ದೋಚಿದ್ದ 5 ಕೋಟಿ ಮೌಲ್ಯದ ಸ್ವತ್ತು ಹಸ್ತಾಂತರ


Team Udayavani, Nov 30, 2021, 4:45 PM IST

ದೋಚಿದ್ದ 5 ಕೋಟಿ ಮೌಲ್ಯದ ಸ್ವತ್ತು ಹಸ್ತಾಂತರ

ಮೈಸೂರು: ಕಳೆದ ಒಂದು ವರ್ಷದ ಅವಧಿಯಲ್ಲಿ ನಡೆದಿದ್ದ ದರೋಡೆ, ಸುಲಿಗೆ, ಮನೆ ಕಳವು, ವಾಹನ ಕಳವು ಪ್ರಕರಣ ಭೇದಿಸಿರುವ ಮೈಸೂರು ನಗರ ಪೊಲೀಸರು 5.06 ಕೋಟಿ ರೂ. ಮೌಲ್ಯದ ವಸ್ತುಗ ಳನ್ನು ವಶಕ್ಕೆ ಪಡೆದು ಮಾಲಿಕರಿಗೆ ಹಸ್ತಾಂತರಿಸಿದರು. ನಗರ ಪೊಲೀಸ್‌ ಆಯುಕ್ತರ ಕಚೇರಿ ಆವರಣದಲ್ಲಿ ಸೋಮವಾರ ನಡೆದ ಕಳವು ಮಾಲು ಪ್ರದರ್ಶನ ಕಾರ್ಯಕ್ರಮದಲ್ಲಿ ವಿವಿಧ ಪ್ರಕರಣಗಳಲ್ಲಿ ತಮ್ಮ ವಸ್ತು ಗಳನ್ನು ಕಳೆದುಕೊಂಡಿದ್ದ ವಸ್ತುಗಳನ್ನು ವಾರಸು ದಾರರಿಗೆ ಒಪ್ಪಿಸಲಾಯಿತು.

2020 ರ ನವಂಬರ್‌ನಿಂದ 2021 ರ ನವೆಂಬರ್‌ ವರೆಗೆ ಮೈಸೂರು ನಗರದಲ್ಲಿ ನಡೆದ 676 ಪ್ರಕರಣ ಗಳಲ್ಲಿ ಬರೋಬ್ಬರಿ 374 ಪ್ರಕರಣಗಳನ್ನು ನೆರೆ ಜಿಲ್ಲೆ, ನೆರೆ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸುವ ಮೂಲಕ ಪತ್ತೆ ಮಾಡಿದ ಪೊಲೀಸರು, ಕಳವಾಗಿದ್ದ 5.06 ಕೋಟಿ ರೂ. ಮೌಲ್ಯದ ನಗದು, ಚಿನ್ನಾಭರಣ ಮತ್ತು ವಸ್ತು ಗಳನ್ನು ವಶಪಡಿಸಿಕೊಂಡಿದ್ದರು.

ಬಳಿಕ ಕಳುವಾದ ಸ್ವತ್ತನ್ನು ವಾರಸುದಾರರಿಗೆ ನಗರ ಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ ಒಪ್ಪಿಸಿದರು. ಬಳಿಕ ಮಾತನಾಡಿದ ಅವರು, ಕೊರೊನಾಂತಕದ ನಡುವೆ ಮೈಸೂರು ನಗರ ಪೊಲೀಸರು, ನಗರದಲ್ಲಿ ನಡೆದ ಕಳ್ಳತನ ಪ್ರಕರಣಗಳನ್ನು ಬೇಧಿಸುವಲ್ಲಿ ಹಗಲು ರಾತ್ರಿ ಶ್ರಮಿಸಿದ್ದಾರೆ. ಅಲ್ಲದೇ ಕಳ್ಳರನ್ನು ಹಿಡಿಯುವ ಆತುರದಲ್ಲಿ ತಾವೇ ಕೋವಿಡ್‌ ಸೋಂಕಿಗೆ ತುತ್ತಾಗಿ, ಗುಣಮುಖರಾಗಿದ್ದಾರೆ ಎಂದು ತಿಳಿಸಿದರು.

ಮೈಸೂರು ನಗರದ ವಿವಿಧ ಭಾಗಗಳಲ್ಲಿ ಒಂದು ವರ್ಷದ ಅವಧಿಯಲ್ಲಿ ನಡೆದಿದ್ದ 04 ದರೋಡೆ, 17 ಸುಲಿಗೆ, 34 ಸರಗಳ್ಳತನ, 47 ಕನ್ನಕಳುವು, 09 ಮನೆಕಳವು, 05 ಕೆಲಸದವರಿಂದ ಕಳ್ಳತನ, 212 ವಾಹನ ಕಳವು, 35 ಸಾಮಾನ್ಯ ಕಳವು, 06 ಜಾನುವಾರು ಕಳುವು ಪ್ರಕರಣ ಸೇರಿ 676 ಪ್ರಕರಣ ದಾಖಲಾಗಿದ್ದು, 7.34 ಕೋಟಿ ರೂ ಮೌಲ್ಯದ ಆಸ್ತಿ, ವಸ್ತುಗಳು ಕಳುವಾಗಿದ್ದವು.

ಇದನ್ನೂ ಓದಿ;- ಜವಾಬ್ದಾರಿ ಅರಿತು ಮತ ಚಲಾಯಿಸಿ

ಇದರಲ್ಲಿ 374 ಪ್ರಕರಣ ಪತ್ತೆಯಾಗಿದ್ದು, 5.06 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿ ಕೊಂಡು ವಾರಸುದಾರರಿಗೆ ಹಿಂದಿರುಗಿಸಲಾಗಿದೆ. ಈ ಎಲ್ಲಾ ಪ್ರಕರಣಗಳಲ್ಲಿ 301 ಮಂದಿಯನ್ನು ಬಂಧಿಸ ಲಾಗಿದೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಡಿಸಿಪಿಗಳಾದ ಪ್ರದೀಪ್‌ ಗುಂಟಿ, ಗೀತಾ ಪ್ರಸನ್ನ ಉಪಸ್ಥಿತರಿದ್ದರು.

“ಪತ್ತೆಯಾಗಿರುವ ಪ್ರಕರಣಗಳಲ್ಲಿ ಬೇರೆ ರಾಜ್ಯ, ಜಿಲ್ಲೆಯ ಅಪರಾಧಿಗಳಿದ್ದಾರೆ. ಅವರ ಮೇಲೆ ನಿಗಾ ಇಡಲಾಗಿದ್ದು, ಮುಂದಿನ ದಿನಗಳಲ್ಲಿ ಅಪರಾಧ ಘಟಿಸದಂತೆ ಎಚ್ಚರಿಕೆ ವಹಿಸಲಾಗಿದೆ. ಡಿಸೆಂಬರ್‌ನಲ್ಲಿ ಅಪರಾಧ ತಡೆ ಮಾಸಾಚರಣೆ ಇದ್ದು, ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತೇವೆ.” ಡಾ.ಚಂದ್ರಗುಪ್ತ, ನಗರ ಪೊಲೀಸ್‌ ಆಯುಕ್ತ.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.