ಲಿ ಐದು ಬಾರಿ ಸಂಸದರಾಗಿ, ಶಾಸಕರಾಗಿ, ಕೇಂದ್ರ ಹಾಗೂ ರಾಜ್ಯದಲ್ಲಿ ಮಂತ್ರಿಯಾಗಿದ್ದಾರೆ. ಕ್ಷೇತ್ರದಾದ್ಯಂತ ಚಿರ ಪರಿಚಿರತರಾಗಿರುವ ಪ್ರಸಾದರ ಪ್ರಾಮಾಣಿಕತೆ ಬೇರೆಯವರಿಗೆ ಮಾದರಿಯಾಗಿದೆ. ಅವರ ರಾಜಕೀಯ ಹಿರಿತನಕ್ಕೆ ಪ್ರಾಮಾಣಿಕತೆಗೆ ನೀವೆಲ್ಲ ಮತ ನೀಡಿ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಕಾಂಗ್ರೆಸ್‌ನಿಂದ ದಲಿತರಿಗೆ ಅನ್ಯಾಯವಾಗಿದೆ. ಮೊದಲು ಅಂಬೇಡ್ಕರ್‌ ನಂತರ ಬಸವಲಿಂಗಪ್ಪ, ಕೊನೆಗೆ ಶ್ರೀನಿವಾಸ ಪ್ರಸಾದ್‌ ಸೇರಿದಂತೆ ಎಲ್ಲಾ ದಲಿತರಿಗೂ ಕಾಂಗ್ರೆಸ್‌ ಅನ್ಯಾಯ ಹಾಗೂ ಅವಮಾನ ಮಾಡಿದೆ ಎಂದು ದೂರಿದರು.

ಆರ್‌.ಧ್ರುವನಾರಾಯಣ ಸ್ವಾರ್ಥ ಹಾಗೂ ಅವಕಾಶವಾದಿ ರಾಜಕಾರಣಿಯಾಗಿದ್ದಾರೆ. ಒಬ್ಬರ ಮೇಲೆ ಮತ್ತೂಬ್ಬರನ್ನು ಎತ್ತಿ ಕಟ್ಟುತ್ತಿದ್ದಾರೆ. ಅವರು ಎಂದಿಗೂ ದಲಿತರ ಪರ ನಿಂತಿಲ್ಲ, ನಿಲ್ಲುವುದೂ ಇಲ್ಲ. ಈ ಬಾರಿ ಮತದಾರರು ಅವರನ್ನು ಸೋಲಿಸಿ ಪ್ರಪ್ರಥಮ ಬಾರಿ ಕ್ಷೇತ್ರದಲ್ಲಿ ಕಮಲ ಅರಳಿಸಬೇಕು ಎಂದು ಕೋರಿದರು.

ಪುತ್ರಿ ಪ್ರತಿಮಾ ಪ್ರಚಾರ: ತಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸಪ್ರಸಾದ್‌ ಅವರ ಹಿರಿಯ ಪುತ್ರಿ ಪ್ರತಿಮಾ ಚುನಾವಣಾ ಪ್ರಚಾರ ನಡೆಸಿದರು. ಪ್ರತಿ ಮನೆ ಮನೆಗೂ ತೆರಳಿ ಮತಯಾಚಿಸಿದರು.

ಈ ವೇಳೆ ಮಾತನಾಡಿದ ಅವರು, 20 ವರ್ಷಗಳ ಬಳಿಕ ಲೋಕಸಭೆಗೆ ಸ್ಪರ್ಧಿಸಿರುವ ತಮ್ಮ ತಂದೆಯನ್ನು ಈ ಬಾರಿ ಸಂಸತ್‌ಗೆ ಕಳುಹಿಸಬೇಕು. ದೇಶಕ್ಕೆ ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕಿದ್ದು, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕಾಗಿ ಬಿಜೆಪಿ ಬೆಂಬಲಿಸಬೇಕು ಎಂದು ಕೋರಿದರು.

ಈ ವೇಳೆ ಮುಖಂಡರಾದ ಕಾಪು ಸಿದ್ಧಲಿಂಗಸ್ವಾಮಿ, ಜಿಪಂ ಸದಸ್ಯ ಗುರುಸ್ವಾಮಿ, ಸದಾನಂದ, ತಾಪಂ ಅಧ್ಯಕ್ಷ ಬಿ ಮಹದೇವಪ್ಪ, ವರುಣಾ ಕ್ಷೇತ್ರದ ಅಧ್ಯಕ್ಷ ಶಿವಯ್ಯ, ಮುಖಂಡರಾದ ಮಾಂಬಳ್ಳಿ ಮೂರ್ತಿ, ತಾಂಡವಪುರ ಸಂದೀಪ್‌, ಸುತ್ತೂರು ಚಿಕ್ಕಮಾದಪ್ಪ, ತಾಪಂ ಸದಸ್ಯ ಸತೀಶ್‌ ಇತರರಿದ್ದರು.

ಪ್ರಸಾದ್‌ ಕುಟುಂಬದಿಂದ ಮತಬೇಟೆ: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಶ್ರೀನಿವಾಸ್‌ ಪ್ರಸಾದ್‌ ಅವರ ನಾಲ್ಕು ದಶಕಗಳ ರಾಜಕೀಯವ ಜೀವನದಲ್ಲಿ ಎಂದಿಗೂ ಅವರ ಪುತ್ರಿಯರು ಹಾಗೂ ಸಂಬಂಧಿಕರು ಭಾಗಿಯಾಗಿರಲಿಲ್ಲ.

ಆದರೆ, ಈ ಬಾರಿ ಅವರ ಮೂವರು ಪುತ್ರಿಯರು, ಅಳಿಯಂದರು ಹಾಗೂ ಹತ್ತಿರದ ಸಂಬಂಧಿಕರು ಉರಿ ಬಿಸಿಲನ್ನು ಲೆಕ್ಕಿಸದೇ ಹಳ್ಳಿಗಳನ್ನು ಸುತ್ತುತ್ತಾ ಮತಬೇಟಿಗೆ ಇಳಿದಿದ್ದಾರೆ. ಪ್ರಸಾದ್‌ ಅಳಿಯ, ನಂಜನಗೂಡು ಶಾಸಕ ಹರ್ಷವರ್ಧನ್‌, ಮತ್ತೂಬ್ಬ ಅಳಿಯ ಡಾ|ಮೋಹನ್‌, ಹಿರಿಯ ಪುತ್ರಿ ಪ್ರತಿಮಾ ಸೇರಿದಂತೆ ಸಂಬಂಧಿಕರು ಕ್ಷೇತ್ರ ವ್ಯಾಪ್ತಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.