ರಾಸಾಯನಿಕ ಬಳಸದೆ ಶುದ್ಧ ಅಡುಗೆ ಎಣ್ಣೆ ತಯಾರಿಕೆ; ಆದಿವಾಸಿ ಮಹಿಳೆಯರ ಸಾಧನೆ

ರಾಸಾಯನಿಕ ಬಳಕೆ ಮಾಡದೇ ಅಡುಗೆ ಎಣ್ಣೆ ತಯಾರಿಸುತ್ತಿರುವುದು ಇಲ್ಲಿನ ವಿಶೇಷ

Team Udayavani, Nov 25, 2022, 3:50 PM IST

ರಾಸಾಯನಿಕ ಬಳಸದೆ ಶುದ್ಧ ಅಡುಗೆ ಎಣ್ಣೆ ತಯಾರಿಕೆ; ಆದಿವಾಸಿ ಮಹಿಳೆಯರ ಸಾಧನೆ

ಎಚ್‌.ಡಿ.ಕೋಟೆ: ತಾಲೂಕಿನ ಮಂಜೇಗೌಡನಹಳ್ಳಿ ಹಾಡಿಯಲ್ಲಿ ರಾಸಾಯನಿಕ ಬಳಕೆ ಮಾಡದೆ ಶುದ್ಧ ಅಡುಗೆ ಎಣ್ಣೆ ತಯಾರಿಕೆ ಘಟಕ ಆರಂಭಿಸಿದ ಆದಿವಾಸಿ ಮಹಿಳೆ ಯರು, ಶುದ್ಧ ತಾಜಾ ಅಡುಗೆ ಎಣ್ಣೆ ತಯಾರಿಸಿ ಮಾರಾಟ ಮಾಡುವ ಮೂಲಕ ತಾಲೂಕಿನಲ್ಲಿ ಹೆಸರಾಗಿದ್ದಾರೆ.

ತಾಲೂಕಿನ ಅಂತರಸಂತೆ ಹೋಬಳಿಯ ಮಂಚೇಗೌಡನಹಳ್ಳಿ ಹಾಡಿ ಆದಿವಾಸಿಗರೇ ವಾಸವಾಗಿರುವ ಹಾಡಿ. ಇಲ್ಲಿ ಮಹಿಳೆಯರು ಉದ್ಯೋಗ ಇಲ್ಲದೆ ಜೀವನೋಪಾಯಕ್ಕಾಗಿ ಕೂಲಿ ಕೆಲಸಕ್ಕಾಗಿ ನೆರೆಯ ಕೊಡಗು, ಕೇರಳ ರಾಜ್ಯಗಳಿಗೆ ಗುಳೆ ಹೋಗಬೇಕಾದ ಅನಿವಾರ್ಯತೆ ಇತ್ತು. ಜೀವನೋಪಾಯಕ್ಕಾಗಿ ಗುಳೆ ಹೋದರೆ ಮಕ್ಕಳು ಕೂಡ ಶಿಕ್ಷಣದಿಂದ ವಂಚಿತರಾಗ ಬೇಕಾದ ಸ್ಥಿತಿ ತಲೆದೂರಿತ್ತು.

ಆದಿವಾಸಿಗರ ಭವಣೆ ಅರಿತ ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ಮೆಂಟ್‌ ಸಂಸ್ಥೆ ಹಾಡಿ ಮಹಿಳೆಯರೊಂದಿಗೆ ಚರ್ಚಿಸಿ ಹಾಡಿಯಲ್ಲಿಯೇ ಅಡುಗೆ ಎಣ್ಣೆ ತಯಾರಿಕೆ ಘಟಕ ಆರಂಭಿಸಿಕೊಟ್ಟರೆ ಅಡುಗೆ ಎಣ್ಣೆ ತಯಾರಿಕೆ ಕೆಲಸ ಮಾಡುವ ಹಂಬಲ ಇರುವುದನ್ನು ಖಚಿತ ಪಡಿಸಿಕೊಂಡಿದ್ದಾರೆ. ಸ್ವಾಮಿ ವಿವೇಕಾನಂದ ಸಂಸ್ಥೆ ಸಹಕಾರ: ಸ್ವಾಮಿ ವಿವೇಕಾನಂದ ಸಂಸ್ಥೆ ಸ್ವಂತ ಬಂಡವಾಳ ಹೂಡಿ ಅಡುಗೆ ಎಣ್ಣೆ ತಯಾರಿಕಾ ಘಟಕ ಆರಂಭಿಸಿಯೇ ಬಿಟ್ಟರು.

