ನಾಡಹಬ್ಬ ದಸರಾ ಉತ್ಸವಕ್ಕೆ ಭರದ ಸಿದ್ಧತೆ 


Team Udayavani, Aug 1, 2022, 5:12 PM IST

ನಾಡಹಬ್ಬ ದಸರಾ ಉತ್ಸವಕ್ಕೆ ಭರದ ಸಿದ್ಧತೆ 

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುನ್ನುಡಿ ಎಂದೇ ಬಿಂಬಿತ ವಾಗಿರುವ ಗಜ ಪಯಣಕ್ಕೆ ಜಿಲ್ಲಾಡಳಿ ಮತ್ತು ಅರಣ್ಯ ಇಲಾಖೆ ಸಕಲ ಸಿದ್ಧತೆ ಕೈಗೊಂಡಿದ್ದು, ಗಜಪಡೆಯನ್ನು ಅರಮನೆಗೆ ಕರೆತರಲು ಅರಣ್ಯ ಇಲಾಖೆ ಸಕಲ ಸಿದ್ಧತೆ ನಡೆಸಿದೆ.

ಆ.7 ರಂದು ಗಜಪಯಣ ನಡೆಯಲಿದ್ದು, ಮೊದಲ ತಂಡದಲ್ಲಿ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಮೈಸೂರಿಗ ಆಗಮಿಸಲಿವೆ. ಅಂಬಾರಿ ಆನೆ ಅಭಿಮನ್ಯು ಜತೆ ಅರ್ಜುನ, ಧನಂಜಯ, ಗೋಪಾಲಸ್ವಾಮಿ, ವಿಕ್ರಮ ಹಾಗೂ ಹೆಣ್ಣಾನೆಗಳಾದ ಕಾವೇರಿ,ಚೈತ್ರಾ, ಲಕ್ಷ್ಮೀ, ವಿಜಯ ಮೈಸೂರಿನ ಕಡೆ ಪ್ರಯಾಣ ಬೆಳೆಸುವ ನಿರೀಕ್ಷೆ ಇದೆ.

ವಿಶೇಷ ಎಂದರೆ ಸತತ 8 ಬಾರಿ ಚಿನ್ನದ ಅಂಬಾರಿ ಹೊತ್ತು ಗಮನ ಸೆಳೆದಿರುವ ಅರ್ಜುನ ಆನೆ ಈ ಬಾರಿ ದಸರಾ ಮಹೋತ್ಸವದಲ್ಲಿ ಮತ್ತೆಭಾಗವಹಿಸುವ ನಿರೀಕ್ಷೆ ಇದೆ. ಎರಡನೇ ತಂಡದಲ್ಲಿ 5 ಅಥವಾ 6 ಆನೆಗಳು ಬರಲಿವೆ. ಎರಡನೇ ತಂಡದಲ್ಲಿ ಹೊಸ ಆನೆಗಳಾದ ಗಣೇಶ, ಭೀಮ, ಸುಗ್ರೀವ, ಅಜಯ, ಮಹೇಂದ್ರ ಆನೆಗಳು ಬರುವ ಸಾಧ್ಯತೆ ಇದೆ.

ಆ.10ಕ್ಕೆ ಅರಮನೆ ಪ್ರವೇಶ: ಆ.7 ರಂದು ವೀರನಹೊಸಳ್ಳಿ ಗೆಟ್‌ ಬಳಿ ಗಜ ಪಯಣ ಕಾರ್ಯಕ್ರಮ ನಡೆಯಲಿದೆ. ಆನೆಗಳು ಅಲ್ಲಿಂದ ನೇರವಾಗಿ ಅಶೋಕಪುರಂನಲ್ಲಿನಅರಣ್ಯ ಭವನಕ್ಕೆ ಬಂದು ವಾಸ್ತವ್ಯ ಹೂಡಲಿವೆ. ಅಲ್ಲಿಂದ ಆ.10 ರಂದು ಅರಮನೆ ಪ್ರವೇಶಿಸಲಿವೆ.

