ಮದಕರಿ ನಾಯಕನಿಗೆ ವಿಷ ಹಾಕಿಕೊಂದ ಟಿಪ್ಪುಜಯಂತಿ ಮಾಡಿದ್ದು ಸಿದ್ದರಾಮಯ್ಯ ಸಾಧನೆ:ಪ್ರತಾಪ್ ಸಿಂಹ
Team Udayavani, Nov 11, 2021, 12:02 PM IST
ಮೈಸೂರು: ಬಸವರಾಜ ಬೊಮ್ಮಾಯಿಯವರು ಒನಕೆ ಓಬವ್ವ ಜಯಂತಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರೇ ನೀವು ಮಾಡಿದ್ದೇನು? ಓಬವ್ವನಂತಹ ವೀರ ವನಿತೆ ಮಹಿಳೆಯನ್ನು ಮೋಸದಿಂದ ಕೊಂದ ಹೈದರಾಲಿಯ ಮಗನ ಜಯಂತಿಯನ್ನ ನೀವು ಮಾಡಿದಿರಿ. ಮೈಸೂರು ಮಹಾರಾಜರಿಗೆ ಮೋಸ ಮಾಡಿದ ಟಿಪ್ಪುವಿನ ಜಯಂತಿ ನೀವು ಮಾಡಿದಿರಿ. ಮದಕರಿ ನಾಯಕನಿಗೆ ವಿಷ ಹಾಕಿ ಕೊಂದ ಟಿಪ್ಪು ಜಯಂತಿ ಮಾಡಿದ್ದು ನಿಮ್ಮ ಸಾಧನೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.
ನಿಮ್ಮಿಂದ ಬಸವರಾಜ ಬೊಮ್ಮಾಯಿ ಅವರು ಅಭಿವೃದ್ಧಿ ಪಾಠ ಕಲಿಯಬೇಕಾಗಿಲ್ಲ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಮ್ಮನ್ನೇ ಸೋಲಿಸಿದವರನ್ನು ನೀವೇ ಮನಸಾರೆ ಹಾಡಿ ಹೊಗಳುವ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು.
ಇದನ್ನೂ ಓದಿ:ಬಿಟ್ ಕಾಯಿನ್ ಪ್ರಕರಣ ಕಾಂಗ್ರೆಸ್ ಕೊರಳಿಗೆ ಸುತ್ತಿಕೊಳ್ಳುತ್ತಿದೆ: ಪ್ರತಾಪ್ ಸಿಂಹ
ಬೊಮ್ಮಾಯಿ ಅವರು ನೂರು ದಿನಗಳಲ್ಲಿ ಜನರ ಮನೆ ಮನ ತಲುಪಿದ್ದಾರೆ. ಉಪ ಚುನಾವಣೆಯಲ್ಲಿನ ಒಂದು ಸೋಲಿಗೆ ಬೇರೆ ಬೇರೆ ಕಾರಣ ಇರುತ್ತವೆ. ಅದು ರಾಜಕೀಯದ ಏಟು, ಒಳ ಏಟು, ತಂತ್ರ ಎಲ್ಲವೂ ಇರುತ್ತದೆ. ನಂಜನಗೂಡು ಗುಂಡ್ಲುಪೇಟೆಯಲ್ಲಿ ಗೆದ್ದ ಕಾಂಗ್ರೆಸ್, ಮುಂದಿನ ಚುನಾವಣೆಯಲ್ಲಿ ಏನಾಗಿತ್ತು ಎಂದು ಪ್ರಶ್ನಿಸಿದರು.
ಬೊಮ್ಮಾಯಿ ಅವರೇ 2023ರಲ್ಲೂ ಮುಖ್ಯಮಂತ್ರಿ ಆಗುವುದು ನಿಮಗೆ ಖಚಿತವಾಗಿದೆ. ಹಾಗಾಗಿ ಬೊಮ್ಮಾಯಿ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದೀರಿ. ಮೊದಲು ಈ ರೀತಿ ತಂತ್ರಗಾರಿಕೆಯನ್ನು ಮಾಡುವುದು ಮೊದಲು ಬಿಡಿ ಎಂದು ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ಹೇಳಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