ಹಣದ ಚಿಂತೆ ಬಿಟ್ಟು ಕುಂಭಮೇಳ ಸಿದ್ಧತೆ ನಡೆಸಿ


Team Udayavani, Feb 6, 2019, 7:28 AM IST

m5-hanada.jpg

ತಿ.ನರಸೀಪುರ: ಕುಂಭಮೇಳಕ್ಕೆ ಹಣಕಾಸಿನ ಕೊರತೆ ಇಲ್ಲದಿರುವುದರಿಂದ ಅಧಿಕಾರಿಗಳು ಆ ಬಗ್ಗೆ ಯೋಚಿಸದೇ ತ್ವರಿತವಾಗಿ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಅಧಿಕಾರಿಗಳಿಗೆ ಸೂಚಿಸಿದರು.

ತ್ರಿವೇಣಿ ಸಂಗಮ ತಿರುಮಕೂಡಲಿನಲ್ಲಿ ಫೆ.17ರಿಂದ 19ರವರೆಗೆ ನಡೆಯಲಿರುವ 11ನೇ ಕುಂಭಮೇಳದ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿ ನಂತರ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ನಡೆದ ಜನಪ್ರತಿನಿಧಿಗಳು ಹಾಗು ಜಿಲ್ಲಾ ಮಟ್ಟದ ಅಧಿ ಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಹಣಕ್ಕೆ ಕೊರತೆಯಿಲ್ಲ: ಮುಖ್ಯಮಂತ್ರಿ ಅಧ್ಯಕ್ಷತೆ ಯಲ್ಲಿ ಬೆಂಗಳೂರಿನಲ್ಲಿ ನಡೆದ ಕುಂಭಮೇಳ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮೇಳಕ್ಕೆ ಹಣದ ಕೊರತೆ ಇಲ್ಲ. ಅಧಿಕಾರಿಗಳು ತ್ವರಿತವಾಗಿ ಸಮಗ್ರ ವರದಿ ಸಲ್ಲಿಸಿದರೆ ಎಷ್ಟು ಬೇಕಾದರೂ ಹಣ ನೀಡಲು ಹಣಕಾಸು ಇಲಾಖೆ ಸಿದ್ಧವಿದೆ ಎಂದು ತಿಳಿಸಿರುವುದರಿಂದ ಅಧಿಕಾರಿಗಳು ಹಾಗು ಗುತ್ತಿಗೆದಾರರು ಯಾವುದೇ ಹಿಂದೇಟು ಹಾಕದೇ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು.

ಖುದ್ದು ಪರಿಶೀಲಿಸಿ: ಪವಿತ್ರ ಪುಣ್ಯಕ್ಷೇತ್ರ ತಿರುಮ ಕೂಡಲಿನಲ್ಲಿ ನಡೆಯುತ್ತಿರುವ ಕುಂಭಮೇಳದ ಕಾಮಗಾರಿಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಅಧೀನ ಅಧಿಕಾರಿಗಳನ್ನು ನಿಯೋಜಿಸದೆ ತಾವೇ ಖುದ್ದಾಗಿ ಪರಿಶೀಲಿಸಬೇಕು. ತಿರುಮ ಕೂಡಲಿನ ಹಾಸುಪಾಸಿನಲ್ಲಿರುವ ಎಲ್ಲಾ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚುವ ಕೆಲಸಕ್ಕೆ ಅಧಿಕಾರಿಗಳು ಮುಂದಾಗದೆ ಡಾಂಬರು ಹಾಕಬೇಕು. ಕಾವೇರಿ ಕಪಿಲ ಸೇತುವೆ ಮೇಲೆ ಬೆಳೆದಿರುವ ಗಿಡಗಂಟಿ ಗಳನ್ನು ತೆರವುಗೊಳಿಸಿ, ಅಂದವಾಗಿ ಕಾಣುವಂತೆ ಮಾಡಬೇಕು ಎಂದು ತಾಕೀತು ಮಾಡಿದರು.

ತಾತ್ಕಾಲಿಕ ಸೇತುವೆ ನಿರ್ಮಿಸಿ: ಪಟ್ಟಣದ ಗುಂಜಾ ನರಸಿಂಹಸ್ವಾಮಿ ದೇವಸ್ಥಾನದಿಂದ ಕುಂಭಮೇಳ ನಡೆಯುವ ಯಾಗಮಂಟಪದವರೆಗೆ ಕಪಿಲಾ ನದಿಗೆ ಅಡ್ಡಲಾಗಿ ತಾತ್ಕಾಲಿಕ ಸೇತುವೆ ನಿರ್ಮಿಸ ಬೇಕು. ಮೇಳಕ್ಕೆ ಸಮಯಾವಕಾಶ ಕಡಿಮೆ ಇರುವುದರಿಂದ 15ರೊಳಗೆ ಕೃತಕ ಸೇತುವೆ ನಿರ್ಮಿಸಲು ಅಪರ ಜಿಲ್ಲಾಧಿಕಾರಿ ಅರ್ಚನಾಗೆ ಸೂಚಿಸಿದರು.

