Mysore; ವಿಧಾನಸೌಧ ಮೇಲೆ ಮೈಕ್ ಇಟ್ಟು ಆಜಾನ್ ಕೂಗಿದರೂ ಆಶ್ಚರ್ಯವಿಲ್ಲ: ಪ್ರತಾಪ್ ಸಿಂಹ
Team Udayavani, Mar 4, 2024, 4:06 PM IST
ಮೈಸೂರು: ಕಾಂಗ್ರೆಸ್ ಗೆ ವೋಟು ಹಾಕಿದರೆ ತಾಲಿಬಾನಿ ಸರ್ಕಾರ ಬರುತ್ತದೆಂದು ನಾನು 2023ರ ವಿಧಾನಸಭಾ ಚುನಾವಣೆ ಪ್ರಚಾರದಲ್ಲೇ ಹೇಳಿದ್ದೆ. ಇವತ್ತು ತಾಲಿಬಾನಿ ಸರ್ಕಾರ ನಡೆಯುತ್ತಿದೆ ಎಂಬುದಕ್ಕೆ ಬಹಳಷ್ಟು ಘಟನೆಗಳು ಸಾಕ್ಷಿಯಾಗಿದೆ. ವಿಧಾನಸೌಧದದೊಳಗೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮೊಳಗಿದೆಯೆಂದರೆ ಯಾರು ಅಧಿಕಾರ ಮಾಡುತ್ತಿದ್ದಾರೆನ್ನುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ ಮುಂದುವರೆದರೆ ವಿಧಾನಸೌಧ ಗೋಪುರದ ಮೇಲೆ ಮೈಕ್ ಇಟ್ಟು ಆಜಾನ್ ಕೂಗಿದರೂ ಆಶ್ಚರ್ಯವಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಹತ್ತು ವರ್ಷಗಳ ಕಾಲ ಸರಣಿ ಬಾಂಬ್ ಬ್ಲಾಸ್ಟ್ಗಳು ನಡೆದಿದ್ದವು. ಚಿನ್ನಸ್ವಾಮಿ ಸ್ಟೇಡಿಂ, ಲಿಂಬಿಣಿ ಗಾರ್ಡ್ನ್, ಜರ್ಮನ್ ಬೇಕರಿ, ಪೂಣೆ, ಮುಂಬೈ, ಡೆಲ್ಲಿ, ಸೂರತ್ ಈಗೆ ದೇಶಾದ್ಯಂತ ಸರಣಿ ಬಾಂಬ್ ಬ್ಲಾಸ್ಟ್ಗಳು ನಡೆಯುತ್ತಿದ್ದವು. ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಹಾಗಾಗಿ ಬಾಂಬ್ ಬ್ಲಾಸ್ಟ್ಗಳು ಪ್ರಾರಂಭವಾಗಿದೆ. ಇದು ಟ್ರೈಲರ್ ಮಾತ್ರವೇ, ಮುಂದೆ ಇನ್ನೂ ದುರ್ಘಟನೆಗಳು ಕಾದಿವೆ ಎಂದರು.
ಆದಷ್ಟು ಬೇಗ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನವನ್ನು ಬಿಜೆಪಿ ಜೆಡಿಎಸ್ ಮೈತ್ರಿಕೂಟಕ್ಕೆ ಕೊಟ್ಟು ಗೆಲ್ಲಿಸಿ. ಆ ಮೂಲಕ ಈ ಸರ್ಕಾರ ತೊಲಗಲು ಅವಕಾಶ ಮಾಡಿಕೊಟ್ಟರೆ ಕರ್ನಾಟಕ ಉಳಿಯುತ್ತದೆ, ಇಲ್ಲದಿದ್ದರೆ ಗಂಡಾಂತರ ಕಾದಿದೆ ಎಂದರು.
ಒಸಾಮಾ ಬಿನ್, ಮುಲ್ಲಾ ಉಮರ್ಜಾ ಅಂತಹವರು ಅಧಿಕಾರ ಮಾಡುವಾಗ ಬಾಂಬ್ ಹಾಕುವವರಿಗೆ ರಕ್ಷಣೆ ಕೊಡುತ್ತಾರೆ, ಹಿಡಿಯುವ ಕೆಲಸ ಮಾಡಲ್ಲ. ಇಷ್ಟೆಲ್ಲ ಆದರೂ ಎಫ್ಎಸ್ಎಲ್ ರಿಪೋರ್ಟ್ ಸೋಷಿಯಲ್ ಮೀಡಿಯಾದಲ್ಲಿ ತಿರುಚಿದ್ದಾರೆಂದು ಸಮರ್ಥಿಸಿಕೊಳ್ಳುವ ಅಗತ್ಯ ಏನಿದೆ. ಸಿದ್ದರಾಮಯ್ಯ ಅವರೆ, ನೀವು ಅವರ ಕೈ ಕಡಿದರೂ ಅವರು ನಿಮಗೆ ಮತ ಹಾಕುವುದು, ಮತ್ಯಾಕೆ ನೀವು ರಕ್ಷಣೆ ಮಾಡಲು ಹೊರಟಿದ್ದಿರಿ. ಇದೇ ರೀತಿ ಮುಂದುವರಿದರೆ ಕರ್ನಾಟಕ ಯಾವ ಸ್ಥಿತಿಗೆ ಬರುತ್ತದೆ ಯೋಚನೆ ಮಾಡಿ. ನಿಮ್ಮೆ ಹೇಳಿಕೆಗೆ ಸ್ವಾಗತವಿದೆ. ಅದನ್ನು ಕೃತಿಯಲ್ಲಿ ತೋರಿ ಎಂದು ಪ್ರತಾಪ್ ಸಿಂಹ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