ಅಡುಗೆ ಎಣ್ಣೆ ತಯಾರಿಕೆ ಘಟಕದಲ್ಲಿ 9 ಮಂದಿ ಮಹಿಳೆಯರಿಗೆ ಉದ್ಯೋವನ್ನೂ ನೀಡಿದ್ದಾರೆ. ಅಡುಗೆ ಎಣ್ಣೆ ತಯಾರಿಕೆಗೆ ಬೇಕಾದ ಕಚ್ಚಾ ಸಾಮಗ್ರಿಗಳನ್ನು ಸಂಸ್ಥೆಯೇ ಭರಿಸಿಕೊಡುತ್ತಿದೆ. ಆದಿವಾಸಿ ಮಹಿಳೆಯರು ಶ್ರಮದ ಮೂಲಕ ಶುದ್ಧ ಅಡುಗೆ ಎಣ್ಣೆ ತಯಾರಿ ಮಾಡುತ್ತಿದ್ದಾರೆ. ಅವರಿಗೆ ದಿನದ ವೇತನ ನೀಡುವ ಸಂಸ್ಥೆ ಘಟಕದಿಂದ ಗಳಿಸುವ ಆದಾಯ ಮತ್ತು ನಷ್ಟದ ಹೊಣೆ ತಾನೇ ಹೊರಲಿದೆ.

ಮಾರಾಟದ ಅಂಗಡಿ ಆರಂಭ: ಕಲಬೆರಕೆ ಅಡುಗೆ ಎಣ್ಣೆ ಸೇವಿಸಿ ಆರೋಗ್ಯ ಕೆಡಿಸಿಕೊಂಡು ಆಸ್ಪತ್ರೆ ಸೇರಿ ಹಣ ವ್ಯಯ ಮಾಡಿಕೊಳ್ಳುವ ಬದಲು ಕೊಂಚ ದುಬಾರಿ ಬೆಲೆ ನೀಡಿದರೂ ಗುಣಮಟ್ಟದ ರಾಸಾಯನಿಕ ಬಳಕೆ ಮಾಡದೇ ಅಡುಗೆ ಎಣ್ಣೆಗೆ ಜನರು ದಿನದಿಂದ ದಿನಕ್ಕೆ ಮುಗಿ ಬೀಳುತ್ತಿದ್ದಾರೆ. ಸದ್ಯದಲ್ಲಿ ಎಚ್‌.ಡಿ.ಕೋಟೆ ಪಟ್ಟಣದ ತಾಪಂ ಬಳಿಯಲ್ಲಿ ಶುದ್ಧ ಅಡುಗೆ ಎಣ್ಣೆ ಮಾರಾಟದ ಅಂಗಡಿ ಆರಂಭಿಸಿದ್ದು, ಮಂಚೇಗೌಡನಹಳ್ಳಿ ಅಡುಗೆ ಎಣ್ಣೆ ತಯಾರಿಕ ಘಟಕದ ಎಣ್ಣೆ ಲಭ್ಯವಿದ್ದು, ಅಗತ್ಯ ಇರುವವರು ಅಲ್ಲೇ ಖರೀದಿಸುವಂತೆ ಆದಿವಾಸಿ ಮಹಿಳೆಯರು ಮನವಿ ಮಾಡಿಕೊಂಡಿದ್ದಾರೆ.

ಎಣ್ಣೆಗೆ ವಿಶೇಷವಾದ ಬೇಡಿಕೆ
ಘಟಕದಲ್ಲಿ ಎಳ್ಳೆಣ್ಣೆ 350 ರೂ., ಕಡಲೆಕಾಯಿ ಎಣ್ಣೆ 350 ರೂ., ಸೂರ್ಯಕಾಂತಿ ಎಣ್ಣೆ 330 ರೂ. ಹಾಗೂ ಕೊಬ್ಬರಿ ಎಣ್ಣೆ 340 ರೂ. ತಯಾರಿ ಮಾಡಲಾಗುತ್ತಿದೆ. ಕಳೆದ ಸುಮಾರು 6 ತಿಂಗಳಿಂದ ಆರಂಭಗೊಂಡಿರುವ ಶುದ್ಧ ಅಡುಗೆ ತಯಾರಿ ಎಣ್ಣೆ ಘಟಕದ ಅಡುಗೆ ಎಣ್ಣೆಗೆ ವಿಶೇಷವಾದ ಬೇಡಿಕೆ ಇದೆ. ಯಾವುದೇ ರಾಸಾಯನಿಕ ಬಳಕೆ ಮಾಡದೇ ಅಡುಗೆ ಎಣ್ಣೆ ತಯಾರಿಸುತ್ತಿರುವುದು ಇಲ್ಲಿನ ವಿಶೇಷ. ಈಗಾಗಲೇ ತಾಲೂಕಿನ ವಿವಿಧ ಭಾಗಗಳಿಂದ ಆರೋಗ್ಯದ ಹಿತದೃಷ್ಟಿಯಿಂದ ಅಡುಗೆ ಎಣ್ಣೆ ಖರೀದಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಇತ್ತೀಚಿನ ವರ್ಷಗಳಲ್ಲಿ ಎಲ್ಲಿ ನೋಡಿದರಲ್ಲಿ ರಾಸಾಯನಿಕ ಮಿಶ್ರಿತ ಆಹಾರ ಮಾರಾಟ ಮತ್ತು ಸೇವನೆಯಾಗುತ್ತಿದೆ. ಇದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದ್ದು ಸಾವು ನೋವಿನ ಪ್ರಮಾಣ ಏರಿಕೆ ಜೊತೆಗೆ ಹೃದಯಾಘಾತ, ದೇಹದಲ್ಲಿ ಕೊಬ್ಬಿನ ಅಂಶ ಹೆಚ್ಚಾಗುವ ಮೂಲಕ ಆರೋಗ್ಯ ಹಾಳಾಗುತ್ತಿದೆ. ಆರೋಗ್ಯದ ದೃಷ್ಟಿಯಿಂದ ರಾಸಾಯನಿಕ ಬಳಸದೇ ಅಡುಗೆ ಎಣ್ಣೆ ತಯಾರಿ ಮಾಡಿ ಮಾರಾಟ ಮಾಡಲಾಗುತ್ತಿದೆ.
●ಗುಲಾಬಿ, ಅಡುಗೆ ಎಣ್ಣೆ ಘಟಕದ ಮಹಿಳೆ

ಆಧುನಿಕ ಯುಗದಲ್ಲಿ ಎಲ್ಲೆಲ್ಲೂ ರಾಸಾಯನಿಕ ಬಳಕೆಯ ವಿಷಕಾರಿ ಆಹಾರ ಸೇವೆನೆ ಕಂಡೂ ಕಾಣದಂತೆ ನಡೆಯುತ್ತಿದೆ. ಇಂಥ ಪರಿಸ್ಥಿತಿಯಲ್ಲಿ ಆದಿವಾಸಿಗರಿರುವ ಹಾಡಿಯಲ್ಲಿ ಜನರ ಆರೋಗ್ಯದ ಸುಧಾರಣೆ ದೃಷ್ಟಿಯಿಂದ ಆರಂಭಗೊಂಡಿರುವ ಅಡುಗೆ ತಯಾರಿಕೆ ಘಟಕದಿಂದ ಗುಣಮಟ್ಟದ ಅಡುಗೆ ಎಣ್ಣೆ ತಾಲೂಕಿನ ಜನರಿಗಷ್ಟೇ ಅಲ್ಲದೆ ಜಿಲ್ಲೆ ರಾಜ್ಯಕ್ಕೆ ಹಂತಹಂತವಾಗಿ ವಿಸ್ತರಿಸಲಿ.
● ಸೆಂದಿಲ್‌ ಕುಮಾರ್‌,
ಹಿರಿಯ ವ್ಯವಸ್ಥಾಪಕ, ಕಬಿನಿ

ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.