42 ಶೆಡ್‌ಗಳ ನಿರ್ಮಾಣ: ಆ.10ರಂದು ಅರಮನೆ ಪ್ರವೇಶಿಸಲಿರುವ ಆನೆಗಳಿಗೆ ಮತ್ತು ಮಾವುತ,ಕಾವಾಡಿಗರ ಕುಟುಂಬ ಉಳಿದುಕೊಳ್ಳಲು ಅರಮನೆ ಆವರಣದಲ್ಲಿ ಶೆಡ್‌ ನಿರ್ಮಾಣ ಕಾರ್ಯ ಭರದಿಂದಸಾಗಿದೆ. ಎರಡು ವರ್ಷಗಳ ಬಳಿಕ ಅದ್ಧೂರಿ ದಸರಾ ಉತ್ಸವ ನಡೆಯುತ್ತಿರುವುದರಿಂದ ದಸರಾ ಆನೆಗಳೊಂದಿಗೆ ಮಾವುತ, ಕಾವಾಡಿಗರ ಪರಿವಾರವೇ ಮೈಸೂರಿಗೆಆಗಮಿಸುತ್ತಿದ್ದು, ಅವರು ಉಳಿದುಕೊಳ್ಳುವ ಸಲುವಾಗಿ42 ಶೆಡ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ಈ ಬಾರಿ 14 ಆನೆಗಳು ದಸರಾ ಉತ್ಸವದಲ್ಲಿ ಪಾಲ್ಗೊಳ್ಳು ತ್ತಿದ್ದು, 28 ಮಂದಿ ಮಾವುತರು ಮತ್ತುಕವಾಡಿಗರು ಮತ್ತು ಅವರ ಕುಟುಂಬ ಹಾಗೂ6 ಮಂದಿ ಹೆಚ್ಚುವರಿ ಮಾವುತರು, ಅಡುಗೆತಯಾರಕರು ಸೇರಿ 150ಕ್ಕೂ ಹೆಚ್ಚು ಮಂದಿ ಆನೆಗಳೊಂದಿಗೆ ಆಗಮಿಸಲಿದ್ದಾರೆ.

ಈಗಾಗಲೇ ಅರಮನೆ ಮಂಡಳಿ ವತಿಯಿಂದ ಆನೆಗಳು ಮತ್ತು ಮಾವುತರು ಉಳಿದುಕೊಳ್ಳುವ ಸ್ಥಳವನ್ನು ಸ್ವಚ್ಛಗೊಳಿಸಲಾಗಿದ್ದು, ಅರಣ್ಯ ಇಲಾಖೆಯಿಂದ ಶೆಡ್‌ನಿರ್ಮಾಣ ಕಾರ್ಯ ನಡೆಯುತ್ತಿದೆ. ಜತೆಗೆ ಆನೆಗಳಿಗೆವಿಶೇಷ ಆಹಾರ ತಯಾರು ಮಾಡುವ ಸ್ಥಳ ಮತ್ತು ಆಹಾರ ದಾಸ್ತನು ಕೊಠಡಿಗೆ ಸುಣ್ಣ ಬಳಿಯಲಾಗಿದೆ.

ಮೊದಲ ತಂಡದ ಆನೆಗಳಿವು :

ಮತ್ತಿಗೋಡು ಶಿಬಿರದಲ್ಲಿರುವ 57 ವರ್ಷದ ಅಂಬಾರಿ ಆನೆ ಅಭಿಮನ್ಯು, 39 ವರ್ಷದ ಗೋಪಾಲಸ್ವಾಮಿ, ಬಳ್ಳೆ ಆನೆ ಶಿಬಿರದ 62 ವರ್ಷದ ಅರ್ಜುನ, ದುಬಾರೆ ಆನೆ ಶಿಬಿರದಲ್ಲಿರುವ 59 ವರ್ಷದ ವಿಕ್ರಮ, 44ವರ್ಷದ ಧನಂಜಯ, 45 ವರ್ಷದ ಕಾವೇರಿ, ರಾಮಪುರ ಶಿಬಿರದಲ್ಲಿರುವ 49 ವರ್ಷದ ಚೈತ್ರಾ, 21 ವರ್ಷದ ಲಕ್ಷ್ಮೀ ಭಾಗವಹಿಸುವ ಸಾಧ್ಯತೆಗಳಿವೆ.

ಗಜಪಯಣಕ್ಕೆ ಮತ್ತು ಅರಮನೆಅಂಗಳದಲ್ಲಿ ಗಜಪಡೆಯ ವಾಸ್ತವ್ಯಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಈ ಬಾರಿದಸರಾ ಮಹೋತ್ಸವದಲ್ಲಿ 14 ಆನೆಗಳುಭಾಗಿಯಾಗಲಿವೆ. ಈ ಪೈಕಿ ಮೊದಲತಂಡದಲ್ಲಿ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದಲ್ಲಿ9 ಆನೆಗಳು ಆಗಮಿಸಲಿವೆ. ಸೆಪ್ಟೆಂಬರ್‌ಮೊದಲ ವಾರದಲ್ಲಿ ಎರಡನೇ ತಂಡದಲ್ಲಿ 5 ಆನೆಗಳನ್ನು ಕರೆ ತರಲಾಗುತ್ತದೆ. ಡಾ.ವಿ.ಕರಿಕಾಳನ್‌, ಡಿಸಿಎಫ್

ಸತೀಶ್‌ ದೇಪುರ

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.