ಅರಮನೆಯತ್ತ ದಸರಾ ಗಜಪಯಣಕ್ಕೆ ಸಿದ್ಧತೆ


Team Udayavani, Aug 31, 2018, 11:20 AM IST

m1-mysore.jpg

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಆರು ಆನೆಗಳ ಮೊದಲ ತಂಡ ಸೆ.2ರಂದು ಮೈಸೂರಿಗೆ ಆಗಮಿಸಲಿದೆ. ಭಾನುವಾರ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಟಾಗಿಲು ಹುಣಸೂರು ತಾಲೂಕು ವೀರನಹೊಸಹಳ್ಳಿ ಬಳಿಯಿಂದ ಮೊದಲ ತಂಡದಲ್ಲಿ ಬಳ್ಳೆ ಆನೆ ಶಿಬಿರದಿಂದ ಅರ್ಜುನ,

ಮತ್ತಿಗೋಡು ಆನೆ ಶಿಬಿರದಿಂದ ವರಲಕ್ಷ್ಮೀ, ದುಬಾರೆ ಆನೆ ಶಿಬಿರದಿಂದ ವಿಕ್ರಮ, ಧನಂಜಯ, ಗೋಪಿ, ಚೈತ್ರ ಆನೆಗಳನ್ನು ಸಾಂಪ್ರದಾಯಿಕ ಗಜಪಯಣ ಕಾರ್ಯಕ್ರಮದೊಂದಿಗೆ ಮೈಸೂರಿಗೆ ಕರೆತರಲಿದ್ದು, ಸೆ.3ರಂದು ಜಯಮಾರ್ತಾಂಡ ದ್ವಾರದಲ್ಲಿ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸುವ ಮೂಲಕ ಗಜಪಡೆಯನ್ನು ಅರಮನೆಗೆ ಬರಮಾಡಿಕೊಳ್ಳಲಾಗುತ್ತದೆ.

ಗಜಪಯಣಕ್ಕೆ ಭರದ ಸಿದ್ಧತೆ: ಆ.23ರಂದೇ ಗಜಪಯಣ ಕಾರ್ಯಕ್ರಮಕ್ಕೆ ನಿರ್ಧರಿಸಲಾಗಿತ್ತಾದರೂ ಕೊಡಗಿನಲ್ಲಿ ಉಂಟಾದ ಜಲಪ್ರವಾಹದಿಂದಾಗಿ ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ಗಜಪಯಣ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಮಂಗಳವಾರ ಮೈಸೂರಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸೆ.2ರಂದು ಗಜಪಯಣಕ್ಕೆ ದಿನಾಂಕ ನಿಗದಿಪಡಿಸಿದ್ದರಿಂದ ಸಿದ್ಧತೆಗಳು ಭರದಿಂದ ಸಾಗಿವೆ. 

ವೀರನಹೊಸಹಳ್ಳಿಯಿಂದ ಗಪಪಯಣ: ಈ ಹಿಂದೆ ಎಚ್‌.ವಿಶ್ವನಾಥ್‌, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಗಜಪಯಣಕ್ಕೆ ಚಾಲನೆ ನೀಡಲಾಗಿತ್ತು. ಈಗ ವಿಶ್ವನಾಥ್‌ ಅವರೇ ಹುಣಸೂರಿನ ಶಾಸಕರಾಗಿರುವುದರಿಂದ ಹೆಚ್ಚಿನ ಆಸಕ್ತಿವಹಿಸಿ, ನಾಗಾಪುರ ಗಿರಿಜನ ಆಶ್ರಮ ಶಾಲೆ ಬಳಿ ನಡೆಯುತ್ತಿದ್ದ ಗಜಪಯಣ ಕಾರ್ಯಕ್ರಮವನ್ನು ಮತ್ತೆ ವೀರನಹೊಸಹಳ್ಳಿ ಬಳಿಗೆ ಕೊಂಡೊಯ್ದಿದ್ದಾರೆ.

ಈ ವರ್ಷ ದಸರಾ ಮಹೋತ್ಸವದ ಜಂಬೂಸವಾರಿಗೆ ಆಯ್ಕೆ ಮಾಡಿರುವ 12 ಆನೆಗಳ ಪೈಕಿ ಅಂಬಾರಿ ಆನೆ ಅರ್ಜುನ ನೇತೃತ್ವದಲ್ಲಿ ಆರು ಆನೆಗಳು ಸೆ.2ರಂದು ಅರಮನೆ ನಗರಿಗೆ ಬರಲಿವೆ. ಆನೆಗಳ ಜೊತೆಗೆ ಆನೆಗಳ ಮಾವುತರು, ಕಾವಾಡಿಗಳು ಮತ್ತು ಅವರ ಕುಟುಂಬ ವರ್ಗ ಬಂದು ದಸರಾ ಮುಗಿಯುವವರೆಗೂ ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡುವುದರಿಂದ ಶೆಡ್‌ಗಳನ್ನು ನಿರ್ಮಿಸಲಾಗುತ್ತಿದೆ. ಜೊತೆಗೆ ಅವರ ಮಕ್ಕಳಿಗಾಗಿ ಟೆಂಟ್‌ ಶಾಲೆ, ಆರೋಗ್ಯ ಕೇಂದ್ರವನ್ನು ತೆರೆಯಲು ಸಿದ್ಧತೆ ನಡೆದಿದೆ. 

ಆನೆಗಳ ಬದಲು: ಮೊದಲ ತಂಡದಲ್ಲಿ ಅಭಿಮನ್ಯು, ವಿಜಯ, ದ್ರೋಣ ಆನೆಗಳನ್ನು ಕರೆತರಲು ಉದ್ದೇಶಿಸಲಾಗಿತ್ತಾದರೂ ಹುಣಸೂರು ತಾಲೂಕಿನ ಹನಗೋಡು ಬಳಿಯ ತರಗನ್‌ ಎಸ್ಟೇಟ್‌ನಲ್ಲಿ ಕಾಣಿಸಿಕೊಂಡಿರುವ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಗೆ ಈ ಆನೆಗಳನ್ನು ಬಳಸಿಕೊಂಡಿರುವುದರಿಂದ ದುಬಾರೆ ಆನೆ ಶಿಬಿರದಿಂದ ವಿಕ್ರಮ, ಧನಂಜಯ, ಗೋಪಿ ಆನೆಗಳನ್ನು ಕರೆತರಲಾಗುತ್ತಿದೆ. 

ದಸರಾ ಉನ್ನತಮಟ್ಟದ ಸಭೆ ತೀರ್ಮಾನದಂತೆ ಸೆ.2ರಂದು ಗಜಪಯಣ ಕಾರ್ಯಕ್ರಮಕ್ಕೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಬಳಿ ಸಿದ್ಧತೆ ನಡೆದಿದ್ದು, ಅರ್ಜುನ ಸೇರಿದಂತೆ ಆರು ಆನೆಗಳ ಮೊಲದ ತಂಡವನ್ನು ಸೆ.3ರಂದು ಅರಮನೆಗೆ ಬರಮಾಡಿಕೊಳ್ಳಲಾಗುವುದು.
-ಸಿದ್ರಾಮಪ್ಪ ಚಳಾಪುರೆ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಮೈಸೂರು

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

6-hunsur’

Hunsur: ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಆತ್ಮಹತ್ಯೆಗೆ ಶರಣು

Renukaswamy Case: ದರ್ಶನ್‌ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!

Renukaswamy Case: ದರ್ಶನ್‌ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆ‌ಬರ ಪತ್ತೆ

Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆ‌ಬರ ಪತ್ತೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.