ಸೇತುವೆ ಅಗಲೀಕರಣ: ಕುಂಭಮೇಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವುದರಿಂದ ಯಾಗ ಮಂಟಪ ಹಾಗೂ ಧಾರ್ಮಿಕ ಸಭೆ ನಡೆಯುವ ಸ್ಥಳಕ್ಕೆ ಈಗ ನಿರ್ಮಿಸಿರುವ ಮರಳು ಮೂಟೆ ಸೇತುವೆ ತುಂಬಾ ಕಿರಿದಾಗಿದ್ದು, ಕೂಡಲೇ ಅದರ ಅಗಲೀಕರಣವಾಗಬೇಕು. ಅಲ್ಲದೇ ಕಾವೇರಿ ನದಿಯ ಮಧ್ಯಭಾಗದಲ್ಲಿರುವ ರುದ್ರಪಾದಕ್ಕೂ ರಸ್ತೆ ಸಂಪರ್ಕ ಕಲ್ಪಿಸಿ ಭಕ್ತಾದಿಗಳಿಗೆ ದರ್ಶನ ಸಿಗುವಂತೆ ಮಾಡಬೇಕು ಎಂದು ತಿಳಿಸಿದರು.

ದಸರಾ ಮಾದರಿ ದೀಪಾಲಂಕಾರ: ವಿದ್ಯುತ್‌ ಇಲಾಖೆಯವರು ಕುಂಭಮೇಳದಲ್ಲಿ ಪ್ರಮುಖ ಅಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರ ವನ್ನು ದಸರಾ ಮಾದರಿ ಅಳವಡಿಸಿ ಸಾರ್ವಜನಿಕರ ಗಮನ ಸೆಳೆಯುವಂತೆ ಮಾಡಬೇಕು. ದೀಪಾಲಂ ಕಾರ ನೋಡಲೆಂದೇ ಜನ ಬರುವಂತಾಗಬೇಕು ಎಂದರು.

ಉಚಿತ ಬಸ್‌ ವ್ಯವಸ್ಥೆ: ಸಾರಿಗೆ ಇಲಾಖೆಯವರು ಕುಂಭಮೇಳಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಹೆಚ್ಚಿನ ಸಾರಿಗೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದ ಸಚಿವರು, ಪಾರ್ಕಿಂಗ್‌ ಸ್ಥಳದಿಂದ ಮೇಳ ನಡೆಯುವ ಜಾಗಕ್ಕೆ ಹಾಗೂ ಪಟ್ಟಣದ 5 ಕಿ.ಮೀ. ವ್ಯಾಪ್ತಿಯಲ್ಲಿ ಉಚಿತವಾಗಿ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.

ಮೇಳಕ್ಕೆ ಬಿಗಿ ಬಂದೋಬಸ್ತ್: ಎಎಸ್ಪಿ ಪಿ.ಸ್ನೇಹ ಮಾತನಾಡಿ, ಕುಂಭ ಮೇಳಕ್ಕೆ ಬಂದೋಬಸ್ತ್ಗಾಗಿ 1,100 ಪುರುಷ ಹಾಗೂ 300 ಮಹಿಳಾ ಪೊಲೀಸ್‌ ಪೇದೆ ನಿಯೋಜಿಸಲಾಗುತ್ತಿದ್ದು, ಮೂರು ಔಟ್ ಪೋಸ್ಟ್‌ ತೆರೆಯಲಾಗುತ್ತಿದೆ. ಅಗತ್ಯ ಬಿದ್ದಕಡೆ ಸಿಸಿ ಕ್ಯಾಮರಾ ಅಳವಡಿಸಲಾಗುವುದು ಎಂದರು. ಇದಕ್ಕೆ ಮೊದಲು ಸಚಿವರು ಅಧಿಕಾರಿಗಳ ತಂಡದೊಂದಿಗೆ ಗುಂಜಾನರಸಿಂಹಸ್ವಾಮಿ, ಅಗಸ್ತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಈ ನಡುವೆ, ಕುಂಭಮೇಳದ ಪ್ರಚಾರದ ಪೋಸ್ಟರ್‌ಗಳನ್ನು ಸಚಿವ ಜಿ.ಟಿ. ದೇವೇಗೌಡ ಬಿಡುಗಡೆಗೊಳಿಸಿದರು. ಈ ವೇಳೆ ಶಾಸಕರಾದ ಎಂ.ಅಶ್ವಿ‌ನ್‌ ಕುಮಾರ್‌, ಯತೀಂದ್ರ ಸಿದ್ದರಾಮಯ್ಯ, ಜಿಪಂ ಸದಸ್ಯರಾದ ಟಿ.ಎಚ್.ಮಂಜುನಾಥ್‌, ಜೈಪಾಲ್‌ ಭರಣಿ, ತಾಲೂಕು ಪಂಚಾಯಿತಿ ಅಧ್ಯಕ್ಷ ಚೆಲುವರಾಜು, ಮುಖಂಡರಾದ ಪಿ. ಸ್ವಾಮಿನಾಥ್‌ಗೌಡ,

ಬಿ. ಮರಯ್ಯ, ಆಲಗೂಡು ನಾಗರಾಜು, ಹುಣಸೂರು ಬಸವಣ್ಣ, ಬೇವಿನಹಳ್ಳಿ ಸತೀಶ್‌, ಹೆುಮಿಗೆ ಹೊನ್ನನಾಯಕ, ಬೂದಹಳ್ಳಿ ಸಿದ್ದರಾಜು, ತಾಪಂ ಸದಸ್ಯ ಕೆ.ಎಸ್‌. ಗಣೇಶ್‌, ಎಂ.ರಮೇಶ್‌, ರಾಮಲಿಂಗು, ಪುರಸಭೆ ಸದಸ್ಯರಾದ ಬಾದಾಮಿ ಮಂಜು, ಕಿರಣ್‌, ಟಿ.ಎಂ. ನಂಜುಂಡಸ್ವಾಮಿ, ನಾಗರಾಜು ಇತರರಿದ್ದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.