ಪಿಂಕ್ ನೋಟ್ ಹಂಚಿ ಗೆದ್ದು ಜಗದೇಕ ವೀರನೆಂದು ಸಿದ್ದರಾಮಯ್ಯ ಬೀಗುತ್ತಿದ್ದಾರೆ: ಪ್ರತಾಪ್ ಸಿಂಹ
Team Udayavani, Jun 17, 2022, 1:10 PM IST
ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯನವರು ಸೋಕ್ಕಿನ ಮಾತು ಬಿಡಬೇಕು. ದಕ್ಷಿಣ ಪದವೀಧರ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದಲ್ಲ. ಅದು ಮಧು ಜಿ. ಮಾದೇಗೌಡರ ವೈಯಕ್ತಿಕ ಗೆಲುವು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರು ತಿಂಗಳ ಹಿಂದೆಯೇ ಮಧು ಜಿ ಮಾದೇಗೌಡರನ್ನು ಅಭ್ಯರ್ಥಿಯೆಂದು ಘೋಷಣೆ ಮಾಡಲಾಗಿತ್ತು. ಅವರು ಸಂಸ್ಥೆ ನೌಕರರನ್ನು ಬಳಸಿಕೊಂಡು ಚೆನ್ನಾಗಿ ಕೆಲಸ ಮಾಡಿದರು. ಎಂಎಲ್ಸಿ ಮರಿತಿಬ್ಬೇಗೌಡ ಕಾಂಗ್ರೆಸ್ ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ್ದರ. ಇದೆಲ್ಲದರ ಪರಿಣಾಮ ಕಾಂಗ್ರೆಸ್ ಗೆದ್ದಿದೆ ಎಂದರು.
2016 ರಲ್ಲಿ ಇದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರವೀಂದ್ರ ತಗೆದುಕೊಂಡಿದ್ದು ಕೇವಲ ಆರು ಸಾವಿರ ಮತಗಳನ್ನು ಮಾತ್ರ. ನಂಜನಗೂಡು -ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಪಿಂಕ್ ನೋಟ್ ಹಂಚಿ ಗೆದ್ದು ನಾನೇ ಜಗದೇಕವೀರ ಎಂದು ಸಿದ್ದರಾಮಯ್ಯ ಬೀಗುತ್ತಿದ್ದಾರೆ ಎಂದು ಟೀಕಿಸಿದರು.
ಇದನ್ನೂ ಓದಿ:ಹುಬ್ಬಳ್ಳಿ: ರಾಹುಲ್ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ
ಚುನಾವಣೆಯೆಂದ ಮೇಲೆ ವ್ಯತ್ಯಾಸವಾಗುವುದು ಸಹಜ. ನನ್ನ ಅಣ್ಣನನ್ನು ಗೆಲ್ಲಿಸಲಾಗಲಿಲ್ಲವೆಂಬ ನೋವು ನನಗೂ ಇದೆ. ಎಲ್ಲಿ ತೊಂದರೆಯಾಗಿದೆ ಎಂದು ಸೋಲಿನ ಪರಾಮರ್ಶೆ ಮಾಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಇಡಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಅವರು, ನೀವು ತಪ್ಪು ಮಾಡಿಲ್ಲ ಎನ್ನುವುದಾದರೆ ಸುಮ್ಮನಿರಿ. ಕಾನೂನಿಗಿಂತ ನೀವು ದೊಡ್ಡವರೇ ಎಂದು ಕಾಂಗ್ರೆಸ್ ನಾಯಕರಿಗೆ ಪ್ರಶ್ನಿಸಿದರು.
ಗುಜರಾತ್ ಹತ್ಯಾಕಾಂಡ ಪ್ರಕರಣದಲ್ಲಿ ಮೋದಿಯವರ ಮೇಲೆ ಕೇಸ್ ಹಾಕಲಾಗಿತ್ತು. ಅಮಿತ್ ಶಾ ಅವರನ್ನು ಕಟಕಟೆಗೆ ತಂದು ನಿಲ್ಲಿಸಲಾಗಿತ್ತು. ಅವರೆಲ್ಲಾ ಕಾನೂನಾತ್ಮಕವಾಗಿ ವಿಚಾರಣೆ ಎದುರಿಸಿ ಹೊರಗೆ ಬಂದಿಲ್ಲವೇ. ತಾಯಿ- ಮಗ (ಸೋನಿಯಾ- ರಾಹುಲ್) ಇಬ್ಬರು ಸೇರಿ ಕೇವಲ 50 ಲಕ್ಷ ಕೊಟ್ಟು ಎರಡು ಸಾವಿರ ಕೋಟಿ ಲಪಟಾಯಿಸಲು ಪ್ರಯತ್ನ ಮಾಡಿದ್ದಾರೆ. ಈ ಸಂಬಂಧ ಇಡಿ ವಿಚಾರಣೆ ನಡೆಸುತ್ತಿದೆ. ಅವರು ತಪ್ಪು ಮಾಡಿಲ್ಲವೆಂದರೆ ವಿಚಾರಣೆ ಎದುರಿಸಿ ಹೊರ ಬರಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